ರಾಯಚೂರು | ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮಕೈಗೊಳ್ಳಿ: ಬಸನಗೌಡ ದದ್ದಲ್‌

Date:

Advertisements

ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಕುಡಿಯುವ ನೀರಿನ ಆಭಾವ ಉಂಟಾಗದಂತೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಶಾಸಕ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ದಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಯಚೂರು ನಗರದ ಗ್ರಾಮೀಣ ಶಾಸಕರ ಕಚೇರಿಯಲ್ಲಿ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

“ಬೇಸಿಗೆ ಕಾಲ ಆರಂಭವಾಗಿದ್ದು, ನಾಲ್ಕು ತಿಂಗಳುಗಳ ಕಾಲ ಗ್ರಾಮಗಳಲ್ಲಿ ಜನರಿಗೆ ಕುಡಿಯುವ ನೀರಿನ ಅಭಾವವಾಗಾದಂತೆ ನೋಡಿಕೊಳ್ಳಬೇಕು” ಎಂದು ಹೇಳಿದರು.

Advertisements

“ಆರ್‌ಡಬ್ಲ್ಯೂಎಸ್ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳು ಒಟ್ಟಾಗಿ ಸೇರಿ ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ, ಕ್ಯಾಂಪ್‌ಗಳಲ್ಲಿ ಕೂಡಲೇ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು. ಟ್ಯಾಂಕರ್ ಮಾಲೀಕರ ಜೊತೆ ಮಾತನಾಡಿ, ದರ ನಿಗದಿ ಮಾಡಿ ಅವುಗಳಿಗೆ ಜಿಪಿಎಸ್ ಅಳವಡಿಸಬೇಕು. ಗ್ರಾಮಗಳ ಜನರಿಗೆ ನೀರೊದಗಿಸುವ ಕೆಲಸ ಮಾಡನೇಕು” ಎಂದರು.

“ಅಗತ್ಯವಿದ್ದ ಕಡೆ ಖಾಸಗಿ ಬೊರ್‌ವೆಲ್ ಮಾಲೀಕರ ಜತೆಗೆ ಮಾತನಾಡಿ ಅವರ ಗ್ರಾಮಗಳ ಜನರಿಗೆ ಕುಡಿಯುವ ನೀರು ಒದಗಿಸಬೇಕು. ಬೋರ್‌ವೆಲ್ ಮಾಲೀಕರೊಂದಿಗೆ ಲೀಜ್ ಅಗ್ರಿಮೆಂಟ್ ಮಾಡಿಕೊಂಡು ಜನರಿಗೆ ನೀರು ಒದಗಿಸಬೇಕು. ಕೃಷ್ಣ ಮತ್ತು ತುಂಗಭದ್ರಾ ನದಿಗಳಲ್ಲಿ ಕೂಡ ನೀರು ಬತ್ತಿ ಹೋಗಿದೆ. ಜಲಮೂಲಗಳೂ ಕೂಡ ಬತ್ತಿ ಹೋಗಿವೆ. ಹಾಗಾಗಿ ನದಿ ಪಾತ್ರದ ಜನರಿಗೆ ನೀರಿನ ಆಭಾವವಾಗದಂತೆ ನೋಡಿಕೊಳ್ಳಬೇಕು” ಎಂದರು.

“ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಸಹಾಯವಾಣಿ ಆರಂಭಿಸಬೇಕು. ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಪಂಚಾಯಿತಿ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸಿ ಪಟ್ಟಿಯನ್ನು ಸಿದ್ಧಪಡಿಸಿ ತಾಲೂಕಿನ ಅಧಿಕಾರಿಗಳಿಗೆ ನೀಡಬೇಕು. ಆಯಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು. ಮೊದಲು ಕುಡಿಯುವ ನೀರು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ರೈತ ಮಾರುಕಟ್ಟೆ ಕರ ವಸೂಲಿಗೆ ಟೆಂಡರ್; ನಿಯಮ ಉಲ್ಲಂಘಿಸಿದಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲು 

ಸಭೆಯಲ್ಲಿ ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನಗೌಡ, ಉಪಾಧ್ಯಕ್ಷ ಬಷೀರ್ ಅಹ್ಮದ್, ಸಹಾಯಕ ಆಯುಕ್ತ ಸುಭಾಷ್, ತಹಶೀಲ್ದಾರ್ ಸುರೇಶ್ ವರ್ಮಾ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ವರದಿ : ಹಫೀಜುಲ್ಲ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X