ರಾಯಚೂರು | ನಿರಂತರ ಮಳೆ : ಸೂರ್ಯಕಾಂತಿ ಬೆಳೆಗೆ ಕೀಟ ಬಾಧೆ

Date:

Advertisements

ಜಿಲ್ಲೆಯಲ್ಲಿ ನಿರಂತರ ವಾರದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಸೂರ್ಯಕಾಂತಿ ಬೆಳೆಗಾರರ ರೈತರ ಜೀವನದಲ್ಲಿ ದೊಡ್ಡ ಸಂಕಷ್ಟವನ್ನು ತಂದಿದೆ. ಜಿಟಿಜಿಟಿ ಮಳೆ ಮತ್ತು ಕೆಲವೊಮ್ಮೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಸೂರ್ಯಕಾಂತಿ ಕೀಟ ಬಾಧೆಗೆ ರೈತನ ಗೋಳಾಗಿದೆ.

ಜಿಲ್ಲೆಯ ಮಾನ್ವಿ ತಾಲ್ಲೂಕಿನ ಪೋತ್ನಾಳ ವ್ಯಾಪ್ತಿಯ ಖರಾಬದಿನ್ನಿ, ತಡಕಲ್, ಜೀನೂರು, ಮದ್ದಮಗುಡ್ಡಿ, ದೇವಿಪುರ ಹಾಗೂ ಇನ್ನಿತರ ಗ್ರಾಮಗಳಲ್ಲಿ ನೂರಾರು ರೈತರು ಮುಂಗಾರಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೂರ್ಯಕಾಂತಿ ಬೆಳೆಗೆ ಆದ್ಯತೆ ನೀಡಿದ್ದಾರೆ.

ಈ ವರ್ಷ ಮಾನ್ವಿ ತಾಲ್ಲೂಕಿನಲ್ಲಿ ಒಟ್ಟು ‌ಸುಮಾರು 1,200 ಎಕರೆ ಪ್ರದೇಶದಲ್ಲಿ ಸೂರ್ಯಕಾಂತಿ ಬೆಳೆಯಲಾಗುತ್ತಿದೆ. ಈ ಮಳೆಯಿಂದಾಗಿ ಬಿತ್ತನೆ ಮಾಡಿರುವ ಸೂರ್ಯಕಾಂತಿ ಬೆಳೆ ಸಂಪೂರ್ಣ ಹಾನಿಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೈಗೆ ಸಿಗುವ ಬೆಳೆ ಕಟಾವು ಮಾಡುವ ಮುನ್ನವೇ ಹಾಳಾಗುತ್ತಿರುವುದರಿಂದ ರೈತರ ಬಾಳಿನಲ್ಲಿ ನಿರಾಶೆ ಆವರಿಸಿದೆ ಎನ್ನಲಾಗಿದೆ.

1000171575

ಬೆಳೆದಿದ್ದ ಸೂರ್ಯಕಾಂತಿ ಕಟಾವು ಮಾಡಲಾಗದ ಸ್ಥಿತಿಗೆ ತಲುಪಿದೆ. ಹೆಚ್ಚು ತೇವಾಂಶದಿಂದಾಗಿ ಹತ್ತಿಯಲ್ಲಿ ಜಂಗು ರೋಗ ವ್ಯಾಪಕವಾಗಿ ಹರಡಿದೆ. ಆದರೆ ಕೆಲ ದಿನಗಳಿಂದ ಸೂರ್ಯಕಾಂತಿ ಬೆಳೆಗೆ ತೆನೆಗಳನ್ನು ತಿನ್ನುವ ಕೀಟದ ಹಾವಳಿ ಕಂಡು ಬಂದಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಈ ಕೀಟಗಳು ಕಾಳು ಕಟ್ಟುವ ಹಂತದಲ್ಲಿನ ಸೂರ್ಯಕಾಂತಿ ಹೂವುಗಳನ್ನು ತಿನ್ನುವ ಮೂಲಕ ಹೆಚ್ಚಿನ ನಷ್ಟವನ್ನು ಉಂಟುಮಾಡುತ್ತಿವೆ.

ಈ ಬಗ್ಗೆ ಸೂರ್ಯಕಾಂತಿ ಬೆಳೆಗಾರ ದುರಗಪ್ಪ ತಡಕಲ್ ಮಾತನಾಡಿ, ನಿರಂತರ ಮಳೆ ಸುರಿಯುವುದರಿಂದ ಸೂರ್ಯಪಾನ ಹಾಳಾಗುತ್ತಿದೆ. ಒಳಗಡೆ ಕಾಳುಗಳು ಗಟ್ಟಿಯಾಗಿ ಬರುತ್ತಿಲ್ಲ. ಸುಮಾರು 40 ದಿನಗಳಿಂದ ಸರಿಯಾಗಿ ಬಿಸಿಲು ಬೀಳದೆ ಕಾರಣಕ್ಕೆ ಸೂರ್ಯಕಾಂತಿ ಬೆಳೆಯಲ್ಲಿ ಕೀಟಬಾಧೆ ಕಂಡುಬಂದಿದೆ ಎಂದು ಅಳಲು ತೋಡಿಕೊಂಡರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅತ್ಯಾಚಾರ ಪ್ರಕರಣ : ಅಪರಾಧಿಗೆ ಜೀವಾವಧಿ ಶಿಕ್ಷೆ

Advertisements

ಸೂರ್ಯಕಾಂತಿ ಬೆಳೆಗೆ ಕೀಟಗಳ ಹಾವಳಿ ತಡೆಯಲು ಕೃಷಿ ಇಲಾಖೆಯ ಅಧಿಕಾರಿಗಳು ಸೂಕ್ತ ಕೀಟನಾಶಕಗಳನ್ನು ಬಗ್ಗೆ ರೈತರಿಗೆ ತಿಳಿಸಬೇಕು ಹಾಗೂ ಖರೀದಿ ಕೇಂದ್ರ ಪ್ರಾರಂಭಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೇಳಿದರು.




ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

ಮಂಡ್ಯ | ಹಿಂದುಳಿದ ಸಮುದಾಯದವರ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ

ಸಾಮಾಜಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್...

ಚಿಂತಾಮಣಿ | ವಿಶೇಷಚೇತನರಿಗೆ ಶೇ.5ರಷ್ಟೂ ಮೀಸಲಾಗದ ಅನುದಾನ; ಎಲ್ಲಿಯೂ ಕಾಣದ ರ್‍ಯಾಂಪ್‌ ವ್ಯವಸ್ಥೆ

ವಿಶೇಷಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶಗಳನ್ನು ರೂಪಿಸಿ ಎನ್ನುವುದು ಕೇವಲ ಬಾಯಿ...

Download Eedina App Android / iOS

X