ರಾಯಚೂರು | ಟೋಲ್ ಗೇಟ್ ತೆರವುಗೊಳಿಸಲು ರಸ್ತಾ ರುಕೋ ಪ್ರತಿಭಟನೆ

Date:

Advertisements

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗೊಬ್ಬುರ ಹೋಬಳಿ ವ್ಯಾಪ್ತಿಯ ಕಾಕರಗಲ್ ಬಳಿಯಿರುವ ಟೋಲ್‌ಗೇಟ್ ತೆರವುಗೊಳಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆ ರಸ್ತಾ ರುಕೊ ಪ್ರತಿಭಟನೆ ನಡೆಸಿತು.

ಕಲ್ಮಲ್‌ನಿಂದ ತಿಂಥಣಿ ಬ್ರಿಡ್ಜ್ ವರೆಗಿನ ರಾಜ್ಯ ಹೆದ್ದಾರಿ‌ವರೆಗೆ ‌ಅವೈಜ್ಞಾನಿಕವಾಗಿ ಟೋಲ್‌ಗೇಟ್ ನಿರ್ಮಾಣ ಮಾಡಿ ಹಣ ವಸೂಲಿ ಮಾಡುತ್ತಿರುವುದು ಸರಿಯಲ್ಲ. ಕಲ್ಮಲ್ ಮತ್ತು ತಿಂಥಣಿ ಬ್ರಿಡ್ಜ್ ರಾಜ್ಯ ಹೆದ್ದಾರಿಗೆ ಒಳಪಟ್ಟರೂ ತಾಲೂಕಿನಲ್ಲಿ ಹೇಳಿಕೊಳ್ಳುವಂತಹ ಯಾವುದೇ ಕಾರ್ಖಾನೆಗಳಾಗಲಿ, ವಾಣಿಜ್ಯ ವ್ಯಾಪಾರಗಳಲೀ ನಡೆಯುತ್ತಿಲ್ಲ. ರಾಜಕೀಯ ಲಾಭಕ್ಕಾಗಿ ಜನ ಪ್ರತಿನಿಧಿಗಳು 2010ರಲ್ಲಿ 192 ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಿಸಲಾಗಿದ್ದ ಅದೇ ರಸ್ತೆಗೆ ಕೆಆರ್‌ಡಿಸಿಎಲ್ ನಿಂದ 70 ಕೋಟಿ ವೆಚ್ಚದಲ್ಲಿ ಪ್ಯಾಚ್ ವರ್ಕ್ ಡಾಂಬರೀಕರಣ ಮಾಡಿದ್ದಾರೆ. ಈ ಸಮಸ್ಯೆಗಳನ್ನು ಬಗರೆಹರಿಸುವುದು ಬಿಟ್ಟು ಟೋಲ್‌ ನಿರ್ಮಿಸಿ ಸಾಮಾನ್ಯ ಜನರಿಂದ ಹಣ ಪೀಕುತ್ತಿದ್ದಾರೆ” ಎಂದು ಸಂಘಟನೆಯ ಸದಸ್ಯರು, ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

