ರಾಯಚೂರು | ಬೈಪಾಸ್ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹಿಸಿ ಸೋಲಿಡಾರಿಟಿ ಯೂತ್‌ ಮೂಮೆಂಟ್ ಮನವಿ

Date:

Advertisements

ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದ ಬೆಂಗಳೂರು ಬೈಪಾಸ್ ರಸ್ತೆಯ ಕಾಮಗಾರಿ ತುಂಬಾ ನಿಧಾನಗತಿಯಲ್ಲಿ ಹಾಗೂ ಅಪೂರ್ಣವಾಗಿ ಅರ್ಧಕ್ಕೆ ನಿಂತಿದ್ದು, ಆದಷ್ಟು ಬೇಗ ದುರಸ್ತಿಗೊಳಿಸಬೇಕು ಎಂದು ಆಗ್ರಹಿಸಿ ಸೋಲಿಡಾರಿಟಿ ಯೂತ್‌ ಮೂಮೆಂಟ್ ವತಿಯಿಂದ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ದಿನನಿತ್ಯ ಸಾವಿರಾರು ಸಂಖ್ಯೆಯಲ್ಲಿ ವಾಹನಗಳು ಓಡಾಡುತ್ತವೆ. ರಸ್ತೆಯಲ್ಲಿ ಗುಂಡಿಗಳು ಬಿದ್ದಿವೆ. ಈ ರಸ್ತೆಯಲ್ಲಿ ಶಾಲಾ- ಕಾಲೇಜು ವಿದ್ಯಾರ್ಥಿಗಳು ಓಡಾಟ ಮಾಡುತ್ತಿದ್ದಾರೆ. ತ್ತೀಚೆಗೆ ಮಾನ್ವಿ ತಾಲೂಕಿನಲ್ಲಿ ನಡೆದ ಭೀಕರ ಅಪಘಾತ ಘಟನೆ ರಸ್ತೆ ಗುಂಡಿಗಳಿಂದ ಸಂಭವಿಸಿದೆ ಎಂದು ಮಾಧ್ಯಮದಲ್ಲಿ ವರದಿಯಾಗಿತ್ತು. ಆ ರೀತಿ ಘಟನೆಯಾಗದಂತೆ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು. ಆ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಸೋಲಿಡಾರಿಟಿ ಯೂತ್‌ ಮೂಮೆಂಟ್ ಕಾರ್ಯಕರ್ತರು ಒತ್ತಾಯಿಸಿದರು.

ತಾಲೂಕಿನ ಹಲವು ಕಡೆಗಳಲ್ಲಿ ಹದಗೆಟ್ಟ ರಸ್ತೆಗಳಿವೆ. ಅವುಗಳನ್ನು ಕೂಡಲೇ ದುರಸ್ತಿ ಮಾಡಬೇಕು. ಮುಖ್ಯ ರಸ್ತೆಗೆ ಇರುವ ಶಾಲೆ, ಆಸ್ಪತ್ರೆ, ಹತ್ತಿರ ಎಚ್ಚರಿಕೆ ಬೋರ್ಡ್ ಅಳವಡಿಸಿ, ರಸ್ತೆ ಕಾಮಗಾರಿ ಹೆಸರಿನಲ್ಲಿ ಬೋಗಸ್ ಬಿಲ್ ಬರೆದು ಸರ್ಕಾರದ ಹಣ ಲೂಟಿ ಮಾಡಿದ್ದಾರೆ. ಇದರ ಬಗ್ಗೆ ಸಿ.ಒ.ಡಿ ತನಿಖೆಯಾಗಬೇಕು. ಲೋಕೋಪಯೋಗಿ ಇಲಾಖೆಯಲ್ಲಿ ಅನೇಕರು ಒಂದೇ ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಂಥವರನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು.

Advertisements

ಈ ಸುದ್ದಿ ಓದಿದ್ದೀರಾ ? ರಾಯಚೂರು | ಸಂಪೂರ್ಣ ಹದಗೆಟ್ಟ ರಸ್ತೆ: ಶೀಘ್ರವೇ ದುರಸ್ತಿ ಪಡಿಸುವಂತೆ ಗ್ರಾಮಸ್ಥರು, ವಿದ್ಯಾರ್ಥಿಗಳ ಆಗ್ರಹ

ಈ ಸಂದರ್ಭದಲ್ಲಿ ಸೋಲಿಡಾರಿಟಿ ಯೂತ್‌ ಮೂಮೆಂಟ್ ಅಧ್ಯಕ್ಷ ಅಮ್ಮದ್ ಅಲಿ, ಮಹಾಂತೇಶ್ ಸ್ಪಂದನ ಶಾಲೆ, ದಾನಯ್ಯ ಜ್ಞಾನ ಗಂಗಾ ಶಾಲೆ, ಸೇವಿಯರ್ ಜೇಮ್ಸ್, ಅಬ್ದುಲ್ ಸಲಾಂ, ಅಬ್ದುಲ್ ನಾಯುಮ್, ಮೊಹಮ್ಮದ್, ಸೈಯದ್ ಮುನೀರ್, ಬಾಬಾ ಕೆ ಬಿ ಎನ್, ಅಹಮದ್ ಮೆಡಿಕಲ್, ಜಾವೇದ್, ಖಾಜಾ ಗೀರ್ಣಿ, ಪಾಷಾ ಗಿರ್ಣಿ, ನವಾಬ್, ಸಲೀಂ ಯೂನುಸ್, ಮೆಹಬೂಬ್, ರಾಜು, ಸದ್ದಾಂ, ವಾಹೀದ್, ಖಲೀಲ್, ಖಾಲಿದ್, ಆನಂದ, ಶಂಕರಪ್ಪ ಸೇರಿದಂತೆ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X