ರಾಯಚೂರು | ಏಳು ತಾಸು ವಿದ್ಯುತ್ ಪೂರೈಸುವಂತೆ ಅ.19ರಂದು ಪ್ರತಿಭಟನೆ

Date:

Advertisements

ರಾಜ್ಯದಲ್ಲಿ ಎದುರಾಗಿರುವ ವಿದ್ಯುತ್ ಕೊರತೆಯಿಂದಾಗಿ ರೈತರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದು, ಏಳು ತಾಸು ವಿದ್ಯುತ್ ನೀಡುವಂತೆ ಒತ್ತಾಯಿಸಿ ಅಕ್ಟೋಬರ್‌ 19ರಂದು ರಾಜ್ಯಾದ್ಯಂತ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆ ನಡೆಸಲಿದೆ ಎಂದು ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ತಿಳಿಸಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, “ಮುಂಗಾರು ಮಳೆಯಿಂದ ವಿದ್ಯುತ್ ಉತ್ಪಾದನೆ ಇಳಿಕೆಯಾಗಿದ್ದು, ಐದು ತಾಸು ವಿದ್ಯುತ್ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಲಕ್ಷಾಂತರ ರೂ. ಹೂಡಿಕೆ ಮಾಡಿ ಕೃಷಿ ಪಂಪಸೆಟ್ ನಂಬಿರುವ ರೈತರಿಗೆ ನಷ್ಟ ತುಂಬಿಕೊಡುವವರು ಯಾರು” ಎಂದು ಪ್ರಶ್ನಿಸಿದರು.

“ಕೊರತೆ ವಿದ್ಯುತ್ ಖರೀದಿ ಮಾಡಿಯಾದರೂ ಗ್ರಾಮೀಣ ರೈತರಿಗೆ ಏಳು ತಾಸು ವಿದ್ಯುತ್ ನೀಡಬೇಕು.  ಗುಣಮಟ್ಟದ ಕಲ್ಲಿದ್ದಲು ಪೂರೈಕೆಯಾಗುತ್ತಿಲ್ಲ. ಉತ್ಪಾದನೆ ಇಳಿಕೆಯಾಗಿದೆಯೆಂದು ಹೇಳುವ ಸರ್ಕಾರ ಸಂಕಷ್ಟ ಸೂತ್ರ ರೂಪಿಸುವಲ್ಲಿ ವಿಫಲವಾಗಿದೆ” ಎಂದು ಆರೋಪಿಸಿದರು.

Advertisements

“ಬೆಳೆಗಳು ತೆನೆಯೊಡೆಯುವ ಹಂತದಲ್ಲಿದ್ದು, ತುರ್ತಾಗಿ ವಿದ್ಯುತ್ ಪೂರೈಸಿದರೆ ಬೆಳೆ ಉಳಿಯಲು ಸಾಧ್ಯವಾಗಿದೆ. ಮಳೆಯಿಲ್ಲ, ನೀರಾವರಿ ಯೋಜನೆಗಳ ಕೊನೆಭಾಗದ ರೈತರಿಗೆ ನೀರಿಲ್ಲ. ಈಗ ವಿದ್ಯುತ್‌ ಕೂಡ ಇಲ್ಲದಂತಾಗಿದೆ. ಇದರಿಂದ ಜಿಲ್ಲೆಯ ಆರ್ಥಿಕತೆ ಮೇಲೆ ಗಂಭೀರವಾದ ಪರಿಣಾಮ ಬೀರುತ್ತಿದೆ. ಕೂಡಲೇ ಎಲ್ಲ ಎಸ್ಕಾಂಗಳು, ರೈತ ಸಂಘಟನೆಗಳ ಸಭೆ ಕರೆದು ಏಳು ತಾಸು ವಿದ್ಯುತ್ ನೀಡಲು ಮುಂದಾಗಬೇಕು. ಕೊರತೆ ವಿದ್ಯುತ್ ಖರೀದಿ ಮಾಡಿಯಾದರೂ ಬೆಳೆಗಳನ್ನು ಉಳಿಸಬೇಕು. ವಿದ್ಯುತ್ ಹಾಗೂ ನೀರಿನ ಕೊರೆತೆಯಿಂದ ಆಗಿರುವ ಬೆಳೆನಷ್ಟಕ್ಕೆ ಸರ್ಕಾರ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಏಳು ಗಂಟೆ ವಿದ್ಯುತ್‌ ಪೂರೈಕೆಗೆ ಆಗ್ರಹಿಸಿ ವಿಷ ಸೇವಿಸಿದ ರೈತ

“ಚುಕ್ಕಿ ನಂಜುಂಡಸ್ವಾಮಿಯವರು ಈ ಹಿಂದೆ ನಮ್ಮ ಸಂಘಟನೆಯಲ್ಲಿದ್ದರು. ಪ್ರಾಯೋಜಕತ್ವದಲ್ಲಿ ವಿದೇಶಕ್ಕೆ ತೆರಳಿರುವ ಲೆಕ್ಕಪತ್ರ ಕೇಳಿದರೆ ಮತ್ತೊಂದು ರೈತ ಸಂಘ ಸ್ಥಾಪಿಸಿಕೊಂಡಿದ್ದಾರೆ” ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್, ದೇವರಾಜ ನಾಯಕ, ಬೂದೆಯ್ಯಸ್ವಾಮಿ ಗಬ್ಬೂರು, ಬ್ರಹ್ಮಯ್ಯ ಆಚಾರ್ಯ ಇದ್ದರು.

ವರದಿ : ಹಫೀಜುಲ್ಲ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X