ರಾಯಚೂರು | ʼಮಾದಕ ವ್ಯಸನದಿಂದ ಯುವಕರ ರಕ್ಷಣೆಗೆ ಪೊಲೀಸ್ ಇಲಾಖೆ ಮುಂದಾಗಬೇಕುʼ

Date:

Advertisements

ಪ್ರಸ್ತುತ ದಿನಮಾನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲೂ ಯುವ ಸಮೂಹ ಮಾದಕ ವ್ಯಸನಕ್ಕೆ ಬಲಿಯಾಗುತ್ತಿದೆ. ಇದನ್ನು ತಡೆಗಟ್ಟಲು ಇಲಾಖೆಗಳು ಮುಂದಾಗಬೇಕು ಎಂದು ಸಾಮಾಜಿಕ ಹೋರಾಟಗಾರ ಬಸವರಾಜ್ ಬಾದರ್ಲಿ ಹೇಳಿದರು.

ರಾಯಚೂರು ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಇತ್ತೀಚೆಗೆ ತಾಲೂಕಿನಲ್ಲಿ ಗಾಂಜಾ, ಡ್ರಗ್ ಸೇರಿದಂತೆ ಅಮಲೇರಿಸುವ ಪದಾರ್ಥಗಳ ಮಾರಾಟ ಜಾಲ ಹೆಚ್ಚುತ್ತಿದ್ದು, ಇದರಿಂದ ಅನೇಕ ಯುವಕರ ಭವಿಷ್ಯ ವಿದ್ಯಾರ್ಥಿ ದಿಸೆಯಲ್ಲಿದ್ದಾಗಲೇ ಕಮರುತ್ತಿದೆ. ಯುವ ಸಮೂಹದ ಸದೃಢ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ ಕ್ರಮ ಕೈಗೊಂಡು ಭವ್ಯ ದೇಶ ಕಟ್ಟಲು ಮುಂದಡಿಯಿಡಬೇಕು” ಎಂದರು.

ಯಾವುದೇ ರೀತಿಯಲ್ಲೂ ಮಕ್ಕಳು, ಯುವಕರು ಹಾಗೂ ಅವರ ಕುಟುಂಬ ಬೀದಿಗೆ ಬರದಂತೆ ರಕ್ಷಿಸುವ ಕೆಲಸ ಆಗಬೇಕು. ಇಲಾಖೆಯು ಜಿಲ್ಲಾದ್ಯಂತ ತಂಡಗಳನ್ನು ರಚಿಸಿ ಎಗ್ಗಿಲ್ಲದೆ ನಡೆಯುತ್ತಿರುವ ಮಾದಕ ವಸ್ತು ಮಾರಾಟ ಜಾಲಗಳನ್ನು ಬೇಧಿಸಬೇಕು. ಮಾರಾಟ ಮತ್ತು ಸೇವನೆ ಮಾಡಿದವರಿಗೆ ಕಠಿಣ ಶಿಕ್ಷೆ ಎನ್ನುವ ಕಾನೂನು ರೂಪಿಸಬೇಕು. ಇಲ್ಲವಾದಲ್ಲಿ ಸಣ್ಣ ವಯಸ್ಸಿಗೇ ಮಕ್ಕಳಾದಿಯಾಗಿ ಮಾದಕ ಕೂಪಕ್ಕೆ ಬಿದ್ದು ಕುಟುಂಬ ಸಮೇತ ಭವಿಷ್ಯ ಹಾಳಾಗುತ್ತದೆ” ಎಂದು ಕಳವಳಗೊಂಡರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ: ಸಚಿವ ಬೋಸರಾಜು

ಈ ವೇಳೆ ನಿಸಾರ್ ಖಾನ್, ಜಾವಿದ್ ಖಾದ್ರಿ, ಅಬ್ದುಲ್ ನಾಯಕ್, ಸಿರಾಜ್ ಪಾಶ, ಹನುಮಂತಪ್ಪ ಕರ್ಲಿ ಸೇರಿದಂತೆ ಇತರರು ಇದ್ದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X