ರಾಯಚೂರು | ಸ್ವ-ಸಹಾಯ ಗುಂಪುಗಳಿಂದ ತರಕಾರಿ-ಮೊಟ್ಟೆ ಸರಬರಾಜು ಖಂಡಿಸಿ ಬಿಸಿಯೂಟ ನೌಕರರಿಂದ ಪ್ರತಿಭಟನೆ

Date:

ಸರಕಾರಿ ಶಾಲೆಗಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ತರಕಾರಿ, ಬಾಳೆ ಹಣ್ಣು ಹಾಗೂ ಮೊಟ್ಟೆಗಳ ಸರಬರಾಜನ್ನು ಸ್ವ-ಸಹಾಯ ಗುಂಪುಗಳಿಗೆ ನೀಡಲು ಜಿಲ್ಲಾ ಪಂಚಾಯತ್ ಮುಂದಾಗಿರುವ ನಿರ್ಧಾರವನ್ನು ಖಂಡಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ನೌಕರರ ಜಿಲ್ಲಾ ಸಮಿತಿಯಿಂದ ನಗರದ ಟಿಪ್ಪಸುಲ್ತಾನ ಉದ್ಯಾನದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

- Advertisement -

ಕಳೆದ 24 ವರ್ಷಗಳಿಂದ ಅತಿ ಕಡಿಮೆ ಸಂಬಳಕ್ಕೆ ಹೆಚ್ಚು ಹೊಣೆಗಾರಿಕೆಯಿಂದ ಕೆಲಸ ಮಾಡುತ್ತಿರುವ ಬಿಸಿಯೂಟ ನೌಕರರ ಶ್ರಮವನ್ನು ಕಡೆಗಣಿಸಿ, ಯಾವುದೇ ಚರ್ಚೆ ಇಲ್ಲದೇ ಸ್ವ-ಸಹಾಯ ಗುಂಪುಗಳಿಗೆ ಸರಬರಾಜು ನೀಡಿರುವುದು ನೌಕರ ವಿರೋಧಿ ನಡೆಯಾಗಿದೆ. ಈವರೆಗೆ ಶಾಲಾ ಮುಖ್ಯೋಪಾಧ್ಯಾಯರ ಸಹಕಾರದೊಂದಿಗೆ ಬಿಸಿಯೂಟ ನೌಕರರೇ ತರಕಾರಿ, ಹಣ್ಣು ಹಾಗೂ ಮೊಟ್ಟೆಗೆ ಳನ್ನು ಖರೀದಿಸಿ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸುತ್ತಿದ್ದರು. ಈ ವ್ಯವಸ್ಥೆ ಸರಾಗವಾಗಿ ನಡೆಯುತ್ತಿರುವಾಗ ಹೊಸದಾಗಿ ಸ್ವ-ಸಹಾಯ ಗುಂಪುಗಳನ್ನು ತರಲಾಗಿರುವುದು ಯೋಜನೆಯನ್ನು ಖಾಸಗೀಕರಣ ಮಾಡುವ ಹುನ್ನಾರದ ಭಾಗವಾಗಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಪ್ರಧಾನ ಕಾರ್ಯದರ್ಶಿ ಮರಿಯಮ್ಮ ಮಾತನಾಡಿ, ಮಹಿಳಾ ಸಬಲೀಕರಣದ ಹೆಸರಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ಆದರೆ ಬಿಸಿಯೂಟ ನೌಕರರ ಬಹುಪಾಲು ಮಹಿಳೆಯರೇ ಎಂಬುದನ್ನು ಅಧಿಕಾರಿಗಳು ಮರೆತಿದ್ದಾರೆ. ಇದರಿಂದ ನಮ್ಮ ಉದ್ಯೋಗಕ್ಕೆ ಧಕ್ಕೆಯಾಗುವ ಆತಂಕ ಎದುರಾಗಿದೆ ಎಂದರು. ಸ್ವ-ಸಹಾಯ ಗುಂಪುಗಳಿಗೆ ತರಕಾರಿ, ಬಾಳೆಹಣ್ಣು ಮತ್ತು ಮೊಟ್ಟೆಗಳ ಸರಬರಾಜು ನೀಡುವ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಸಿಂಧನೂರು | ಶಾಲೆಯಲ್ಲಿ ವಿದ್ಯುತ್‌ ತಂತಿ ತಗುಲಿ ವಿದ್ಯಾರ್ಥಿನಿ ಸಾವು

ಈ ವೇಳೆ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಲಿನಿ ಮೆಸ್ತಾ ಪ್ರಧಾನ ಕಾರ್ಯದರ್ಶಿ ಮರಿಯಮ್ಮ ಜಿಲ್ಲಾ ಅಧ್ಯಕ್ಷೆ ರೆಣುಕಮ್ಮ ಸಿಐಟಿಯು ಜಿಲ್ಲಾ ಅಧ್ಯಕ್ಷ ಹೆಚ್. ಪದ್ಮ, ಪ್ರಧಾನ ಕಾರ್ಯದರ್ಶಿ ಡಿ.ಎಸ್. ಶರಣಬಸವ, ಖಜಾಂಚಿ ಮಹಮ್ಮದ್ ಹನೀಫ್ ಸೇರಿದಂತೆ ಅನೇಕ ಬಿಸಿಯೂಟ ನೌಕರರು ಪಾಲ್ಗೊಂಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...

ಕೋಲಾರ | ಬಿಸಿಯೂಟ ಮಾತೆಯರಿಗೆ ವೇತನ ವಿಲ್ಲದೆ ಪರದಾಟ ; ಅಧಿಕಾರಿಗಳ ವಿರುದ್ಧ ಕಲ್ವಮಂಜಲಿರಾಮುಶಿವಣ್ಣ ಆಕ್ರೋಶ

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಿಸಿಯೂಟ ಮಾತೆಯರಿಗೆ ಕಳೆದ...

ಬಾಗೇಪಲ್ಲಿ ಮದ್ಯದಂಗಡಿ ಕೊಲೆ ಪ್ರಕರಣದ ಆರೋಪಿ ಬಂಧನ

ತಾಲ್ಲೂಕಿನ ಕೊಂಡರೆಡ್ಡಿಪಲ್ಲಿ ಗ್ರಾಮದ ಬಳಿಯ ಮದ್ಯ ಮಾರಾಟ ಮಳಿಗೆಯಲ್ಲಿ ಸೆ.5ರಂದು ನಡೆದ...