ರಾಯಚೂರು | ಒಂದೇ ರಸ್ತೆಗೆ ಮೂರು ಬಿಲ್ ಆರೋಪ; ಅಧಿಕಾರಿಗಳಿಂದ ಪರಿಶೀಲನೆ

Date:

Advertisements

ದೇವದುರ್ಗ ತಾಲೂಕಿನಲ್ಲಿ ನಡೆದಿರುವ ಮನರೇಗಾ, ವಸತಿ ಯೋಜನೆ ಹಗರಣಗಳ ತನಿಖೆ ನಡೆಯುತ್ತಿರುವಾಗಲೇ ಮತ್ತೊಂದು ಅಕ್ರಮ ಬೆಳಕಿಗೆ ಬಂದಿದೆ. ಒಂದೇ ರಸ್ತೆಗೆ ಮೂರು ಯೋಜನೆಗಳಡಿ ಬಿಲ್‌ ಸಿದ್ದಪಡಿಸಿ, ಹಣ ಪಡೆದಿರುವ ಆರೋಪ ಕೇಳಿಬಂದಿದ್ದು, ಲೋಕೋಪಯೋಗಿ ಇಲಾಖೆಯ ಬೆಂಗಳೂರಿನ ಅಧಿಕಾರಿಗಳ ತಂಡ ದೇವದುರ್ಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಚನ್ನಬಸಪ್ಪ ಮ್ಯಾಕಲ್ ಅವರ ಅವಧಿಯಲ್ಲಿ ಅನರ್ಹ ಗುತ್ತಿಗೆದಾರರಿಗೆ ಕಾಮಗಾರಿ ವಹಿಸಲಾಗಿತ್ತು. ಸರಿಯಾದ ರೀತಿಯಲ್ಲಿ ಕಾಮಗಾರಿ ನಡೆದಿಲ್ಲ. ಒಂದೇ ಕಾಮಗಾರಿಗೆ ಮೂರು ಬಿಲ್‌ ಮಾಡಲಾಗಿದೆ. ಸರ್ಕಾರದ ಹಣ ದುರ್ಬಳಕೆಯಾಗಿದೆ ಎಂದು ಅನೇಕ ಸಂಘಟನೆಗಳು, ಸಾರ್ವಜನಿಕರು ದೂರು ನೀಡಿದ್ದರು.

ಲೋಕೋಪಯೋಗಿ ಇಲಾಖೆ, ಪಿಎಂಜಿಎಸ್‌ವೈ ಹಾಗೂ ಕೆಬಿಜೆಎನ್‌ಎಲ್‌ ಯೋಜನೆಗಳ ಅಡಿಯಲ್ಲಿ ಒಂದೇ ಕಾಮಗಾರಿಗೆ ಮೂರು ಬಿಲ್ ಪಾವತಿಸಲಾಗಿದೆ. 2019-20 ಸಾಲಿನಲ್ಲಿ ರಂಜಿತಾ ಕನ್ಸ್‌ಟ್ರಕ್ಷನ್ಸ್‌ ಕಂಪನಿಗೆ ಕೋಟಿ ಕೋಟಿ ರೂ.ಗಳ ಕಾಮಗಾರಿ ನೀಡಲಾಗಿದೆ. ಗುತ್ತಿಗೆ ನೀಡುವ ವೇಳೆ ಟೆಂಡರ್ ನಿಯಮ ಉಲ್ಲಂಘನೆಯಾಗಿದೆ. ಅನುದಾನ ದುರ್ಬಳಕೆಯನ್ನೂ ಮಾಡಲಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದರು.

Advertisements

ದೂರಿನ ಆಧಾರ ಮೇಲೆ ಅಧಿಕಾರಿಗಳ ತಂಡ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಪರಿಶಿಲನೆ ನಡೆಸಿದೆ. ಇಲಾಖಾವಾರು ಕಳೆದ ಐದು ವರ್ಷಗಳಲ್ಲಿ ಬಳಕೆಯಾಗಿರುವ ಅನುದಾನ, ಏಜೆನ್ಸಿ, ಗುತ್ತಿಗೆದಾರರಿಗೆ ಹಣ ಪಾವತಿಸಿರುವ ಅನುದಾನ ಕುರಿತು ದಾಖಲೆಗಳ ಪರಿಶೀಲನೆ ನಡೆದಿದೆ ಎಂದು ತಿಳಿದುಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X