ರಾಯಚೂರು | ಬೀದಿನಾಯಿ ದಾಳಿ; ಯುವತಿ ಸಾವು ಬದುಕಿನೊಂದಿಗೆ ಹೋರಾಟ

Date:

Advertisements

ರಾಯಚೂರು ನಗರದ ಮಡ್ಡಿಪೇಟೆ ಬಡಾವಣೆಯಲ್ಲಿ ಬೀದಿನಾಯಿ ದಾಳಿಗೆ ಒಳಗಾಗಿ ಗಾಯಗೊಂಡಿದ್ದ ಯುವತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಪೋಷಕರು ಆತಂಕದಲ್ಲಿದ್ದಾರೆ.

ನಗರದ ವಾರ್ಡ್ ನಂ.23ರ ಮಡ್ಡಿಪೇಟೆ ಬಡಾವಣೆಯ ಲಕ್ಷ್ಮಣ ಸ್ವಾಮಿ ಮಠದ ಹಿಂದೆ ಬೀದಿನಾಯಿ ಯುವಮತಿಯ ಮೇಲೆ ದಾಳಿ ಮಾಡಿದಾಗ ಕೆಳಗ್ಗೆ ಬಿದ್ದ ಯುವತಿ ಗಂಭೀರ ಗಾಯಗೊಂಡಿದ್ದು, ಇದೀಗ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ.

ಡಿಸೆಂಬರ್‌ 7ರ ಬೆಳಿಗ್ಗೆ ಮನೆಯ ಮುಂದೆ ಯುವತಿ ನಿಂತಿದ್ದಾಗ ಬೀದಿ ನಾಯಿಗಳ ದಂಡು ಯುವತಿಯ ಮೇಲೆ ದಾಳಿ ಮಾಡಿದೆ. ಯುವತಿ ಕೂಡಲೇ ಕೆಳಗೆ ಬಿದ್ದ ಕಾರಣ ತಲೆಗೆ ಗಂಭೀರ ಪೆಟ್ಟು ಬಿದ್ದಿದೆ. ನಂತರ ತಂದೆ ತಾಯಿ ಯುವತಿಯನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಂಜೆಯಾದರೂ ಯುವತಿಗೆ ಎಚ್ಚರವಾಗದ ಕಾರಣ ಅಂದು ಸಂಜೆ ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

Advertisements

“ರಿಮ್ಸ್ ಆಸ್ಪತ್ರೆ ವೈದ್ಯರು ಯುವತಿಗೆ ಚಿಕಿತ್ಸೆ ನೀಡಿದ್ದು, ತಲೆಗೆ ಪೆಟ್ಟು ಬಿದ್ದಿರುವ ಕಾರಣ ರಕ್ತ ಹೆಪ್ಪುಗಟ್ಟಿದೆ. ಹಾಗಾಗಿ ಯುವತಿ ಕೋಮಾಗೆ ಹೋಗಿದ್ದಾರೆಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ಆಸ್ಪತ್ರೆಗೆ ವರ್ಗಾವಣೆ ಮಾಡಿದ್ದಾರೆ. ಯುವತಿಯನ್ನು ಬಳ್ಳಾರಿ ಆಸ್ಪತ್ರೆಯಲ್ಲಿ ಒಂದು ದಿನ ಚಿಕಿತ್ಸೆ ನೀಡಿ ಸುಧಾರಿಸದ ಕಾರಣಕ್ಕೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಹೋಗಲು ತಿಳಿಸಿದ್ದಾರೆ. ಬೆಂಗಳೂರುನಲ್ಲಿ ಚಿಕಿತ್ಸೆ ಕೊಡಿಸಲು ಆರ್ಥಿಕ ವ್ಯವಸ್ಥೆ ಇಲ್ಲದ ಕಾರಣ ಪುನಃ ರಾಯಚೂರು ಜಿಲ್ಲಾಸ್ಪತ್ರೆಗೆ ಕರೆತಂದಿದ್ದೇವೆ” ಎಂದು ಯುವತಿಯ ಪಾಲಕರು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಅಲೆಮಾರಿಗಳಿಗೆ ಸೂರು ಕಲ್ಪಿಸಲು ಆಗ್ರಹ

“ಯುವತಿ ಬದುಕುವುದು ಕಷ್ಟ. ಏನಾದರೂ ಹೆಚ್ಚು ಕಡಿಮೆಯಾದರೆ ನಮ್ಮ ಮೇಲೆ ಆರೋಪ ಮಾಡಬೇಡಿ, ಅವಳ ಸಾವಿಗೆ ನಾವು ಕಾರಣರಲ್ಲವೆಂದು ಆಸ್ಪತ್ರೆ ವೈದ್ಯರು ಪತ್ರ ಬರೆಸಿಕೊಂಡು ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಂಡಿದ್ದಾರೆ” ಎಂದು ನೋವು ತೋಡಿಕೊಂಡರು.

“ನಗರದ ಕೆಲವು ದಿನ ಹಿಂದೆಯೂ ಮೂವರು ಮಕ್ಕಳ ಮೇಲೆ ಬೀದಿನಾಯಿಗಳು ದಾಳಿ ಮಾಡಿ ಗಂಭೀರ ಗಾಯಗೊಳಿಸಿದ್ದವು. ಬೀದಿನಾಯಿಗಳ ಹಾವಳಿ ಮೀತಿ ಮೀರಿದ್ದು, ನಿಯಂತ್ರಿಸಬೇಕಾದ ನಗರಸಭೆ ಕಣ್ಣುಮುಚ್ಚಿ ಕುಳಿತಿದೆ” ಎಂದು ಸಾರ್ವಜನಿಕರು ಆರೋಪಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X