ರಾಯಚೂರು | ತುಂಗಾ ಎಡದಂಡೆ ಕಾಲುವೆಗೆ ನೀರು ಹರಿಸಲು ಸಂಯುಕ್ತ ಹೋರಾಟ ಸಮಿತಿ ಒತ್ತಾಯ

Date:

Advertisements

ತುಂಗಭದ್ರ ಎಡದಂಡೆ ಹಾಗೂ ನಾರಾಯಣಪುರ ಬಲದಂಡೆ ಕಾಲುವೆಗಳಿಗೆ ಏಪ್ರಿಲ್ 20 ರವರೆಗೆ ನೀರು ಹರಿಸಿ ರೈತರ ಬೆಳೆಗಳನ್ನು ರಕ್ಷಿಸಲು ಸರ್ಕಾರ ಮುಂದಾಗಬೇಕೆಂದು ಸಂಯುಕ್ತ ಹೋರಾಟ ಸಮಿತಿ ಮುಖಂಡ ಹಾಗೂ ಕೆಪಿಆರ್‌ಎಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಯಶವಂತ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, “ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ತೆಲಂಗಾಣಕ್ಕೆ ಹರಿಸಿರುವ ಸರ್ಕಾರ, ನಮ್ಮ ರೈತರ ಬೆಳೆಗಳಿಗೂ ನೀರು ಒದಗಿಸುವ ಮೂಲಕ ಬದ್ದತೆ ಪ್ರದರ್ಶಿಸಬೇಕು. ಕಾಂಗ್ರೆಸ್ ಸರ್ಕಾರವು ಹಿಂದಿನ ಬಿಜೆಪಿಯ ಆರ್ಥಿಕ ನೀತಿಗಳನ್ನೇ ಮುಂದುವರೆಸುತ್ತಿದೆ. ಬಿಜೆಪಿ ಕೇಂದ್ರ ಸರ್ಕಾರ ಮೂರು ಮಾರಕ ಕಾಯ್ದೆಗಳನ್ನು ರದ್ದುಗೊಳಿಸಿದ್ದರೂ ರಾಜ್ಯ ಸರ್ಕಾರ ಮಾತ್ರ ಅದೇ ಕಾಯ್ದೆಗಳನ್ನು ಮುಂದುವರೆಸಿದೆ. ವಿಧಾನಸಭಾ ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ಮೂರು ಕಾಯ್ದೆಗಳನ್ನು ರಾಜ್ಯದಲ್ಲಿಯೂ ರದ್ದುಗೊಳಿಸಬೇಕು. ಪಂಜಾಬ ಸರ್ಕಾರ ತಿರಸ್ಕರಿಸಿರುವ ಕೃಷಿ ಮಾರುಕಟ್ಟೆ ರಾಷ್ಟ್ರೀಯ ನೀತಿ ಚೌಕಟ್ಟನ್ನು ರಾಜ್ಯ ಸರ್ಕಾರವೂ ತಿರಸ್ಕರಿಸಬೇಕು, ಬಗರ್ ಹುಕುಂ ರೈತರಿಗೆ ಸಾಗುವಳಿ ಚೀಟಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ರಾಜ್ಯ ಕಾಂಗ್ರೆಸ್ ಸ್ಪಂದಿಸಬೇಕು. ಕೇಂದ್ರ ಸರ್ಕಾರ ಮಂಡಿಸಿರುವ ಜನವಿರೋಧಿ ಬಜೆಟ್ ಹಾಗೂ ರಾಜ್ಯ ಸರ್ಕಾರ ಮಂಡಿಸಲಿರುವ ಬಜೆಟ್ ಮೇಲೆ ಮಾ.12 ಮತ್ತು13 ರಂದು ಬೆಂಗಳೂರಿನಲ್ಲಿ ಚರ್ಚೆ ನಡೆಸಿ ಮುಂದಿನ ಹೋರಾಟ ರೂಪಿಸಲಾಗುತ್ತದೆ” ಎಂದರು.

ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್ ಇಂಗಳದಾಳ ಮಾತನಾಡಿ, “ಜಿಲ್ಲೆಯ ಆರ್ಥಿಕ ಸ್ಥಿತಿ ನಾರಾಯಣಪುರ ಬಲದಂಡೆ ಮತ್ತು ತುಂಗಭದ್ರ ಎಡದಂಡೆ ಕಾಲುವೆ ನೀರಿನ ಮೇಲೆ ಅವಲಂಬಿತವಾಗಿದೆ. ಸರ್ಕಾರಗಳು ಕಾಲುವೆ ನೀರು ಹರಿಸಲು ಸ್ಥಗಿತಗೊಳಿಸುವುದಾಗಿ ಹೇಳುತ್ತಿವೆ. ಜಲಾಶಯದಲ್ಲಿ ನೀರಿನ ಲಭ್ಯತೆಯಿದ್ದು ಏ 20 ರವರೆಗೆ ಕಾಲುವೆಗಳಿಗೆ ನೀರು ಹರಿಸಿ ಬೆಳೆಗಳನ್ನು ರಕ್ಷಿಸಬೇಕು. ಇಲ್ಲದೇ ಹೋದರೆ ತೀವ್ರ ಹೋರಾಟ ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಇದನ್ನೂ ಓದಿ: ರಾಯಚೂರು | ಏ.10ವರೆಗೆ ಕಾಲುವೆ ನೀರು ಬಂದ್ ಮಾಡದಂತೆ ರೈತರ ಪ್ರತಿಭಟನೆ

ಈ ಸಂದರ್ಭದಲ್ಲಿ ಶಾಂತರಾಮ ನಾಯಕ, ಖಾಜಾ ಅಸ್ಲಂ ಅಹ್ಮದ್, ಮಾರೆಪ್ಪ ಹರವಿ, ನರಸಣ್ಣ ನಾಯಕ, ಕೆ.ಜಿ.ವೀರೇಶ, ಚನ್ನಪ್ಪಗೌಡ ಇದ್ದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X