ರಾಯಚೂರು | ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಲು ಆಗ್ರಹಿಸಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

Date:

Advertisements

ಕೆಲಸದ ಅವಧಿ ಹೆಚ್ಚಳ ಮಾಡುವುದಕ್ಕೆ ಸರ್ಕಾರ ಮುಂದಾಗಿರುವುದು ಸೇರಿದಂತೆ ಕಾರ್ಮಿಕ ವಿರೋಧಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಕೈಬಿಡಲು ಒತ್ತಾಯಿಸಿ ಕಾರ್ಮಿಕ ಸಂಘಗಳ ಜಂಟಿ ಸಮಿತಿ ನೇತೃತ್ವದಲ್ಲಿ ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಲಾಯಿತು.

ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಕಾರ್ಮಿಕ ವಿರೋಧಿಯಾಗಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿ ಮಾಡಲು ಮುಂದಾಗಿದೆ. ದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ವಹಿಸಿದಾಗಿನಿಂದ ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಾ ಬಂದಿದೆ. ಈ ನೀತಿಗಳನ್ನು ವಿರೋಧಿಸಿ ಕಾರ್ಮಿಕರು ದೇಶಾದ್ಯಂತ ಹಲವಾರು ಮುಷ್ಕರಗಳನ್ನು ನಡೆಸುತ್ತಾ ಬಂದರೂ ಕೂಡ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ಆಕ್ರಮಣವನ್ನು ಕಾರ್ಮಿಕರ ಮೇಲೆ ಮುಂದುವರಿಸಿದ್ದಾರೆ ಎಂದು ದೂರಿದರು.

ಮಹಿಳೆಯರಿಗೆ ಸುರಕ್ಷಿತ ಕ್ರಮಗಳಿಲ್ಲ, ಮಹಿಳೆಯರ ರಕ್ಷಣೆಗೆ ಭದ್ರತೆ ಒದಗಿಸಬೇಕು. ರಾತ್ರಿ ಪಾಳಿಯಲ್ಲಿ ನಿಯಮ ಕೈಬಿಡಲು ಒತ್ತಾಯಿಸಿದ ಪ್ರತಿಭಟನಾಕಾರರು, ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿಪಡಿಸಲು ನಿರಂತರವಾಗಿ ಒತ್ತಾಯಿಸಲಾಗಿದೆ. ಆದರೂ ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿಪಡಿಸಿಲ್ಲ. ಕಾರ್ಮಿಕರ ಕೆಲಸಕ್ಕೆ ಅನುಗುಣವಾಗಿ ಕನಿಷ್ಠ ವೇತನ ನಿಗದಿಪಡಿಸಬೇಕು. ಕಾರ್ಮಿಕರ ಕಾಯ್ದೆ ತಿದ್ದುಪಡಿ ಮಾಡುವುದನ್ನು ಕೈಬಿಡಬೇಕು ಎಂದು ಮನವಿ ಮಾಡಿದರು.

Advertisements

ಈ ಬಾರಿಯೂ ಅಧಿಕಾರದ ಚುಕ್ಕಾಣೆ ಹಿಡಿದಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ದೇಶದ ಜನತೆ ಮತ್ತು ಕಾರ್ಮಿಕ ವರ್ಗದ ಹಿತಾಸಕ್ತಿಯನ್ನು ಕಡೆಗಣಿಸುತ್ತಿದೆ. ಕಾರ್ಮಿಕರಿಗೆ 8 ಗಂಟೆ ಬದಲಾಗಿ 12 ಗಂಟೆವರೆಗೆ ಕೆಲಸದ ಅವಧಿಯನ್ನು ಹೆಚ್ಚಿಸಿಲು ಮುಂದಾಗಿದೆ. ಇದು ಖಂಡನೀಯ. ಇದನ್ನು ಕೇಂದ್ರ ಸರಕಾರ ಹಿಂಪಡೆಯಬೇಕು. ಇಲ್ಲದಿದ್ದರೆ ಬೃಹತ್ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಇದನ್ನು ಓದಿದ್ದೀರಾ? ಬಳ್ಳಾರಿ | ಎರಡು ವರ್ಷದ ಮಗುವಿಗೆ ಲಿವರ್ ಸಮಸ್ಯೆ: ದಾನಿಗಳ ನೆರವಿಗಾಗಿ ಕಾಯುತ್ತಿರುವ ಪೋಷಕರು

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷೆ ಹೆಚ್ ಪದ್ಮಾ, ಎಐಯುಟಿಯುಸಿ ರಾಜ್ಯ ಕಾರ್ಯದರ್ಶಿ ಎನ್ ಎಸ್ ವೀರೇಶ, ಎಐಟಿಯುಸಿ ಆನಂದ, ಐಎನ್‌ಟಿಯುಸಿ ಜಿಲ್ಲಾದ್ಯಕ್ಷ ತಿಮ್ಮಪ್ಪ ಸ್ವಾಮಿ, ಸಿಐಟಿಯು ಜಿ.ಕಾರ್ಯದರ್ಶಿ ಡಿಎಸ್ ಶರಣಬಸವ, ಎಐಯುಟಿಯುಸಿ ಕಾರ್ಯದರ್ಶಿ ಮಹೇಶ ಚೀಕಲಪರ್ವಿ, ಎಸ್ ಎಂ ಪೀರಾ, ಎಂ.ಶರಣಗೌಡ, ಎಂ.ರವಿ, ಸಲಾವುದ್ದಿನ್, ಶ್ರೀನಿವಾಸ ಕೊಮಾರಿ, ವಿಎಂ ಉಕ್ಕಲಿ ಸೇರಿಸಂತೆ ಅನೇಕರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X