ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ಸಂಭವಿಸಿದೆ.
ಮೃತರನ್ನು ಛತ್ತೀಸ್ಗಢ ಮೂಲದವರಾದ ವಿಷ್ಣು (26), ಶಿವರಾಮ್(28), ಬಲರಾಮ್(30) ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಬೋರ್ವೆಲ್ ಕೊರೆದು ಕಾಲುದಾರಿಯಲ್ಲಿಯೇ ರಾತ್ರಿ ಮೂವರು ಮಲಗಿದ್ದರು. ಈ ವೇಳೆ ಕಾಲುದಾರಿಯಲ್ಲಿ ಬಂದ ಜೆಸಿಬಿ, ಮೂವರ ಮೇಲೂ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಬೈಕ್-ಕ್ಯಾಂಟರ್ ನಡುವೆ ಅಪಘಾತ; ದಂಪತಿ ದುರ್ಮರಣ
ಘಟನೆಗೆ ಸಂಬಂಧಿಸಿದಂತೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.