ರಾಯಚೂರು | ಮನುವಾದ, ಫ್ಯಾಸಿಸ್ಟ್ ವಿರುದ್ಧ ಜ.1ರಂದು ಪ್ರತಿಭಟನೆ

Date:

Advertisements

ದೇಶದ ಸಂವಿಧಾನವನ್ನು ಧಿಕ್ಕರಿಸಿ, ಬಹುರಾಷ್ಟ್ರೀಯ, ಬಹು ಧರ್ಮೀಯ, ಬಹುಜನಾಂಗೀಯ, ಬಹುಭಾಷಿಕ, ಸಂಸ್ಕೃತಿಯ ದೇಶವನ್ನು ಹಿಂದೂ ರಾಷ್ಟ ಮಾಡಲು ಹೊರಟಿರುವ ಸಂಘ ಪರಿವಾರದ ಮನುವಾದಿ ಸರ್ಕಾರ ಫಾಸಿಸ್ಟ್ ಮನೋಭಾವನ್ನು ಹಿಮ್ಮೆಟ್ಟಿಸಲು ಮನುವಾದಿ ಫ್ಯಾಸಿಸ್ಟ್ ವಿರೋಧಿ ಜನತಾ ರಂಗ ಅಸ್ತಿತ್ವಕ್ಕೆ ತರಲಾಗಿದ್ದು, ಜನವರಿ 1ರಂದು ರಾಯಚೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಂಘಟನೆ ಸಂಚಾಲಕ ಎಂ ಆರ್ ಭೇರಿ ಹೇಳಿದರು.

ರಾಯಚೂರು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಒಂದು ಭಾಷೆ ಹೆಸರಿನಲ್ಲಿ ಬಹುಸಂಸ್ಕೃತಿ, ಸಂಸ್ಕತಿ ಹಾಗೂ ಭಾಷೆಯ ಮೇಲೆ ದಾಳಿ ನಡೆಸಲಾಗುತ್ತಿದೆ. ಸರ್ಕಾರಿ ನೌಕರರು ಆರ್‌ಎಸ್‌ಎಸ್ ಸದಸ್ಯತ್ವ ಪಡೆಯಲು ಇರುವ ನಿರ್ಬಂಧವನ್ನು ರದ್ದುಗೊಳಿಸಿ ಕೇವಲ ಆರ್‌ಎಸ್‌ಎಸ್ ಸೇರ್ಪಡೆಗೆ ಅವಕಾಶ ನೀಡಲಾಗಿದೆ” ಎಂದು ಹೇಳಿದರು.

“ದೇಶದಲ್ಲಿ 50 ಕೋಟಿಗೂ ಹೆಚ್ಚಾಗಿರುವ ಕಾರ್ಮಿಕರನ್ನು ರಕ್ಷಿಸುವ ಬದಲು ಕಾರ್ಮಿಕ ಕಾಯ್ದೆಗಳನ್ನು ರದ್ದುಗೊಳಿಸಿ ನಾಲ್ಕು ಸಂಹಿತೆ ರೂಪಿಸಲಾಗಿದೆ. ದೇಶದ ಅರ್ಧದಷ್ಟು ಇರುವ ಮಹಿಳೆಯರ ಮೇಲೆ ನಿತ್ಯವೂ ದೌರ್ಜನ್ಯ, ಅತ್ಯಾಚಾರಗಳು ನಡೆದರೂ ಕೂಡಾ ತಡೆಯದೆ ನಿರ್ಲಕ್ಷಿಸುವುದ, ರೈತರ ಬೆಳೆಗೆ ಕನಿಷ್ಟ ಬೆಂಬಲ ಬೆಲೆ ಕಾಯ್ದೆ ರೂಪಿಸಿ ಜಾರಿಗೊಳಿಸಲು ಮೀನಾಮೇಷ ಎಣಿಸುತ್ತಿರುವ ಕೇಂದ್ರ ಸರ್ಕಾರ, ಬ್ರಾಹ್ಮಣವಾದಿ ಸರ್ಕಾರ” ಎಂದು ಖಂಡಿಸಿದರು.

