ರಾಯಚೂರು | ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಸಫಾಯಿ ಕರ್ಮಚಾರಿ ಕ್ಷೇಮಾಭಿವೃದ್ಧಿ ಸಂಘ ಆಗ್ರಹ

Date:

Advertisements

ರಾಯಚೂರು ನಗರದ ಎಸ್‌ಎನ್‌ಟಿ ಮತ್ತು ಮಿನಿ ಟಾಕೀಸ್ ಕೆಡವಿ ಸರ್ಕಾರಿ ಕೋಟೆ ಕಂದಕದ ಸ್ಥಳವನ್ನು ಅತಿಕ್ರಮಿಸಿ ಬಹುಮಹಡಿ ಕಟ್ಟಡ ನಿರ್ಮಾಣ ಮಾಡುತ್ತಿರುವುದನ್ನು ತಡೆಯಬೇಕು ಎಂದು ಸಫಾಯಿ ಕರ್ಮಚಾರಿ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರಾಚ್ಯವಸ್ತು ಇಲಾಖೆಯ ಕ್ಯೂರೇಟರ್ ಸರ್ಕಾರ ವಸ್ತು ಸಂಗ್ರಹಾಲಯ, ರಾಯಚೂರು ನಗರಸಭೆ ಪೌರಾಯಕ್ತರಿಗೆ ಪತ್ರ ಬರೆದಿದೆ.

ನಗರದ ಎಸ್‌ಎನ್‌ಟಿ ಮತ್ತು ಮಿನಿ ಟಾಕೀಸ್‌ ತೆರವುಗೊಳಿಸಿ ಅದೇ ಸ್ಥಳದಲ್ಲಿ ಕಟ್ಟಡ ನಿರ್ಮಾಣ ಮಾಡುತ್ತಿದ್ದಾರೆ. ಆದರೆ ಹಿಂಬದಿಯಲ್ಲಿರುವ ಐತಿಹಾಸಿಕ ಕೋಟೆ ಕಂದಕದ ಸ್ಥಳವನ್ನು ಒತ್ತುವರಿ ಮಾಡಿಕೊಂಡು ಬಹುಮಹಡಿ ಕಟ್ಟಡ ನಿರ್ಮಾಣ ಮಾಡುತ್ತಿರುವುದು ಕಂಡುಬಂದಿದೆ.

ಯಾವುದೇ ಸೆಟ್‌ಬ್ಯಾಕ್ ಬಿಡದೆ ನಕ್ಷೆಯ ವಿರುದ್ಧವಾಗಿ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ಬಹುಮಹಡಿ ಕಟ್ಟಡ ನಿರ್ಮಾಣ ತಡೆದು ಅತಿಕ್ರಮಿಸಿದ ಸ್ಥಳವನ್ನು ಪರಿಶೀಲನೆ ಮಾಡಿ ತೆರವುಗೊಳಿಸಬೇಕು ಎಂದು ಸಫಾಯಿ ಕರ್ಮಚಾರಿ ಕ್ಷೇಮಾಭಿವೃದ್ಧಿ ಸಂಘದಿಂದ ದೂರು ನೀಡಿದ್ದಾರೆ.

Advertisements

ರಾಜ್ಯ ಸಂರಕ್ಷಿತ ನಗರದ ಕೋಟೆ ಬಾಗಿಲು ನವರಂಗ ದರ್ವಾಜಾ ಸ್ಮಾರಕದಿಂದ ನೈರುತ್ಯಕ್ಕೆ 209.49 ಮೀಟರ್ ಅಂತರದಲ್ಲಿದ್ದು, ಸ್ಮಾರಕದ ನಿಯಂತ್ರಣ ಪ್ರದೇಶದಲ್ಲಿ ಬರುತ್ತದೆ. ಕರ್ನಾಟಕ ಪ್ರಾಚೀನ ಮತ್ತು ಐತಿಹಾಸಿಕ ಸ್ಮಾರಕಗಳು ಹಾಗೂ ಪುರಾತತ್ವ ಸ್ಥಳಗಳ ಅವಶೇಷ ಕಾಯ್ದೆ 1961 ಮತ್ತು ನಿಯಮ 1965ರ ಪ್ರಕಾರ ಸಂರಕ್ಷಿತ ಸ್ಮಾರಕ ಪ್ರದೇಶದ ಯಾವುದೇ ದಿಕ್ಕಿನಿಂದ 100 ಮೀಟರ್ ನಿಷೇಧಿತ ಪ್ರದೇಶವಾಗಿದ್ದು, ಯಾವುದೇ ಕಟ್ಟಡ ನಿರ್ಮಾಣ, ಗಣಿಗಾರಿಕೆ ಇತರೆ ಚಟುವಟಿಕೆಗಳನ್ನು ನಡೆಸಲು ನಿಷೇಧಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಮೂಲಭೂತ ಸೌಲಭ್ಯ ವಂಚಿತ ಸರ್ಕಾರಿ ಪ್ರೌಢಶಾಲೆ, ಪರಿಹಾರಕ್ಕೆ ಮಕ್ಕಳ ಆಗ್ರಹ

“ನಿಷೇಧಿತ ಪ್ರದೇಶದಲ್ಲಿ ಸಾರ್ವಜನಿಕ ಯೋಜನೆ ಕಾಮಗಾರಿಯನ್ನು ಒಳಗೊಂಡಂತೆ ಯಾವುದೇ ಕಾಮಗಾರಿ ನಿರ್ಮಾಣಕ್ಕೆ ಅನುಮತಿ ನೀಡಲಾಗುವುದಿಲ್ಲ. 200 ಮೀಟರ್ ನಿಷೇಧಿತ ಪ್ರದೇಶವಾಗಿದ್ದು, ಕಟ್ಟಡ ನಿರ್ಮಾಣಕ್ಕೆ ಮುನ್ನ ಆಯುಕ್ತರ ಪೂರ್ವಾನುಮತಿ ಪಡೆಯಬೇಕು. ಕೂಡಲೇ ಪರಿಶೀಲನೆ ಮಾಡಿ ಕ್ರಮ ವಹಿಸಬೇಕು” ಎಂದು ಸಫಾಯಿ ಕರ್ಮಚಾರಿ ಕ್ಷೇಮಾಭಿವೃದ್ಧಿ ಸಂಘ ಒತ್ತಾಯಿಸಿದೆ.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X