ರಾಯಚೂರು | ತುಂಗಭದ್ರಾ ಕ್ರಸ್ಟರ್ ಗೇಟ್ ಅಳವಡಿಕೆಗೆ ಪ್ರತಿಭಟನೆ : ಚಾಮರಸ ಮಾಲಿ ಪಾಟೀಲ

Date:

ತುಂಗಭದ್ರಾ ಜಲಾಶಯದ ಕ್ರಸ್ಟಗೇಟ್ ಕಾಮಗಾರಿಯನ್ನು ತ್ವರಿತಗೊಳಿಸುವುದು ಸೇರಿದಂತೆ ರೈತರ ಜ್ವಲಂತ ಸಮಸ್ಯೆಗಳ ವಿರುದ್ಧ ಸೆ. 8 ರಂದು ಕೊಪ್ಪಳ ಜಿಲ್ಲೆಯ ಮುನಿರಾಬಾದ್ ನಲ್ಲಿ ರೈತ ಸಂಘಟನೆಯ ನೇತೃತ್ವದಲ್ಲಿ ಪಕ್ಷಾತೀತ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಹೇಳಿದರು.

- Advertisement -

ಅವರು ಗುರುವಾರ ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿ, ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕಿತ್ತು ಹೋಗಿ ಅಪಾರ‌ ಪ್ರಮಾಣದ ನೀರು ನೆರೆಯ ರಾಜ್ಯಕ್ಕೆ ಹರಿದು ಹೋಗಿತ್ತು. ಈಗ ಶಿಥಿಲವಾಗಿರುವ ಗೇಟ್ ಅಳವಡಿಕೆ ಟೆಂಡರ್ ಕರೆಯಲಾಗಿದ್ದು ನಿಧಾನಗತಿಯಿಂದ ಕೆಲಸ ನಡೆಯುತ್ತಿದೆ. ಸಕಾಲಕ್ಕೆ ಗುತ್ತಿಗೆದಾರರಿಗೆ ಹಣ ಪಾವತಿಸಿದರೆ ವೇಗವಾಗಿ ಕಾಮಗಾರಿ ಮುಗಿದು ರೈತರಿಗೆ ಅನುಕೂಲವಾಗಲಿದೆ. ನೀರಾವರಿ ಇಲಾಖೆಯ ಅಧಿಕಾರಿಗಳು ಬೇಸಿಗೆ ಬೆಳೆಗೆ ನೀರಿಲ್ಲ ಎಂದು ಹೇಳುತ್ತದ್ದಾರೆ. ಸರ್ಕಾರದ ಇಚ್ಛಾಶಕ್ತಿ ಕೊರತೆಯಿಂದ ರೈತರು ಸಂಕಷ್ಟಕ್ಕೆ ಈಡಾಗುವಂತಾಗಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಜಲಾಶಯದಲ್ಲಿ ತುಂಬಿರುವ ಹೂಳು ತೆಗೆಯಲು ಮುಂದಾಗುತ್ತಿಲ್ಲ. ನವಲಿ ಜಲಾಶಯವೂ ನಿರ್ಮಾಣ ಮಾಡುತ್ತಿಲ್ಲ. ನೆರೆಯ ಆಂಧ್ರಪ್ರದೇಶ, ತೆಲಂಗಾಣದ ಸರ್ಕಾರದೊಂದಿಗೆ ಚರ್ಚಿಸಲು ವರ್ಷಗಳು ಉರುಳಿ ಹೋಗುತ್ತಿವೆ. ಯಾವುದೇ ನಿರ್ಧಾರಕ್ಕೆ ಸರ್ಕಾರ ಬರುತ್ತಿಲ್ಲ. ಸಿಬ್ಬಂದಿ ಕೊರತೆಯಿಂದ ನೀರು ನಿರ್ವಹಣೆ ಸಾಧ್ಯವಾಗದೇ ಹೋಗಿದೆ. ಕಳೆದ ಜುಲೈ ತಿಂಗಳಲ್ಲಿ ಕಾಲುವೆಗೆ ನೀರು ಹರಿಸಿದರೆ ಸೆಪ್ಟೆಂಬರ್‌ನಲ್ಲಿ ಸಿರವಾರಕ್ಕೆ ನೀರು ಬಂದಿದೆ. ಅನಧಿಕೃತ ನೀರಾವರಿ ತಡೆಯಲು ಕಾನೂನು ರೂಪಿಸಿದ್ದರೂ ಜಾರಿಗೊಳಿಸುತ್ತಿಲ್ಲ. ಅಚ್ಚುಕಟ್ಟು ವ್ಯಾಪ್ತಿ ರೈತರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ನಡೆಯಲಿರುವ ಬೃಹತ್ ಪ್ರತಿಭಟನೆಗೆ ನಾಲ್ಕು ಜಿಲ್ಲೆಗಳು ವಿವಿಧ ರಾಜಕೀಯ ಪಕ್ಷಗಳ ನಾಯಕರು, ಸಂಘ ಸಂಸ್ಥೆಗಳ, ವರ್ತಕರು, ವ್ಯಾಪಾರಸ್ಥರು ಭಾಗವಹಿಸುವಂತೆ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸ್ಮಶಾನ ಭೂಮಿಯಿಲ್ಲದೇ ಅಂತ್ಯಸಂಸ್ಕಾರಕ್ಕೆ ಸಂಕಟ

ಮಾಜಿ ಶಾಸಕ ಗಂಗಾಧರ ನಾಯಕ, ಶರಣಪ್ಪಗೌಡ ಜಾಡಲದಿನ್ನಿ, ಬೂದೆಯ್ಯ ಸ್ವಾಮಿ, ವೈ.ಬಸನಗೌಡ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಲೆನಾಡು-ಕರಾವಳಿ ಕೃಷಿ ವಲಯವಾಗಿ ಘೋಷಿಸಬೇಕು; ಸುಧೀರ್ ಕುಮಾರ್ ಮುರೊಳ್ಳಿ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಉಡುಪಿ | ಅನುಚಿತ ವರ್ತನೆಗೆ ಸಂತ್ರಸ್ತರನ್ನು ಹೊಣೆ ಮಾಡಲಾಗದು : ಡಾ. ದಿವ್ಯಾ ರಾಣಿ

ಉಡುಪು, ಸ್ನೇಹ ಅಥವಾ ಸಾಮಾಜಿಕ ಜಾಲತಾಣಗಳ ಬಳಕೆಯಂತಹ ವೈಯಕ್ತಿಕ ಆಯ್ಕೆಗಳು ಯಾವುದೇ...

ಭವಿಷ್ಯದ ಸಮಾಜವನ್ನು ರೂಪಿಸುವ ವಿದ್ಯಾರ್ಥಿ ಸಂಘಗಳ ಅಗತ್ಯವಿದೆ : ಶ್ರೀವರ್ಮ ಅಜ್ರಿ ಎಂ

ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನೂ ಬೆಳೆಸುವ ಕಾಲೇಜು ವಿದ್ಯಾರ್ಥಿ ಸಂಘಗಳು...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...