ರಾಯಚೂರು | ಮಾಜಿ ದೇವದಾಸಿಯರ ಬಾಕಿ ಪಿಂಚಣಿ ಮಂಜೂರು ಮಾಡಲು ಆಗ್ರಹಿಸಿ ಧರಣಿ

Date:

Advertisements

ಮಾಜಿ ದೇವದಾಸಿಯರ ಬಾಕಿ ಪಿಂಚಣಿ ಮಂಜೂರು ಮಾಡಬೇಕು ಹಾಗೂ ಮನೆ ನಿರ್ಮಾಣ ಸಂಪೂರ್ಣಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ರಾಯಚೂರು ಜಿಲ್ಲಾ ಸಮಿತಿಯಿಂದ ಧರಣಿ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ರಾಯಚೂರು ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ದೇವದಾಸಿ ವಿಮೋಚನಾ ಮಹಿಳೆಯರು ಘೋಷಣೆ ಕೂಗುವ ಮೂಲಕ ಆಗ್ರಹಿಸಿದರು.

ದೇವದಾಸಿ ವಿಮೋಚನಾ ಸಂಘದಿಂದ ಅನೇಕ ವರ್ಷಗಳ ಹೋರಾಟದ ಫಲವಾಗಿ ರಾಯಚೂರು ತಾಲೂಕಿನ 206 ಮಾಜಿ ದೇವದಾಸಿಯರಿಗೆ ಪುನರ್ ವಸತಿ ಕಲ್ಪಿಸಲು ನಗರದ ಸರ್ವೆ ನಂಬರ್ 1403ರ 5 ಎಕರೆ ಭೂಮಿ ಮಂಜೂರು ಮಾಡಲಾಗಿತ್ತು. ಮನೆ ನಿರ್ಮಾಣಕ್ಕೆ ₹6.50 ಲಕ್ಷದ ಪೈಕಿ ₹2.50 ಲಕ್ಷ ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ ನೀಡಲಾಗಿತ್ತು. ಫಲಾನುಭವಿಗಳು ₹56 ಸಾವಿರ ವಂತಿಗೆ ಹಾಗೂ ಉಳಿದ ಮೊತ್ತ ಸಾಲದ ರೂಪದಲ್ಲಿ ಫಲಾನುಭವಿಗಳೇ ಭರಿಸಲು ಹೇಳಲಾಗಿತ್ತು. ಆದರೆ, ಮಾಸಿಕ ₹1,500 ಪಿಂಚಣಿ ಪಡೆದು ಸರ್ಕಾರದ ಮೇಲೆ ಅವಲಂಬನೆಯಾಗಿರುವ ಫಲಾನುಭವಿಗಳಿಂಧ ಸಾಲ ಮರುಪಾವತಿಸಲು ಸಾಧ್ಯವಾಗುವುದಿಲ್ಲ ಎಂದು ದೂರಿದರು.

Advertisements

ಸರ್ಕಾರವೇ ಮನೆ ನಿರ್ಮಾಣದ ಸಂಪೂರ್ಣ ವೆಚ್ಚ ಭರಿಸಬೇಕು. ಮನೆಗಳ ನಿರ್ಮಾಣ ಕಾರ್ಯ ವೇಗವಾಗಿ ಪೂರ್ಣಗೊಳಿಸಬೇಕು. 3 ತಿಂಗಳ ಬಾಕಿ ಇರುವ ಪಿಂಚಣಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷೆ ಎಚ್.ಪದ್ಮಾ, ಗೌರವ ಅಧ್ಯಕ್ಷ ಕೆ.ಜಿ ವೀರೇಶ, ತಾಲ್ಲೂಕು ಘಟಕದ ಅಧ್ಯಕ್ಷೆ ಜಮಲಮ್ಮ, ಮಹಾದೇವಿ ಮತ್ತಿತರರು ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X