ರಾಯಚೂರು |‌ ಡಿ.04 ರಂದು ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ

Date:

Advertisements

ರಾಜ್ಯ ಸರ್ಕಾರಿ ನೌಕರರ ಸಂಘದ ರಾಯಚೂರು ಜಿಲ್ಲಾ ಶಾಖೆ ಚುನಾವಣೆ ಡಿಸೆಂಬರ್ 04ರಂದು ನಡೆಯಲಿದ್ದು, ಸರ್ಕಾರಿ ನೌಕರರು ಮತ ಚಲಾಯಿಸಬೇಕು ಎಂದು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಅಭ್ಯರ್ಥಿ ಆಂಜನೇಯ ಕೆ‌ ಹೇಳಿದರು.

ನಗರದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, “2024-26ನೇ ಸಾಲಿನ ಅವಧಿಗೆ ಜಿಲ್ಲಾ ಶಾಖೆಯ ಮೊದಲ ಹಂತದಲ್ಲಿ ಪದಾಧಿಕಾರಿಗಳ ಚುನಾವಣೆ ನಡೆದಿದ್ದು, ಇದೀಗ ಜಿಲ್ಲಾದ್ಯಕ್ಷ, ಖಜಾಂಚಿ ಮತ್ತು ರಾಜ್ಯ ಪರಿಷತ್ ಸ್ಥಾನಕ್ಕೆ ಚುನಾವಣೆ ಡಿಸೆಂಬರ್‌ 4ರಂದು ನಡೆಯಲಿದೆ” ಎಂದರು.

“ಅಧ್ಯಕ್ಷ ಸ್ಥಾನಕ್ಕೆ ಆಂಜನೇಯ ಕೆ ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ ವೆಂಕಟೇಶ ಡಿ ಹಾಗೂ ಖಜಾಂಚಿ ಸ್ಥಾನಕ್ಕೆ ರಾಜಶೇಖರ ಅವರು ಸ್ಪರ್ಧಿಸಿದ್ದಾರೆ. ಸಮಾನ ಮನಸ್ಕ ನೌಕರರ ಹಿತ ಪಡೆಯಿಂದ ಸ್ಪರ್ಧಿಸಿದವರಿಗೆ ತಮ್ಮ ಮತ ಚಲಾಯಿಸಬೇಕು” ಎಂದು ಹೇಳಿದರು.

Advertisements

“ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ದೊರೆಯುವ ಸೌಲಭ್ಯಗಳನ್ನು ಸೇರಿದಂತೆ ಅನೇಕ ಬೇಡಿಕೆಗಳು ಕುರಿತು ಪ್ರಣಾಳಿಕೆಯಲ್ಲಿವೆ. ಭ್ರಷ್ಟಾಚಾರ ರಹಿತ, ನಿಸ್ವಾರ್ಥ ಆಡಳಿತ ನೀಡುವ ರಾಜ್ಯದಲ್ಲಿ ಏಕೈಕ ಸಂಘವಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಮರ್ಪಕ ಬಸ್‌ ವ್ಯವಸ್ಥೆಯಿಲ್ಲದೆ ಶಾಲಾ ಮಕ್ಕಳ ಪರದಾಟ; ರಸ್ತೆ ತಡೆದು ಪ್ರತಿಭಟನೆ

“ಎನ್‌ಪಿಎಸ್ ಕೈಬಿಡಲು ಹೋರಾಟ ತೀವ್ರಗೊಳಿಸುವುದು, ಆರೋಗ್ಯ ಸಂಜೀವಿನಿ ಯೋಜನೆ ಜಾರಿ, ಒಪಿಎಸ್ ಜಾರಿಗೊಳಿಸಲು ಹೋರಾಟ ನಡೆಸುವುದು, ನೌಕರರಿಗೆ ಅನುಗುಣವಾಗುವ ನೌಕರರ ಭವನ ನಿರ್ಮಾಣ, ವಾಣಿಜ್ಯ ಮಳಿಗೆ, ವಸತಿ ಗೃಹ ನಿರ್ಮಾಣಕ್ಕೆ ಒತ್ತು ನೀಡುವುದಾಗಿದೆ” ಎಂದರು.

ಈ ಸಂದರ್ಭದಲ್ಲಿ ವೆಂಕಟೇಶ ಡಿ, ರಾಜಶೇಖರ, ವೀರಭದ್ರಪ್ಪ, ರಾಘವೇಂದ್ರ, ಚಾಮರಾಜ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X