ರಾಯಚೂರು | ತಿಮ್ಮಾಪೂರ ಏತ ನೀರಾವರಿ ಯೋಜನೆಗೆ ರೈತರ ಭೂಮಿ ಖರೀದಿ

Date:

Advertisements

ತಿಮ್ಮಾಪೂರ ಏತ ನೀರಾವರಿ ಯೋಜನೆಗಾಗಿ ಭೂ ಖರೀದಿ ಮಾಡುತ್ತಿದ್ದು, ಎಕರೆಗೆ ಮಾರುಕಟ್ಟೆ ಬೆಲೆಯ ಮೂರರಷ್ಟು ಹಾಗೂ ರಸ್ತೆಬದಿ ಜಮೀನು ಇದ್ದಲ್ಲಿ ಶೇ.10ರಷ್ಟು ಹೆಚ್ಚುವರಿ ನೀಡಲಾಗುತ್ತದೆ ಎಂದು ರಾಯಚೂರು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಹೇಳಿದರು.

ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, “ಸಿಂಧನೂರು ತಾಲೂಕಿನ ತಿಮ್ಮಾಪೂರ ಏತ ನೀರಾವರಿ ಯೋಜನೆಗೆ ಈಗಾಗಲೇ ಪೈಪ್‌ಲೈನ್ ಕಾಮಗಾರಿ ನಡೆಯುತ್ತಿದ್ದು, ಈ ಯೋಜನೆಗೆ ಬೇಕಾಗುವ ಜಮೀನು ರೈತರಿಂದ ನೇರ ಖರೀದಿ ಮಾಡಲಾಗುತ್ತಿದೆ” ಎಂದರು.

“ತಿಮ್ಮಾಪೂರ ಏತ ನೀರಾವರಿ ಯೋಜನೆಗೆ 7 ರಿಂದ 8 ಗ್ರಾಮಗಳ ಮೂಲಕ ಏತ ನೀರಾವರಿಗೆ ಪೈಪ್‌ಲೈನ್ ಹಾದು ಹೋಗುತ್ತಿದೆ. ಈ ಗ್ರಾಮಗಳ ರೈತರಿಂದ ಯೋಜನೆಗೆ ಭೂಮಿ ಖರೀದಿ ಮಾಡಲಾಗುತ್ತಿದೆ. ಸಿಂಧನೂರು ತಾಲೂಕಿನ ಬಾದರ್ಲಿ ಹೋಬಳಿಯ ಒಳ ಬಳ್ಳಾರಿ, ಯದ್ದಲದೊಡ್ಡಿ, ತಿಮ್ಮಾಪೂರ, ಮಲದಿನ್ನಿ ತುಕನಟ್ಟಿ, ದಿಬ್ಬನಖೇಡ ಗ್ರಾಮಗಳ ಮೂಲಕ ಏತನೀರಾವರಿ ಹಾದು ಹೋಗುತ್ತಿದೆ” ಎಂದು ತಿಳಿಸಿದರು.

Advertisements

“ಭೂಮಿ ಖರೀದಿಗೆ ಹಿಂದಿನ 3 ವರ್ಷದ ಮಾರುಕಟ್ಟೆ ಬೆಲೆ ಮತ್ತು ಮಾರ್ಗಸೂಚಿ ಬೆಲೆಯನ್ನು ನಿಗದಿಪಡಿಸಲಾಗುತ್ತಿದೆ. ಯದ್ದಲದೊಡ್ಡಿ ಗ್ರಾಮದ ವ್ಯಾಪ್ತಿಯಲ್ಲಿ ಕರಿ ಜಮೀನು ಎಕರೆಗೆ ₹5.6 ಲಕ್ಷ ಇದ್ದು, ಇದೀಗ 3 ಪಟ್ಟು ನೀಡಲಾಗುತ್ತಿದೆ. ಖುಷ್ಕಿ ಜಮೀನಿಗೆ ಎಕರೆಗೆ ₹5.8 ಲಕ್ಷ ಇದ್ದು, ೩ ಪಟ್ಟುಗೆ ಖರೀದಿ ಮಾಡಲಾಗುತ್ತದೆ. ಜತೆಗೆ ರಸ್ತೆ ಬದಿಯಲ್ಲಿ ಜಮೀನು ಇದ್ದಲ್ಲಿ ಶೇ.10ರಷ್ಟು ನೀಡಲಾಗುತ್ತಿದೆ” ಎಂದು ತಿಳಿಸಿದರು.

“ಈ ಯೋಜನೆಗೆ 1 ಎಕರೆಯೊಳಗೆ ಇರುವ ಜಮೀನಿನಲ್ಲಿ ಮಧ್ಯದಲ್ಲಿ ಪೈಪ್‌ಲೈನ್ ಹಾದು ಹೋದಲ್ಲಿ ಉಳಿದ ಭೂಮಿಯಲ್ಲಿ ಉಳುಮೆ ಮಾಡಲು ಸಾಧ್ಯವಿಲ್ಲವೆಂದು ರೈತರ ವಾದವಾಗಿದೆ. ವ್ಯರ್ಥ ಭೂಮಿಯನ್ನು ಖರೀದಿಗೆ ನೀಡಲು ಸಿದ್ದವಿದ್ದು, ರೈತರ ಒತ್ತಾಯದ ಮೇರೆಗೆ, ಈ ಕುರಿತು ನೀರಾವರಿ ನಿಗಮಕ್ಕೆ ಪತ್ರ ಬರೆದು ರೈತರು ಭೂಮಿ ಪಡೆಯಲು ಅಧಿಕಾರಿಗಳಿಗೆ ತಿಳಿಸಿದ್ದರು. ಈ ಯೋಜನೆಗೆ ಒಳಪಡಿವ ರೈತರ ಜಮೀನುಗಳ ಕೆಲ ಸರ್ವೆ ನಂಬರ್ ಬಿಟ್ಟು ಹೋಗಿದ್ದು, ಆ ರೈತರನ್ನು ಕರೆದು ಸರ್ವೆ ನಂಬರ್ ಪಟ್ಟಿಯಲ್ಲಿ ಸೇರಿಸಿ, ರೈತರ ಎದುರಲ್ಲೇ ಸರ್ವೆ ಮಾಡಬೇಕು” ಎಂದು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಬ್ರಾಹ್ಮಣ ಮಹಿಳೆಯರು ಜನಿವಾರ ಧರಿಸುವುದಿಲ್ಲ – ಅವರೂ ಶೂದ್ರರೇ: ಭಗವಾನ್

7 ರಿಂದ 8 ಗ್ರಾಮಗಳು ಒಳಪಡುವ ಈ ಯೋಜನೆಯು ಅಯಾ ಗ್ರಾಮಗಳ ಮತ್ತು ಮಾರುಕಟ್ಟೆ ಬೆಲೆ ನಿಗದಿಯಂತೆ ಎಕರೆಗೆ 3ರಷ್ಟು ಹಾಗೂ ರಸ್ತೆ ಬದಿಯಲ್ಲಿರುವ ಜಮೀನುಗಳಿಗೆ ಶೇ.10ರಷ್ಟು ನಿಗದಿಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ವೆಂಕರಾವ್ ನಾಡಗೌಡ, ಸಹಾಯಕ ಆಯುಕ್ತೆ ಮಹೆಬೂಬಿ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು, ರೈತರು ಇದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X