“ದೇವದುರ್ಗ ತಾಲೂಕಿನಲ್ಲಿ ಬಹುತೇಕ ಶೇ. 80 ರಷ್ಟು ರೈತರು ಕೂಲಿಕಾರರು ಮತ್ತು ಕಾರ್ಮಿಕರಿಂದ ಕೂಡಿದ್ದು ದಿನನಿತ್ಯ ಹೊಲದ ಕೆಲಸಗಳಿಗೆ ಸಾಮಗ್ರಿ ತರಲು, ಎಣ್ಣೆ, ಗೊಬ್ಬರ, ಬೀಜ, ದವಸ ಧಾನ್ಯಗಳನ್ನು ಮಾರಾಟ ಮಾಡಲು ಹಾಗೂ ಎತ್ತು, ಹಸು, ಕುರಿ, ಖರೀದಿಸಲು ಮಾರಾಟ ಮಾಡಲು ಪಕ್ಕದ ದೇವದುರ್ಗಕ್ಕೆ ಪ್ರತಿದಿನ ಹೋಗಬೇಕಾದ ಅನಿವಾರ್ಯತೆ ಇರುತ್ತದೆ. ಮತ್ತು ಇಲ್ಲಿ ಯಾವುದೇ ಬೃಹತ್ ಕೈಗಾರಿಕ ಕಂಪನಿಗಳು ಇರುವುದಿಲ್ಲ ಈಗಾಗಲೇ ರೈತರು ಬರಗಾಲ ಬೆಳೆ ನಷ್ಟ ಅತೀವೃಷ್ಟಿ ಮತ್ತು ಬೆಲೆ ಇಳಿಕೆಯಿಂದ ತತ್ತರಿಸಿ ಹೋಗಿದ್ದು ಕೃಷಿ ಕ್ಷೇತ್ರದಲ್ಲಿ ವರ್ಷಕ್ಕಿಂತಲೂ ಈ ವರ್ಷ ತಾಲ್ಲೂಕಿನ ರೈತರು ಬಹಳ ನಷ್ಟದ ಹಂಚಿನಲ್ಲಿದ್ದಾರೆ ಜೊತೆಗೆ ಇಷ್ಟಾದರೂ ಸರಕಾರದ ಅಚಾತುರ್ಯದ ನಿರ್ಧಾರದಿಂದ ಟೋಲ್ ಗೇಟ್ ನಿರ್ಮಿಸಿ ಇಲ್ಲಿನ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ” ಎಂದು ಆಕ್ರೋಶಿಸಿದರು.

ಟೋಲ್ ಗೇಟ್ ನಿಂದ ಇನ್ನೊಂದು ಟೋಲ್ ಗೇಟ್ ವರೆಗೂ ನಿರ್ಮಿಸಲು ಸುಮಾರು 50 ರಿಂದ 60 ಕಿ.ಮೀ. ಅಂತರ ಇರಬೇಕು. ಒಂದೇ ರಸ್ತೆ ತಿಂಥಣಿ ಬ್ರಿಜ್ ವರೆಗೆ ಕೇವಲ 73 ಕಿ.ಮೀ. ಅಂತರದಲ್ಲಿ 02 ಟೋಲ್ಲೇಟ್ ನಿರ್ಮಾಣ ಮಾಡುತ್ತಿರುವುದು ಅವೈಜ್ಞಾನಿಕವಾಗಿದೆ. ಕೂಡಲೇ ರಾಜ್ಯ ಸರಕಾರ ರೈತರಿಂದ ಹಗಲು ದರೋಡೆ ಮಾಡುವುದನ್ನು ನಿಲ್ಲಿಸಿ ಟೋಲ್ ಗೇಟನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿದರು.

ಸಾಂಕೇತಿಕ ಧರಣಿ ನಡೆಸಿ ಸ್ಥಳಕ್ಕೆ ರಾಯಚೂರು ಸಂಸದರಾದ ಜಿ ಕುಮಾರ ನಾಯ್ಕ ಅವರಿಗೆ ಮನವಿ ಸಲ್ಲಿಸಿದರು.

ಇದನ್ನೂ ಓದಿ: ರಾಯಚೂರು | ಮಾದಕ ವಸ್ತು ಮಾರಾಟ ಜಾಲ ಕಡಿವಾಣಕ್ಕೆ ಮನವಿ

Advertisements


ಈ ವೇಳೆ ರೈತ ಸಂಘದ ರಾಜ್ಯ ಮುಖಂಡ ಚಾಮರಸ ಮಾಲಿ ಪಾಟೀಲ್, ಜಿಲ್ಲಾಧ್ಯಕ್ಷ ಪ್ರಭಾಕರ ಇಂಗಳದಾಳ, ಬೂದಯ್ಯ ಸ್ವಾಮಿ, ರತ್ನಮ್ಮ ಇನ್ನಿತರರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X