ರಾಯಚೂರು | ಬಗ‌ರ್ ಹುಕುಂ ಸಾಗುವಳಿದಾರರಿಗೆ ಭೂಮಿ ಪಟ್ಟಾ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

Date:

Advertisements

ಭೂಮಿಗಳಲ್ಲಿ ಬಗ‌ರ್ ಹುಕುಂ ಸಾಗುವಳಿದಾರರು ಸುಮಾರು 40 ರಿಂದ 50 ವರ್ಷಗಳಿಂದ ಫಾರಂ ನಂ: 50, 53, 57 ರಲ್ಲಿ ಸಾಗುವಳಿ ಮಾಡಿಕೊಂಡು ಬಂದಿರುತ್ತಾರೆ. ಕೂಡಲೇ ಜಮೀನುಗಳನ್ನು ತನಿಖೆ ಪರಿಶೀಲನೆ ನಡೆಸಿ ಪಟ್ಟಾ ನೀಡಬೇಕು ಎಂದು ಭೂಮಿ ಮತ್ತು ವಸತಿ ವಂಚಿತರ ಹಕ್ಕು ಹೋರಾಟ ಸಮಿತಿ ವತಿಯಿಂದ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಪ್ರತಿಭಟನೆ ನಡೆಸಲಾಯಿತು.

ದೇವದುರ್ಗ ತಾಲೂಕಿನ ಜಾಲಹಳ್ಳಿ, ಪರಾಪುರ, ಕಕ್ಕಲದೊಡ್ಡಿ, ಬುದ್ದಿನ್ನಿ ಹೀಗೆ ಹಲವಾರು ಗ್ರಾಮಗಳಲ್ಲಿ ಸರಕಾರಿ ಹೆಸರಿನಲ್ಲಿರುವ ಜಮೀನುಗಳಲ್ಲಿ ಅನಧಿಕೃತವಾಗಿ ಅರ್ಜಿಗಳನ್ನು ಸಲ್ಲಿಸಿ ಸುಮಾರು ವರ್ಷ ಕಳೆದರೂ ಇಲ್ಲಿಯವರೆಗೂ ಪಟ್ಟಾ ನೀಡಿಲ್ಲ ಎಂದು ದೂರಿದರು.

1000037159

ರಾಜ್ಯದ ಹಲವು ಸಂಘಟನೆಗಳ ಸತತ ಹೋರಾಟದ ಒತ್ತಾಯದ ಪ್ರತಿಫಲವಾಗಿ ಸರಕಾರಿ ಗೋಮಾಳ, ಗೈರಾಣಿ, ಖರೇಜಾ ಖಾತ, ಪರಂಪೋಕ, ‘ಇನಾಮ್ ಹೆಸರಿನಲ್ಲಿರುವ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಾ ಸಕ್ರಮಕ್ಕಾಗಿ ಅರ್ಜಿ ಸಲ್ಲಿಕೆಗೆ ಸರ್ಕಾರ ಅವಕಾಶ ಕಲ್ಪಿಸಿದ್ದು, ಅದರ ತರುವಾಯ ಭೂಮಿಯ ಹಕ್ಕಿಗಾಗಿ ಹಲವಾರು ಬಾರಿ ಜಿಲ್ಲಾಡಳಿತಕ್ಕೆ ಮತ್ತು ತಾಲೂಕಾಡಳಿತ ಕಛೇರಿಗಳ ಮಾತ್ರ ಅಲೆದಾಟ ಆಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisements

ಕಾಲಕಾಲಕ್ಕೆ ಭೂ ಮಂಜೂರಾತಿ ಸಮಿತಿಯು ಸಭೆಗಳನ್ನು ನಡೆಸಲು ಸರ್ಕಾರದ ಆದೇಶವಿದ್ದರೂ ಸರಿಯಾಗಿ ಪಾಲನೆಯಾಗುತ್ತಿಲ್ಲ ಎಂದು ದೂರಿದರು. ಸರ್ಕಾರ ಸುತ್ತೋಲೆಗಳನ್ನು ಕಟುಬದ್ಧವಾಗಿ ಮತ್ತು ಪ್ರಾಮಾಣಿಕತೆಯಿಂದ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಅನಧಿಕೃತ ಸಾಗುವಳಿದಾರರ ಸಕ್ರಮಕ್ಕೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ಕೂಡಲೇ ನವೆಂಬರ್- 25’ರ ಒಳಗೆ ರೈತರ ಜಮೀನುಗಳ ಜಿ.ಪಿ.ಎಸ್ ಫೋಟೋ ಮತ್ತು ಸ್ಥಾನಿಕ ಪರಿಶೀಲನೆ ನಡೆಸುವಂತೆ ಸಂಬಂಧಿಸಿದ ಸಚಿವರು ಹೇಳಿದ್ದಾರೆ. ಅದರ ಹಿನ್ನಲೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಕೂಡಲೇ ರೈತರ ಜಮೀನುಗಳ ಅರ್ಹ ಫಲಾನುಭವಿಗಳ ಪಟ್ಟಿ ಮಾಡುವಂತೆ ಮನವಿ ಮಾಡಿದರು.

ಪ್ರತಿಭಟನೆಯ ಬಳಿಕ ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ ಹಾಗೂ ತಹಶೀಲ್ದಾರ್ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಲಾಯಿತು.

ಇದನ್ನು ಓದಿದ್ದೀರಾ? ಕೊಪ್ಪಳ | ರೈತರ ನಾನಾ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ

ಈ ವೇಳೆ ಕರ್ನಾಟಕ ಜನಶಕ್ತಿ ಮುಖಂಡ ಮಾರೆಪ್ಪ ಹರವಿ, ಭೂಮಿ ವಸತಿ ಜಿಲ್ಲಾ ಮುಖಂಡ ಆಂಜನೇಯ ಕುರುಬದೊಡ್ಡಿ, ಗ್ರಾಮಿಣ ಕೂಲಿಕಾರರ ಸಂಘಟನೆ ಮುಖಂಡ ಬಸವರಾಜ್ ಗಬ್ಬೂರು , ಹನುಮಂತ ಜೋಗಿ , ಶಿವಪ್ಪ ಬಲ್ಲಿದ , ಶಿವರಾಜ್ ರುದ್ರಾಕ್ಷಿ, ಬಸವರಾಜ್ ನಾಯಕ , ಇನ್ನಿತರರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X