ರಾಯಚೂರು | ಕೋಮುವಾದಿ ಬಿಜೆಪಿಯನ್ನು ಸೋಲಿಸಬೇಕಿದೆ: ತುಹೀನ್ ದೆಬ್

Date:

Advertisements

ಶ್ರಮ, ಸಾರ್ವಭೌಮ, ಸಂಸ್ಕೃತಿ ಅಳಿಸಿ ಅದರ ಜಾಗದಲ್ಲಿ ಕಾರ್ಪೊರೇಟ್ ಪರವಾದ ಮನು ಸಂಸ್ಕೃತಿಯನ್ನು ಜಾರಿ ಮಾಡಲು ಹೊರಟ ಫ್ಯಾಸಿಸ್ಟ್ ಬಿಜೆಪಿ ಸರ್ಕಾರವನ್ನು ಸೋಲಿಸಬೇಕಿದೆ ಎಂದು ಆರ್‌ಸಿಎಫ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತುಹೀನ್ ದೆಬ್ ಹೇಳಿದರು.

ಅವರು ನಗರದ ಕನ್ನಡ ಭವನದಲ್ಲಿ ಕ್ರಾಂತಿಕಾರಿ ಸಾಂಸ್ಕೃತಿಕ ವೇದಿಕೆ ಆರ್‌ಸಿಎಫ್ ಹಮ್ಮಿಕೊಂಡಿದ್ದ ಎರಡು ದಿನಗಳ ʼಅಖಿಲಭಾರತ ಜನ ಸಾಂಸ್ಕೃತಿಕ ಶಿಬಿರʼ ಹಾಗೂ ಇಂಡಿಯಾ ವಸರ್ಸ್ ಹಿಂದೂರಾಷ್ಟ್ರ ಬಹುಭಾಷಾ ಕವಿಗೋಷ್ಠಿ ಉದ್ಘಾಟಿಸಿ ಮಾತನಾಡಿದರು.

ದೇಶದ ಬಹು ಸಂಸ್ಕೃತಿಯನ್ನು ನಾಶಮಾಡಿ, ಹಿಂದುತ್ವ ಆರ್‌ಎಸ್‌ಎಸ್‌, ಬಿಜೆಪಿ ಅಜಂಡದಂತೆ ಮನು ಸಂಸ್ಕೃತಿಯನ್ನು ಜನರ ಮೇಲೆ ಹೇರಲು ಹೊರಟಿರುವುದನ್ನು ಅವರು ಖಂಡಿಸಿದರು.

Advertisements

ಸಂವಿಧಾನ, ಪ್ರಜಾತಂತ್ರ, ಜಾತ್ಯಾತೀತ, ಮೀಸಲಾತಿಯನ್ನು ಉಳಿಸಲು ಸಾಂಸ್ಕೃತಿಕವಾಗಿ ತೀವ್ರ ಸಂಘರ್ಷಕ್ಕೆ ಇಳಿಯಬೇಕಾಗಿದ್ದು, 18ನೇ ಲೋಕಸಭಾ ಚುನಾವಣೆಯಲ್ಲಿ ಅತ್ಯವಶ್ಯಕವಾದ ಪಾತ್ರವನ್ನು ಆರ್‌ಸಿಎಫ್ ವಹಿಸಲಿದೆ ಎಂದರು.

ಟಿಯುಸಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆರ್.ಮಾನಸಯ್ಯ ಅವರು ಎರಡು ದಿನಗಳ ಶಿಬಿರ ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ಸೇರಿದಂತೆ ದೇಶದ 12ಕ್ಕೂ ಹೆಚ್ಚು ರಾಜ್ಯಗಳಿಂದ ಕವಿಗೋಷ್ಠಿಯಲ್ಲಿ ಭಾಗವಹಿಸಿದ ಕವಿ, ಸಾಹಿತಿ ಕಲಾವಿದರು 20ಕ್ಕೂ ಹೆಚ್ವು ಆರ್‌ಎಸ್‌ಎಸ್‌, ಬಿಜೆಪಿ ಹಿಂದುತ್ವ, ಫ್ಯಾಸಿಸಮ್ ವಿರುದ್ಧದ ಜನಪರ ಕವನಗಳನ್ನು ಅಚ್ಚುಕಟ್ಟಾಗಿ ಓದಿ ಫ್ಯಾಸಿಸ್ಟ್ ಸರ್ಕಾರ ಅಳಿಯಲಿ, ದೇಶ ಉಳಿಯಲಿ, ಸಂವಿಧಾನ ಉಳಿಸಿ, ಪ್ರಜಾಪ್ರಭುತ್ವ ರಕ್ಷಿಸಿ, ಜನ ಸಂಸ್ಕೃತಿ ಚಿರಾಯುವಾಗಲಿ ಎಂಬ ಆಧಾರದಡಿಯಲ್ಲಿ ಕ್ರಾಂತಿಕಾರಿ ಕವನಗಳ ವಾಚನ ಮಾಡಿದರು.

