ರಾಯಚೂರು | ಯರಗೇರಾ ತಾಲ್ಲೂಕು ಘೋಷಣೆಗೆ ಒತ್ತಾಯ – ಸಚಿವರಿಗೆ ಗ್ರಾಮಸ್ಥರ ಮನವಿ

Date:

Advertisements

ಯರಗೇರಾ ಹೋಬಳಿಯನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಬೇಕೆಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜು.21 ರಂದು ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಸಚಿವ ಶರಣಪ್ರಕಾಶ ಪಾಟೀಲ್ ಹಾಗೂ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ ಅವರಿಗೆ ಮನವಿ ಸಲ್ಲಿಸಿದರು.

ಯರಗೇರಾ ಹೋಬಳಿಗೆ 19 ಗ್ರಾಮಪಂಚಾಯತಿಗಳು, 78 ಗ್ರಾಮಗಳನ್ನು ಒಳಗೊಂಡು ಹೆದ್ದಾರಿ ರಸ್ತೆಯಲ್ಲಿದ್ದು ನೂರಾರು ಗ್ರಾಮಸ್ಥರಿಗೆ ತಾಲ್ಲೂಕು ಕೇಂದ್ರವಾದರೆ ಅನುಕೂಲವಾಗುತ್ತದೆ. 2020 ರಿಂದ ತಾಲ್ಲೂಕು ಕೇಂದ್ರವನ್ನಾಗಿಸಲು ನಿರಂತರ ಹೋರಾಟ ನಡೆಸಿಕೊಂಡು ಬರಲಾಗಿದೆ. ಇತ್ತೀಚಿಗೆ ಯರಗೇರಾ ಗ್ರಾಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿಗಳು ಹಾಗೂ ಸಚಿವರುಗಳಿಗೆ ಮನವಿ ಸಲ್ಲಿಸಿದರು ಸರ್ಕಾರದಿಂದ ಯಾವುದೇ ಸ್ಪಂದನೆ ಬಾರದೇ ಇರುವರಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ದಲಿತರಿಗೆ ಭೂಮಿ,ವಸತಿ ಹಕ್ಕುಪತ್ರ ನೀಡಲು ಒತ್ತಾಯ

ಈ ಸಂದರ್ಭದಲ್ಲಿ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಮಹ್ಮದ್ ನಿಜಾಮುದ್ದೀನ್, ಸಂಚಾಲಕರಾದ ಬಸವರಾಜ ಹೂಗಾರ, ಮಾಜಿ ಜಿ.ಪಂ.ಉಪಾಧ್ಯಕ್ಷರಾದ ಜಾಫರ್ ಅಲಿ ಪಟೇಲ್, ಎ.ಪಿ.ಎಂ.ಸಿ.ಅಧ್ಯಕ್ಷ ಮಲ್ಲಿಕಾರ್ಜುನಗೌಡ, ವಿದ್ಯಾನಂದ ರೆಡ್ಡಿ, ಕೆ.ಲಕ್ಷೀಪತಿ, ಹುಲಗಯ್ಯ, ಮಹ್ಮದ್ ರಫಿ, ಮೂರ್ತಿಶೆಟ್ಟಿ, ಎಂ. ನಾರಾಯಣ, ಕೆ.ರಮೇಶ, ಜಗದೀಶ್ ರೆಡ್ಡಿ, ಶ್ರೀನಿವಾಸ ರೆಡ್ಡಿ, ಗುಜ್ಜಲ್ ತಾಯಪ್ಪ, ಉಬ್ಬಳ್ ಬಡೇಸಾಬ್, ಫಹೀಮ್ ಖತೀಬ್, ಈರೇಶ್ ಸ್ವಾಮಿ, ಮುಕ್ತಾರ್, ರಿಜ್ವಾನ್, ಮಹ್ಮದ್ ಸೇರಿದಂತೆ ಅನೇಕರಿದ್ದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X