ರಾಯಚೂರು | ನೀರಿಗಾಗಿ ಹೆದ್ದಾರಿ ತಡೆದು ಪ್ರತಿಭಟನೆ

Date:

Advertisements

ರಾಯಚೂರಿನ ನಾರಾಯಣಪುರ ಬಲದಂಡೆ ಕಾಲುವೆಗೆ ಏಪ್ರಿಲ್ 20ರವರಗೆ ನೀರು ಹರಿಸಲು ಆಗ್ರಹಿಸಿ ದೇವದುರ್ಗ ತಾಲೂಕಿನ ಜಾಲಹಳ್ಳಿ ಪಟ್ಟಣದ ವ್ಯಾಪ್ತಿಯ ಅಮರಾಪುರ ಕ್ರಾಸ್ ಬಳಿ ಕರ್ನಾಟಕ ಪ್ರಾಂತ ರೈತ ಸಂಘ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿತು.

“ನಾರಾಯಣಪುರ ಬಲದಂಡೆ ಕಾಲುವೆ ವ್ಯಾಪ್ತಿಯಲ್ಲಿ ಸುಮಾರು 1 ಲಕ್ಷ 20 ಸಾವಿರ ಎಕರೆ ಪ್ರದೇಶದಲ್ಲಿ ರೈತರು ಬೆಳೆದಿರುವ ಭತ್ತ, ಮೆಣಸಿನಕಾಯಿ, ಶೇಂಗಾ, ಸಜ್ಜೆ ಸೇರಿ ಇನ್ನಿತರ ಬೆಳೆಗಳು ಕಟಾವಿಗೆ ಬರಲು ಒಂದುವರೆ ತಿಂಗಳು ಸಮಯ ಬೇಕಾಗಿದೆ. ಇನ್ನೂ ಕೆಲ ದಿನಗಳವರೆಗೆ ನೀರು ಹರಿಸದಿದ್ದರೆ ಬೆಳೆ ನಾಶವಾಗಿ ಕೈಗೆ ಬಂದೆ ತುತ್ತು ಬಾಯಿಗೆ ಬರದಂತಾಗುತ್ತದೆ. ಹಾಗಾಗಿ ಏಪ್ರಿಲ್‌ 20ರವರೆಗೆ ಕಾಲುವೆಗೆ ನೀರು ಹರಿಸಬೇಕು” ಎಂದು ಮನವಿ ಮಾಡಿದರು.

ನೀರಾವರಿ ಸಲಹಾ ಸಮಿತಿಯ ತೀರ್ಮಾನದಂತೆ ಮಾ. 23ಕ್ಕೆ ನೀರು ಸ್ಥಗಿತ ಮಾಡಿದಲ್ಲಿ ಪ್ರಸ್ತುತ ರೈತರು ಬೆಳೆದ ಬೆಳೆ ನಾಶವಾಗಿ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿ ರೈತರು ಸಾಲದ ಸುಳಿಗೆ ಗುರಿಯಾಗುವ ಸಾಧ್ಯತೆ ಹೆಚ್ಚಿದೆ. ನೀರಾವರಿ ವ್ಯಾಪ್ತಿಯಲ್ಲಿರುವ ಬೆಳೆಗಳನ್ನು ರಕ್ಷಣೆ ಮಾಡುವುದು ಸರ್ಕಾರ ಹಾಗೂ ನೀರಾವರಿ ಇಲಾಖೆಯ ಜವಾಬ್ದಾರಿಯಾಗಿದೆ. ಈಗಾಗಲೇ ರೈತರು ಬೆಳೆದ ಬೆಳೆಗಳಿಗೆ ಬೆಲೆ ಇಲ್ಲದೆ ಸಂಕಷ್ಟದಲ್ಲಿದ್ದಾರೆ. ಎರಡನೇ ಬೆಳೆಯೂ ನೀರಿನ ಸಮಸ್ಯೆಯಿಂದ ಕೈ ಕೊಟ್ಟರೆ ರೈತರಿಗೆ ಉಳಿಗಾಲವಿಲ್ಲ” ಎಂದು ರೈತರು ಆತಂಕ ವ್ಯಕ್ತಪಡಿಸಿದರು.

Advertisements

ಬೆಳಿಗ್ಗೆಯೇ ರಾಜ್ಯ ಹೆದ್ದಾರಿ ತಡೆದು ರೈತರು ಪ್ರತಿಭಟನೆಗೆ ಮುಂದಾಗಿದ್ದರಿಂದ ವಾಹನಗಳ ಸಂಚಾರ ಸ್ಥಗಿತಗೊಂಡಿತ್ತು. ಪೊಲೀಸರು ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆದು ಪೊಲೀಸರು ಪ್ರತಿಭಟನಾಕಾರರನ್ನು ಕೆಲ ಕಾಲ ಬಂಧಿಸಿದ್ದರಿಂದ ವಾತಾವರಣ ಬಿಗಡಾಯಿಸಿತ್ತು.

ಇದನ್ನೂ ಓದಿ: ರಾಯಚೂರು | ಲಾರಿ-ಬೈಕ್ ಡಿಕ್ಕಿ; ಓರ್ವ ಸಾವು

ಈ ವೇಳೆ ಕೆ ಜಿ ವೀರೇಶ್, ಬಸವರಾಜ ನರೇಗಲ್, ಸಿದ್ದಪ್ಪ ಗುಮೇದಾರ, ಮೌನೇಶ್, ಶಬ್ಬೀರ್, ಸಂಜೀವ ರೆಡ್ಡಿ, ಚಂದಪ್ಪ ಇನ್ನಿತರರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X