ರಾಯಚೂರು | ಆಟೋ ನಿಲ್ದಾಣ ನಿರ್ಮಿಸಿ ಪೊಲೀಸರ ಕಿರುಕುಳ ತಪ್ಪಿಸುವಂತೆ ಆಟೋ ಚಾಲಕರ ಮನವಿ

Date:

ಆಟೋ‌ ನಿಲ್ದಾಣ ನಿರ್ಮಿಸಿ, ಅನಗತ್ಯವಾಗಿ ಪೊಲೀಸರು ನೀಡುತ್ತಿರುವ ಕಿರುಕುಳದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಯಚೂರಿನ ಸಿಂಧನೂರು ತಾಲೂಕು ಶಂಕರನಾಗ್ ನಗರ ಮತ್ತು ಗ್ರಾಮೀಣ ಆಟೋ ಚಾಲಕರ ಸಂಘ-ಟಿಯುಸಿಐ ಸಂಯೋಜಿತ ಸಂಘಟನೆಯಿಂದ ಸಿಂಧನೂರು ತಹಶೀಲ್ದಾರರ ಕಚೇರಿಯಿಂದ ನಗರಸಭೆ ಕಚೇರಿಯ ವರೆಗೆ ಪ್ರತಿಭಟನಾ ರ್ಯಾಲಿ ನಡೆಸಿತು.

- Advertisement -

“ಸಿಂಧನೂರು ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಸಾಲ-ಸೋಲ ಮಾಡಿ ಪ್ಯಾಸೆಂಜೆರ್ ಆಟೋ ತಂದು ದಿನಕ್ಕೆ ನಾವು 200-300 ಹಣ ಸಂಪಾದನೆ ಮಾಡಿ ಉಳಿಸಿ ನಮ್ಮ ಕುಟುಂಬವನ್ನು ನಿರ್ವಹಿಸಲು ಸಾಕಾಗಿ ಹೋಗಿದೆ. ದಿನದಿಂದ ದಿನಕ್ಕೆ ಗಗನಕ್ಕೇರುತ್ತಿರುವ ಅಗತ್ಯ ವಸ್ತುಗಳ ಬೆಲೆಗಳು ನಮ್ಮ ಸಣ್ಣ ಕುಟುಂಬಗಳ ಜೀವ ಹಿಂಡುತ್ತಿವೆ. ಪೈನಾನ್ಸ್‌ನವರ ಕಾಟ, ಖಾಸಗಿ ಸಾಲಗಾರರ ಕಿರುಕುಳ, ಪೊಲೀಸ್ ದೌರ್ಜನ್ಯ ಹಾಗೂ ಕಿರುಕುಳದಿಂದ ಕರುಳಬಳ್ಳಿಗಳನ್ನು ಓದಿಸಿ ವಿದ್ಯಾವಂತರನ್ನಾಗಿ ಮಾಡುವ ಕನಸುಗಳು, ಆಹಾರ, ಆರೋಗ್ಯದಂತಹ ತಾಪತ್ರಯಗಳಿಂದ ಕನಿಷ್ಠ ಜೀವನ ನಡೆಸುವುದೂ ಕಷ್ಟವಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಪೊಲೀಸರು ಸುಖಾ ಸುಮ್ಮನೆ ಕಿರುಕುಳ ನೀಡುತ್ತಿದ್ದಾರೆ. ಇದರ ವಿರುದ್ಧ ಸಂಬಂಧಪಟ್ಟವರು ಕೂಡಲೇ ಕ್ರಮ ಕೈಗೊಂಡು ನಮ್ಮಂಥ ಬಡಪಾಯಿಗಳನ್ನು ರಕ್ಷಿಸಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

