ರಾಯಚೂರು | ಗ್ರಾಮೀಣ ಭಾಗಕ್ಕೆ ಮೂಲಭೂತ ಸೌಲಭ್ಯಕ್ಕೆ ಆಗ್ರಹಿಸಿ ಶಾಸಕರ ಮನೆ ಮುಂದೆ ಪ್ರತಿಭಟನೆ

Date:

Advertisements

ಗ್ರಾಮೀಣ ಭಾಗದ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗ್ರಾಮೀಣ ಕೂಲಿಕಾರರ ಸಂಘಟನೆಯಿಂದ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.

ರಾಯಚೂರು ತಾಲೂಕಿನ ಗ್ರಾಮಗಳಲ್ಲಿರುವ ಹಲವು ಸಮಸ್ಯೆಗಳ ಕುರಿತು ಅನೇಕ ಬಾರಿ ಮನವಿ ಪತ್ರಗಳನ್ನು ಸಲ್ಲಿಸಲಾಗಿದ್ದು, ಆದರೆ ಈವರೆಗೂ ಶಾಸಕರಿಂದಾಗಲಿ, ಸಂಬಂಧಪಟ್ಟ ಅಧಿಕಾರಿಗಳಿಂದಾಗಲಿ ಸಮಸ್ಯೆಗಳಿಗೆ ಸ್ಪಂದನೆ ಸಿಕ್ಕಿಲ್ಲ, ಕೂಡಲೇ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿದರು.

ವಿವಿಧ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕ ಕುಟುಂಬಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕು. ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, ಗ್ರಾಮಗಳಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯ ನಿರ್ವಹಿಸದೇ ಸ್ಥಗಿತವಾಗಿವೆ. ಜನರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಜೊತೆಗೆ ಗ್ರಾಮಗಳಲ್ಲಿ ರಸ್ತೆ ನಿರ್ಮಾಣ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ನಿರಾವರಿ ಸೌಲಭ್ಯವನ್ನು ಕಲ್ಪಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

Advertisements

ಈ ಸಂದರ್ಭದಲ್ಲಿ ಗುರುರಾಜ, ಹುಚ್ಚಮ್ಮ, ಮಾರೆಮ್ಮ, ಬಸವರಾಜ, ಹುಚ್ಚಪ್ಪ ಸೇರಿದಂತೆ ಇತರರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X