ರಾಯಚೂರು | ರಿಮ್ಸ್ ಆಸ್ಪತ್ರೆಯಲ್ಲಿ ಮಕ್ಕಳ ಕಳ್ಳತನಕ್ಕೆ ಯತ್ನ ; ಸಿಕ್ಕಿಬಿದ್ದ ಮಂಗಳಮುಖಿ

Date:

Advertisements

ಮಂಗಳಮುಖಿಯೊಬ್ಬರು ತಡರಾತ್ರಿ ಬಾಣಂತಿಯರ ಕೋಣೆಗೆ ನುಗ್ಗಿದ್ದು ಆಸ್ಪತ್ರೆ ರೋಗಿಗಳು ಮಕ್ಕಳ ಕಳ್ಳನೆಂದು ಆರೋಪಿಸಿ ತರಾಟೆಗೆ ತೆಗೆದುಕೊಂಡು ಪೊಲೀಸರಿಗೆ ಒಪ್ಪಿಸಿದ ಘಟನೆ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

ರಾಯಚೂರು ತಾಲ್ಲೂಕಿನ ಯರಮರಸ್ ಗ್ರಾಮದಲ್ಲಿ ವಾಸವಾಗಿರುವ ಮಂಗಳಮುಖಿ ಶರಣಪ್ಪ ಮಕ್ಕಳ ಕಳ್ಳನೆಂದು ಆರೋಪಕ್ಕೆ ಗುರಿಯಾಗಿ ಸ್ಥಳೀಯರ ಕೈಗೆ ಸಿಕ್ಕಿ‌ ಬಿದ್ದಿದ್ದಾನೆ. ಮಂಗಳಮುಖಿ ಶರಣಪ್ಪ ಬಾಣಂತಿಯರ ವಾರ್ಡ್ ಬಳಿ ಮಧ್ಯರಾತ್ರಿ 2 ಗಂಟೆಗೆ ಬಂದು ಮಕ್ಕಳನ್ನು ಕಳ್ಳತನ ಮಾಡಲು ಯತ್ನಿಸಿದ್ದಾನೆ ಎಂದು ಕಳ್ಳನನ್ನು ಹಿಡಿದ ತರಾಟೆ ತೆಗೆದುಕೊಂಡರು ಎನ್ನಲಾಗಿದೆ.

ಮಂಗಳಮುಖಿ ಶರಣಪ್ಪ ನಿನ್ನೆ ತನ್ನ ಗೆಳೆಯನೊಂದಿಗೆ ರಿಮ್ಸ್ ಆಸ್ಪತ್ರೆಗೆ ನುಗ್ಗಿ ರಾತ್ರಿ ಹೊರಗಡೆ ಮಲಗಿಕೊಂಡಿದ್ದಾನೆ. ಎಲ್ಲರೂ ನಿದ್ರೆಯಲ್ಲಿರುವಾಗ ಮಗು ಕಳ್ಳತನ ಮಾಡುತ್ತಿದ್ದ ಎಂದು ಅಲ್ಲಿಯೇ ಇದ್ದ ರೋಗಿಯ ಸಂಬಂಧಿಕರು ಹಿಡಿದು ಹೋಮ್ ಗಾರ್ಡ್ ಗಳಿಗೆ ಕರೆದಿದ್ದಾರೆ. ಮಹಿಳೆಯಂತೆ ಸಿದ್ಧವಾಗಿ ಬಂದಿದ್ದು ಆತ ಮಂಗಳಮುಖಿಯಲ್ಲ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನೆ ಬಳಿಕ ರಿಮ್ಸ್ ಆಡಳಿತ ಮಂಡಳಿ ಮತ್ತು ಗೃಹ ರಕ್ಷಕ ಸಿಬ್ಬಂದಿಗಳ ವಿರುದ್ಧ ರೋಗಿಗಳು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕುಡಿಯುವ ನೀರಿಗಾಗಿ ಪಂಚಾಯಿತಿಗೆ ಬೀಗ

ಬೆಳಿಗ್ಗೆ ನಗರದ ಮಾರ್ಕೆಟಿಯಾರ್ಡ್ ಪೊಲೀಸರು ಬಿಎನ್ಎಸ್ಎಸ್ ಕಾಯ್ದೆಯ ಸೆಕ್ಷನ್ 128 ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಆತ ಮಂಗಳಮುಖಿಯಾಗಿದ್ದು ರಾತ್ರಿ ವೇಳೆ ತಡವಾಗಿದ ಕಾರಣ ಆಸ್ಪತ್ರೆಯಲ್ಲಿ ಮಲಗಿದ್ದಾನೆ ಆತನ ಸಹೋದ್ಯೋಗಿ ಪರಾರಿಯಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X