ರಾಯಚೂರು | ಮೊಲ ಬೇಟೆ ಪ್ರಕರಣ; ಶಾಸಕನ ಪುತ್ರ, ಸಹೋದರನ ವಿರುದ್ಧ ದೂರು ದಾಖಲು

Date:

Advertisements

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕು ತುರ್ವಿಹಾಳ ಪಟ್ಟಣದಲ್ಲಿ ನಡೆದ ಮೊಲದ ಬೇಟೆ ಪ್ರಕರಣ ಸಂಬಂಧ ಮಸ್ಕಿ ಶಾಸಕ ಆರ್‌ ಬಸನಗೌಡ ತುರ್ವಿಹಾಳ ಅವರ ಸಹೋದರ ಹಾಗೂ ಪುತ್ರನ ವಿರುದ್ಧ ದೂರು ದಾಖಲಾಗಿದೆ.

ಶಾಸಕರ ಪುತ್ರ ಸತೀಶಗೌಡ ತುರ್ವಿಹಾಳ ಹಾಗೂ ಸಹೋದರ ಸಿದ್ದನಗೌಡ ತುರ್ವಿಹಾಳ ಸೇರಿದಂತೆ ಘಟನೆಯಲ್ಲಿ ಪಾಲ್ಗೊಂಡಿದ್ದ ಇತರರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ರಾಯಚೂರು ಡಿಸಿಎಫ್‌ ಪ್ರವೀಣ್‌ ತಿಳಿಸಿದ್ದಾರೆ.

ಶಾಸಕರ ಪುತ್ರ ಹಾಗೂ ಸಹೋದರ ಸೇರಿ ಯುಗಾದಿ ಹಬ್ಬದ ದಿನ ಬೇಟೆಯಾಡಿದ್ದ ಮೊಲಗಳನ್ನು ಕೆಲವರು ಕೊಡಲಿ ಹಾಗೂ ಭರ್ಜಿಗೆ ಸಿಕ್ಕಿಸಿಕೊಂಡು ಸಾವಿರಾರು ಜನರ ಎದುರು ಮೆರವಣಿಗೆ ಮಾಡಿ ವಿಜೃಂಭಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

Advertisements

ಇನ್ನು ಘಟನೆ ಕುರಿತು “ಯುಗಾದಿ ಹಬ್ಬದಂದು ಕೆಲ ಸಂಪ್ರದಾಯಗಳನ್ನು ಪಾಲಿಸಿಕೊಂಡು ಬರಲಾಗುತ್ತಿದೆ. ನಮ್ಮ ಕುಟುಂಬದ ಸದಸ್ಯರು ಮೊಲಗಳನ್ನು ಬೇಟೆಯಾಡಿಲ್ಲ. ಆದರೆ, ಮೆರವಣಿಗೆಯಲ್ಲಿ ಬಂದ ಕೆಲವರು ನಮ್ಮವರನ್ನು ಹೆಗಲ ಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡಿದ್ದಾರಷ್ಟೇ. ಇನ್ನು ಮುಂದೆ ಸಾರ್ವಜನಿಕರಿಗೆ ಮೊಲಗಳನ್ನು ಬೇಟೆಯಾಡುವುದು ತಪ್ಪು, ಇಂಥ ಕೃತ್ಯಗಳನ್ನು ಮರುಕಳಿಸದಂತೆ ತಿಳಿಸಲಾಗುವುದು” ಎಂದು ಶಾಸಕ ಬಸನಗೌಡ ತುರ್ವಿಹಾಳ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ರಾಯಚೂರು | ಮೊಲಗಳ ಬೇಟೆಯಾಡಿ, ಬೀದಿಯಲ್ಲಿ ಮಾರಕಾಸ್ತ್ರ ಹಿಡಿದು ಕ್ರೌರ್ಯ

ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸುವವರು ಯಾರೇ ಆಗಿದ್ದರೂ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X