ರಾಯಚೂರು | ಸೇಂದಿ ದಂಧೆ; ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

Date:

Advertisements

ಸೇಂದಿ ದಂಧೆ ನಡೆಸುತ್ತಿದ್ದ ಎರಡು ಸ್ಥಳಗಳ ಮೇಲೆ ಅಬಕಾರಿ ಇಲಾಖೆ ಮತ್ತು ಪೊಲೀಸರು ದಾಳಿ ನಡೆಸಿ ದಂಧೆ ನಡೆಸುತ್ತಿದ್ದವರನ್ನು ಬಂಧಿಸಿರುವ ಘಟನೆ ರಾಯಚೂರು ಜಿಲ್ಲೆಯಿಂದ ವರದಿಯಾಗಿದೆ.

ರಾಯಚೂರು ತಾಲೂಕಿನ ಅಸ್ಕಿಹಾಳ ಹಾಗೂ ಯಕ್ಲಾಸಪುರದಲ್ಲಿ ನಡೆದ ಪ್ರತ್ಯೇಕ ದಾಳಿಯಲ್ಲಿ ಓರ್ವ ವೃದ್ಧೆ ಹಾಗೂ ತಾಯಿ-ಮಗಳ ಸೇಂದಿ ದಂಧೆ ನಡೆಸುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

ಯಕ್ಲಾಸಪುರದ ನಿರ್ಮಾಣ ಹಂತದ ಮನೆಯಲ್ಲಿ ಬ್ಯಾರಲ್​ಗಟ್ಟಲೆ ಸೇಂದಿ ಪತ್ತೆಯಾಗಿದೆ. ಅಬಕಾರಿ ಸಿಬ್ಬಂದಿ ದಾಳಿ ವೇಳೆ ಪ್ರೇಮಾ ಎಂಬಾಕೆ ಸಿಕ್ಕಿಬಿದ್ದಿದ್ದಾಳೆ. ತಾಯಿ ಇಂದ್ರಮ್ಮಳ ಜೊತೆ ಪ್ರೇಮಾ ಸೇಂದಿ ಮಾರಾಟ ಮಾಡುತ್ತಿದ್ದಳು. ಮತ್ತೊಂದು ಕಡೆ, ಪ್ಲಾಸಿಕ್ ಪ್ಯಾಕೆಟ್​ಗಳಲ್ಲಿ ಮಾರಾಟಕ್ಕೆ ಸಿದ್ಧವಾಗಿದ್ದ ಸೇಂದಿಯೂ ಪತ್ತೆಯಾಗಿದೆ. ಪರಿಶೀಲನೆ ವೇಳೆ ಅಬಕಾರಿ ಸಿಬ್ಬಂದಿ ಜೊತೆಗೆ ಆರೋಪಿ ಪ್ರೇಮಾ ವಾಗ್ವಾದ ಕೂಡ ನಡೆಸಿರುವುದಾಗಿ ವರದಿಯಾಗಿದೆ.

Advertisements

ಆರೋಪಿಗಳು ಮನೆಯಲ್ಲಿ ನಾಯಿ ಸಾಕುವ ಮೂಲಕ ಅಪರಿಚಿತರು ಬರುವ ಮಾಹಿತಿ ಪಡೆಯುತ್ತಿದ್ದರು. ಸದ್ಯ ಪ್ರೇಮಾಳನ್ನು ವಶಕ್ಕೆ ಪಡೆದು 80 ಲೀಟರ್ ಸೇಂದಿ ಜಪ್ತಿ ಮಾಡಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಅಸ್ಕಿಹಾಳ ಗ್ರಾಮದ ವೃದ್ಧೆ ತಿಮ್ಮಮ್ಮ ಎಂಬವರನ್ನು ವಶಕ್ಕೆ ಪಡೆದು, ಮನೆಯಲ್ಲಿದ್ದ ಸುಮಾರು 80 ಲೀಟರ್ ಸೇಂದಿ ಜಪ್ತಿ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಗ್ರಾಮಾಂತರ | ಎಟಿಎಂ ಹಣ ದೋಚಲು ಯತ್ನ; ಸಾವಿರಾರು ರೂಪಾಯಿ ಬೆಂಕಿಗಾಹುತಿ

ಸಿಎಚ್ ಪೌಡರ್​ನಿಂದ ತಯಾರಿಸಲಾಗಿರುವ ಸೇಂದಿ ಕುಡಿದು ಯುವ ಜನತೆ ಹಾಳಾಗುತ್ತಿದ್ದು, ಕೂಲಿ ಕಾರ್ಮಿಕ ವರ್ಗದ ಜನ, ಕೆಲ ರೈತಾಪಿ ಜನರೇ ಹೆಚ್ಚಾಗಿ ಸೇಂದಿ ಸೇವನೆ ಮಾಡುತ್ತಿದ್ದಾರೆ. ಅತಿ ಕಡಿಮೆ‌ ಬೆಲೆಗೆ ಸಿಗುವ ಸೇಂದಿಗೆ ಜನರು ದಾಸರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಾಯಿ ಸಮಿತಿ ಸಭೆಯಲ್ಲಿ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ್ ಸೂಚಿಸಿದ್ದರು.

ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಅಬಕಾರಿ ಇಲಾಖೆಯಿಂದ ರಾತ್ರೋ ರಾತ್ರಿ ಕಾರ್ಯಾಚರಣೆ ನಡೆಸಿದ್ದು, ಆರೋಪಿಗಳನ್ನು ವಶಕೆ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X