ರಾಯಚೂರು | ಜಮೀನು, ನಿವೇಶನಗಳ ವ್ಯಾಪಾರ; ಅವೈಜ್ಞಾನಿಕ ಸರ್ಕಾರಿ ಶುಲ್ಕ ಹಿಂಪಡೆಗೆ ಆಗ್ರಹ

Date:

Advertisements

ಜಮೀನು, ನಿವೇಶನ ಮಾರಾಟ, ಖರೀದಿಗೆ ಸರ್ಕಾರ ವಿಧಿಸಿರುವ ಶುಲ್ಕ ಅವೈಜ್ಞಾನಿಕವಾಗಿದ್ದು, ಕೂಡಲೇ ಹಿಂಪಡೆಯಬೇಕೆಂದು ಎಡೆದೊರೆ ನಾಡಿನ ಕ್ಷೇಮಾಭಿವೃದ್ದಿ ವೇದಿಕೆ ಸಂಚಾಲಕ ವಿಜಯಾನಂದ ಪಾಟೀಲ್ ಒತ್ತಾಯಿಸಿದರು.

ರಾಯಚೂರಿನಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “2018-19ನೇ ಸಾಲಿನಲ್ಲಿದ್ದ ಸ್ಟಾಂಪ್ ಡ್ಯೂಟಿ ಶುಲ್ಕವನ್ನು ಶೇ.800ರಷ್ಟು ಹೆಚ್ಚಳ ಮಾಡಿರುವುದು ಅವೈಜ್ಞಾನಿಕ ಕ್ರಮವಾಗಿದೆ. ಸರ್ಕಾರದ ಕ್ರಮದಿಂದಾಗಿ ಬಡವರು, ಮಧ್ಯಮ ವರ್ಗದವರು ಸೇರಿ ಯಾರೂ ಕೂಡ ನಿವೇಶನ, ಭೂಮಿ ಖರೀದಿ ಮಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಆರೋಪಿಸಿದರು.

“ಸ್ಥಿರಾಸ್ತಿಗಳ ಪರಿಷ್ಕೃತ ದರ ನಿಗದಿ ಮಾಡುವಾಗ ಕನಿಷ್ಠ ನಿಯಮಗಳನ್ನು ಪಾಲಿಸದೇ ಇರುವುದರಿಂದಾಗಿ ಮನಸೋ ಇಚ್ಛೆ ಶುಲ್ಕ ನಿಗದಿಪಡಿಸಿದಂತಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಭೂಮಿ ಖರೀದಿ ಮಾರಾಟಕ್ಕೆ ಮುಂದಾದರೆ ಜನರು ದುಬಾರಿ ಹಣವನ್ನು ಕಳೆದುಕೊಳ್ಳಬೇಕಾಗುತ್ತದೆ. ಸರ್ಕಾರ ಹೇಳಿಕೊಂಡಿರುವಂತೆ ಶುಲ್ಕ ಹೆಚ್ಚಳ ಶೇ.40ರ ಬದಲು ₹800 ಹೆಚ್ಚಳವಾಗಿದೆ. ಅಸಂಬದ್ಧವಾಗಿ ನಿಗದಿಪಡಿಸಿರುವ ದರಗಳಿಂದ ಜನರು ತತ್ತರಿಸಿ ಹೋಗುವಂತಾಗಿದೆ” ಎಂದರು.

Advertisements

“ನೋಂದಣಿ ಕಚೇರಿಗಳು ಭ್ರಷ್ಟಾಚಾರದ ಕೇಂದ್ರಗಳಾಗಿರುವಾಗ ಜನರ ಖರೀದಿ ಮತ್ತು ಮಾರಾಟವನ್ನು ಸರ್ಕಾರವೇ ಪರೋಕ್ಷವಾಗಿ ತಡೆಯುತ್ತಿದೆ. ಸರ್ಕಾರಿ ಕಚೇರಿಗಳಿಂದ ಜನರು ಕೆಲಸ ಕಾರ್ಯಗಳನ್ನು ಪಡೆಯಲಾಗುತ್ತಿಲ್ಲ. ನಗರಸಭೆ, ಜಿಲ್ಲಾಧಿಕಾರಿಗಳ ಕಚೇರಿ ಒಳಗೊಂಡಂತೆ ಬಹುತೇಕ ಸರ್ಕಾರಿ ಕಚೇರಿಗಳಿಂದ ಕಾಲಮಿತಿಯಲ್ಲಿ ಕೆಲಸವಾಗುತ್ತಿಲ್ಲ. ಸಂಕೀರ್ಣ ಪರಿಸ್ಥಿತಿಯಲ್ಲಿರುವ ಜನರಿಗೆ ಮಾರಾಟ ಶುಲ್ಕ ಹೆಚ್ಚಳ ಮಾಡಿ ಮತ್ತೊಂದು ಹೊರೆ ಜನರ ಮೇಲೆರಿದಂತಾಗಿದೆ. ಸರ್ಕಾರ ಕೂಡಲೇ ನಿಯಮಬದ್ಧವಾದ ಶುಲ್ಕ ವಿಧಿಸಲು ಮುಂದಾಗಬೇಕು. ಇಲ್ಲದೇ ಹೋದಲ್ಲಿ ನ್ಯಾಯಾಲಯದ ಮೊರೆ ಹೋಗುಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಗ್ರಾಮ ಪಂಚಾಯತಿ ಕರ್ತವ್ಯಕ್ಕೆ ಅಡ್ಡಿ ಆರೋಪ; ಸದಸ್ಯರ ವಿರುದ್ಧ ದೂರು

“ನಗರದ ಸ್ಟೇಷನ್‌ ರಸ್ತೆಯಲ್ಲಿ ಬೀದಿ ಅಂಗಡಿಗಳನ್ನು ಜಿಲ್ಲಾಧಿಕಾರಿಗಳು ತೆರವುಗೊಳಿಸಿರುವುದು ಸ್ವಾಗತಾರ್ಹ. ಆದರೆ, ಜಿಲ್ಲಾಧಿಕಾರಿಗಳ ನಿವಾಸದಿಂದ ಹಿಡಿದು ನಗರದ ವಿವಿಧಡೆ ಪಾದಾಚಾರಿ ರಸ್ತೆಯೇ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ನಿಗದಿತ ಸ್ಥಳ ಗುರುತಿಸಿ ಸಂಚಾರ, ವ್ಯಾಪಾರಕ್ಕೆ ಅನುಕೂಲ ಮಾಡಿಕೊಡಬೇಕು. ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ನಿವಾರಿಸಲು ಜಿಲ್ಲಾಡಳಿತ ಮುಂದಾಗಬೇಕು” ಎಂದರು.

ಈ ಸಂದರ್ಭದಲ್ಲಿ ಈರಣ್ಣ ಮುದುಗಲ್, ಲಕ್ಷ್ಮೀಕಾಂತ, ಬೋಳಬಂಡಿ, ರಾಜಶೇಖರ ಸ್ವಾಮಿ ಇದ್ದರು.

ವರದಿ: ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X