“ಗಂಗಾವತಿ ಸೇರಿದಂತೆ ಇತರೆ ಪಟ್ಟಣ, ನಗರಗಳಲ್ಲಿ ಆಟೋ ನಿಲ್ದಾಣಗಳನ್ನು ಪುರಸಭೆ, ನಗರಸಭೆಯವರು ವ್ಯವಸ್ಥೆ ಮಾಡಿ ಕೊಟ್ಟಿದ್ದಾರೆ. ಸಿಂಧನೂರ ನಗರದಲ್ಲಿ ನಮಗೊಂದು ಆಟೋ ನಿಲ್ದಾಣವಿಲ್ಲ. ಪೊಲೀಸ್ ನವರು ನಮ್ಮ ಕಷ್ಟ ಕೇಳೋದಿಲ್ಲ. ನಿಲ್ದಾಣ ಹಾಗೂ ರಸ್ತೆ ಪಕ್ಕದಲ್ಲಿ ಆಟೋ ನಿಲ್ಲಿಸಿದ್ದರು ಕೂಡಾ ಕೇಳದೆಯೇ ಸಾಹುಕಾರರ ಕಾರ್ ಬಿಟ್ಟು ಬಡವರ ಆಟೋ ಮೇಲೆಯೇ ಪೊಲೀಸ್ ಲಾಠಿ ಪ್ರಹಾರ ಮಾಡುತ್ತಿದ್ದಾರೆ. ಅಶೋಕ ಭವನ(ಚೆನ್ನಮ್ಮ ಸರ್ಕಲ್)ಹಳೇ ಬಸ್ ನಿಲ್ದಾಣ ಒಳಗಡೆ ಆಟೋ ನಿಲ್ದಾಣವನ್ನು ಮಾಡಬೇಕು. ಈ ವಿಷಯವನ್ನು ನಗರಸಭೆ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ನಿರ್ಣಯ ಮಾಡಬೇಕು. ಅಶೋಕ ಭವನದ ಒಳಗೆ ಬಾರ್ ಶಾಪ್ ಮುಂದೆ ಖಾಸಗಿ ಕಾರ್ ಇತರೆ ವಾಹನಗಳು ಅನಾವಶ್ಯಕ ಪಾರ್ಕಿಂಗ್ ಮಾಡುವುದರಿಂದ ನಮಗೆ ತೊಂದರೆಯಾಗುತ್ತಿದೆ. ಆಟೋ ಹೊರತುಪಡಿಸಿ ಇತರೆ ವಾಹನಗಳ ಪಾರ್ಕಿಂಗ್ ನಿರ್ಬಂಧಿಸಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ರಾಯಚೂರು | ಕನಿಷ್ಠ ಬೆಂಬಲಬೆಲೆ ಯೋಜನೆಯಡಿ ಜೋಳ ಖರೀದಿ ಕೇಂದ್ರಕ್ಕೆ ಚಾಲನೆ

ಪ್ರತಿಭಟನೆಯಲ್ಲಿ ಟಿಯುಸಿಐ ರಾಜ್ಯ ಉಪಾಧ್ಯಕ್ಷ ಎಂ. ಗಂಗಾಧರ, ಆರ್‌ಸಿಎಫ್ ನ ಆದೇಶ ನಗನೂರ, ಹೆಚ್. ಆರ್. ಹೊಸಮನಿ, ಹುಲುಗಪ್ಪ ಬಳ್ಳಾರಿ, ಹನುಮಂತ ಪಗಡದಿನ್ನಿ ಕ್ಯಾಂಪ್, ಶಂಕರಪ್ಪ ಎಲೆ ಕೂಡ್ಲಿಗಿ ಕ್ಯಾಂಪ್, ಸಿದ್ದು ಮಲ್ಲಯ್ಯ ಕ್ಯಾಂಪ್, ವೆಂಕಟೇಶರೆಡ್ಡಿ ಮುಳ್ಳೂರು‌, ನಾಗರಾಜ ಮುಳ್ಳೂರು ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ಖಂಡಿಸಿ ಸೆ.28ರಂದು ಧರಣಿ: ಶಾಸಕಿ ಕರೆಮ್ಮ ನಾಯಕ

ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ನಾರಾಯಣಪುರ...

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...