Advertisements

“ಪ್ರಧಾನ ಮಂತ್ರಿ ಸೇರಿದಂತೆ ಅಧಿಕಾರಿಗಳು, ಸಂಸದರು, ಸಚಿವರು ಹಿಂದೂ ಮತೀಯ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಜಾತ್ಯತೀತ ನಿಲುವುಗಳಿಗೆ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ. ದಮನಿತ ಸಮುದಾಯಗಳ ವಿರೋಧಿಯಾಗಿ ನಡೆದುಕೊಳ್ಳುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಐಕ್ಯ ಹೋರಾಟ ನಡೆಸಲು ಎಲ್ಲ ಜೀವಪರ ಸಂಘಟನೆಗಳು ಒಗ್ಗೂಡಿ ಹೋರಾಟ ನಡೆಸಲಾಗುತ್ತದೆ” ಎಂದರು.

“ದೇಶದ ಆಸ್ತಿಯನ್ನು ಬಹುರಾಷ್ಟ್ರೀಯ ಕಂಪೆನಿಗಳ ಬಂಡವಾಳಶಾಹಿಗಳ ಕೈಗೆ ನೀಡಿ ಆಳುತ್ತಿದ್ದಾರೆ. ಧರ್ಮಾಧಾರಿತವಾದ ನಿಲುವುಗಳನ್ನು ಬೆಂಬಲಿಸುತ್ತ ಬರುತ್ತಿದೆ. ಒಂದು ಧರ್ಮವನ್ನು ಪ್ರತಿಪಾದಿಸಿ ಜಾತ್ಯತೀತ ನಿಲುವುಗಳಿಗೆ ವಿರೋಧಿಯಾಗಿ ವರ್ತಿಸುತ್ತಿದೆ. ಮನುವಾದ, ಜಾತಿವಾದವನ್ನು ಸನಾತನ ಸಂಸ್ಕೃತಿಯನ್ನು ಬೆಂಬಲಿಸಿ ಸಮಾನತೆ, ಮೀಸಲಾತಿ, ಆಹಾರ ಸಂಸ್ಕೃತಿಯ ಮೇಲೆ ನಿರಂತರವಾಗಿ ದಾಳಿ ನಡೆಸಲಾಗುತ್ತಿದೆ. ಒಂದು ದೇಶ ಒಂದು ಚುನಾವಣೆ ನಡೆಸಲು ಮುಂದಾಗಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಅಮಿತ್ ಶಾ ಹೇಳಿಕೆ ಖಂಡಿಸಿ ಡಿ.30ರಂದು ಕಂಪ್ಲಿ ಬಂದ್‌ಗೆ ಕರೆ

“ಜಿಲ್ಲೆಯ ಎಲ್ಲ ತಾಲೂಕುಗಳಿಂದಲೂ ವಿವಿಧ ಸಂಘಟನೆಗಳು ಭಾಗವಹಿಸಲಿವೆ. ಮುಂದಿನ ದಿನಗಳಲ್ಲಿ ಜಿಲ್ಲಾ ಮತ್ತು ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿಯೂ ಸಂಘಟನೆ ಬಲಗೊಳಿಸಿ ಹಿಂದುತ್ವ ಶಕ್ತಿಗಳ ವಿರುದ್ಧ ಹೋರಾಟ ರೂಪಿಸಲಾಗುತ್ತದೆ” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರವೀಂದ್ರನಾಥಪಟ್ಟಿ, ಜಿ ಅಮರೇಶ, ಎಂ ಗಂಗಾಧರ್, ಭಾಸ್ಕರ, ನಿರಂಜನ, ಷಣ್ಮುಖಪ್ಪ ಘಂಟಿ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X