ಬಹುಭಾಷಾ ಕವಿಗೋಷ್ಠಿ ಅಧ್ಯಕ್ಷತೆವಹಿಸಿ ಮಾತನಾಡಿದ ಜನಕವಿ, ಸಾಹಿತಿ ಸಿ.ದಾನಪ್ಪ ನಿಲೋಗಲ್ ಮಾತನಾಡಿ, ಭಾರತವನ್ನು ಹಿಂದೂರಾಷ್ಟ್ರವನ್ನಾಗಿಸಲು ಫ್ಯಾಸಿಸ್ಟ್ ದುರಾಡಳಿತದ ಕಾರ್ಪೊರೇಟ್ ಸಂಸ್ಕೃತಿಯನ್ನು ಹಿಮ್ಮೆಟ್ಟಿಸಲು ಇಂದಿನ ಗೋಷ್ಠಿಯಲ್ಲಿ ಮೊಳಗಿದ ಇಂಡಿಯಾ ಪರ ಕವನಗಳು ಹಿಂದೂರಾಷ್ಟ್ರದ ನಕಲಿ ದೇಶಪ್ರೇಮಿ ಆರೆಸ್ಸೆಸ್ ಬಿಜೆಪಿಯ ಮುಖವಾಡ ಕಳಿಚಲು, ಜನ ತಾಂತ್ರಿಕತೆಯನ್ನು ದೇಶಕ್ಕೆ ಆರ್‌ಸಿಎಫ್ ಮೂಲಕ ರವಾನಿಸುವ ಏಕೈಕ ಜನತಾ ರಾಜಕೀಯ ಜನ ಸಾಂಸ್ಕೃತಿಕ ಪ್ರಜ್ಞೆ ಸಮಕಾಲೀನವಾಗಿದೆ ಎಂದರು.

ವೇದಿಕೆ ಮೇಲೆ ಕೊಲ್ಕತ್ತಾದ ಆರ್‌ಸಿಎಫ್‌ನ ರಾಷ್ಟ್ರೀಯ ಮುಖಂಡರಾದ ಅಶಿಮಗಿರಿ, ರಾಜ್ಯ ಉಸ್ತುವಾರಿ ಮುಖಂಡರಾದ ಎಂ.ಗಂಗಾಧರ ಉಪಸ್ಥಿತರಿದ್ದರು. ಸಾಂಸ್ಕೃತಿಕ ಪಟು ಎಂ.ಆರ್.ಭೇರಿ ಕವಿಗೋಷ್ಠಿ ನಡೆಸಿಕೊಟ್ಟರು. ಆದೇಶ ನಗನೂರು ನಿರೂಪಿಸಿದರು.

ಈ ಸಂದರ್ಭದಲ್ಲಿ ವೇಣುಗೋಪಾಲ್ ಕೇರಳ, ಬಾಲಕೃಷ್ಣ, ಪ್ರವಿಂಟ್, ಆಂಧ್ರ ಪ್ರದೇಶದ ರಾಮಣ್ಣ, ವೆಂಕಟೇಶ, ಮದ್ಯಪ್ರದೇಶದ ಫಹೀಮ್, ದೆಹಲಿಯ ನಿರಂಜನ್ ಆಜಾದ್, ಕವಿ, ಮಹೇಂದ್ರ ಕುರ್ಡಿ, ಆರ್. ಹುಚ್ಚರೆಡ್ಡಿ, ಎಚ್.ಆರ್. ಹೊಸಮನಿ, ಮುದಿಯಪ್ಪ, ರಂಜೀತ್, ಅಜೀಜ್ ಜಾಗೀರದಾರ್, ನಿರಂಜನ ಸೇರಿದಂತೆ ಇತರರು ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

 "ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಿಂದ ಸಾಕಷ್ಟು ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಗೊಳಗಾಗುವ ಪ್ರದೇಶಗಳ ಸಾರ್ವಜನಿಕರ...

ಬೀದರ್‌ | ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಚಿವದ್ವಯರ ಭೇಟಿ; ಪರಿಶೀಲನೆ

ಕಮಲನಗರ ಹಾಗೂ ಔರಾದ್‌ ತಾಲೂಕಿನಲ್ಲಿ ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಉಸ್ತುವಾರಿ...

ಹಾವೇರಿ | ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

"ಪರಿಶಿಷ್ಟ ವರ್ಗದ ಜನಾಂಗದ ಏಳಿಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಗೆ ಶ್ರೀ ಮಹರ್ಷಿ...

ಉಡುಪಿ | ಶಾಸಕ ಯಶ್ಪಾಲ್ ಸುವರ್ಣರವರ ಮೇಲೆ ಕಠಿಣ ಸಾಂವಿಧಾನಿಕ ಕ್ರಮ ಜರುಗಿಸಿ – ಕೆ ಫಣಿರಾಜ್

ತಮ್ಮ ಶಾಸಕ ಸ್ಥಾನದ ಸಂವಿಧಾನಿಕ ಮರ್ಯಾದೆಯನ್ನು ಮೀರಿ ವರ್ತಿಸಿರುವ ಉಡುಪಿಯ ಶಾಸಕ...

Download Eedina App Android / iOS

X