ದೇವದುರ್ಗ ವ್ಯಾಪ್ತಿಯಲ್ಲಿ ಬರುವ ಟೋಲ್ ಗೇಟ್ ಗಳು ಯಥಾಪ್ರಕಾರ ಕಾರ್ಯ ನಿರ್ವಹಿಸುತ್ತಿರುವುದರಿಂದ ಕೆಡಿಪಿ ಸಭೆಯಲ್ಲಿ ಟೋಲ್ ಗೇಟ್ ತಾತ್ಕಾಲಿಕವಾಗಿ ಮುಚ್ಚಬೇಕು ಎಂದು ಮಾತನ್ನು ಉಳಿಸದ ಸರ್ಕಾರದ ವಿರುದ್ದ ಅಸಮಾಧಾನಗೊಂಡು ಶಾಸಕಿ ಕರೆಮ್ಮ ನಾಯಕ ಅಹೋರಾತ್ರಿ ಧರಣಿ ನಡೆಸಿದರು.
ದೇವದುರ್ಗ ತಾಲ್ಲೂಕು ಕಾಕರಗಲ್ ಟೋಲ್ ಗೇಟ್ ಬಳಿ ನೂರಾರು ಕಾರ್ಯಕರ್ತರು ಸೇರಿ ಜಮಾಯಿಸಿ ಹೆದ್ದಾರಿ ತಡೆದು ಸರ್ಕಾರ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಸಭೆಯಲ್ಲೇ ರಮ್ಮಿ ಗೇಮ್ ಆಡಿದ ಅಧಿಕಾರಿ ; ನೋಟಿಸ್
ಸಭೆಯಲ್ಲಿ ಟೋಲ್ ಗೇಟ್ ಶಾಶ್ವತವಾಗಿ ಮುಚ್ಚಬೇಕು ಎಂದು ಪಟ್ಟು ಹಿಡಿದಾಗ ಸಚಿವರು ಜಿಲ್ಲಾಧಿಕಾರಿಗೆ ತಿಳಿಸಿ ತಾತ್ಕಾಲಿಕವಾಗಿ ಮುಚ್ಚುತ್ತೇವೆ ಎಂದು ಭರವಸೆ ನೀಡಿದ ಮೇಲೆ ಧರಣಿ ಹಿಂಪಡೆಯಲಾಗಿತ್ತು. ಆದರೂ ಟೋಲ್ ಗೇಟ್ ಕಾರ್ಯ ನಿರ್ವಹಿಸುತ್ತಿರುವುದು ಸಾರ್ವಜನಿಕ ತೀವ್ರ ಆಕ್ರೋಶವಾಗಿದೆ. ಭರವಸೆ ಕೇವಲ ಮಾತಿನ ಮಟ್ಟಿಗೆ ಮಾತ್ರ. ನಾವು ಮತ್ತೆ ಮತ್ತೆ ಮನವಿ ಮಾಡಿದರೂ ಸ್ಪಂದನೆ ಇಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
