ಆರ್‌ಎಸ್‌ಎಸ್‌ ಕಾರ್ಯಕ್ರಮಕ್ಕೆ ರಾಯಚೂರು ವಿವಿ ಕುಲಪತಿ ಮುಖ್ಯ ಅತಿಥಿ!

Date:

Advertisements

ಶಿಕ್ಷಣ ಸಂಸ್ಥೆಗಳು ಆರ್‌ಎಸ್‌ಎಸ್‌ ಪ್ರಭಾವದಿಂದಾಗಿ ಕೇಸರಿಕರಣಗೊಳ್ಳುತ್ತಿವೆ ಎಂಬ ವಿಚಾರವು ಸಾಕಷ್ಟು ಚರ್ಚೆಯಲ್ಲಿರುವ ನಡುವೆಯೇ, ಕರ್ನಾಟಕದ ಯಲಬುರ್ಗಾದಲ್ಲಿರುವ ರಾಯಚೂರು ವಿವಿ ಕುಲಪತಿಯವರ ನಡೆಯು ಹೊಸ ವಿವಾದಕ್ಕೆ ನಾಂದಿ ಹಾಡಿದೆ.

ವಿಜಯದಶಮಿಯ ಉತ್ಸವದ ಹಿನ್ನೆಲೆಯಲ್ಲಿ ರಾಯಚೂರು ನಗರದಲ್ಲಿ ಸೋಮವಾರ ಸಂಜೆ ಆರ್‌ಎಸ್‌ಎಸ್‌ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ರಾಯಚೂರು ವಿವಿ ಕುಲಪತಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂಬ ಪೋಸ್ಟರ್ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದ್ದು, ಭಾರೀ ವಿರೋಧ ವ್ಯಕ್ತವಾಗಿದೆ. ಅಲ್ಲದೇ, ಇದು ವಿವಾದಕ್ಕೂ ಎಡೆಮಾಡಿಕೊಟ್ಟಿದೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್‌) ವಿಜಯದಶಮಿಯ ಉತ್ಸವದ ಹಿನ್ನೆಲೆಯಲ್ಲಿ ರಾಯಚೂರು ನಗರದಲ್ಲಿ ಸೋಮವಾರ ಸಂಜೆ (14/10/2024) ಪಥಸಂಚಲನ ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ, ಮುಖ್ಯ ಅತಿಥಿಯಾಗಿ ರಾಯಚೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊಫೆಸರ್ ಹರೀಶ್‌ ರಾಮಸ್ವಾಮಿ ಅವರು ಭಾಗವಹಿಸಲಿದ್ದಾರೆ ಎಂದು ಆಮಂತ್ರಣ ಪತ್ರಿಕೆಯಲ್ಲಿ ಉಲ್ಲೇಖಿಸಲಾಗಿದೆ. ಕುಲಪತಿಯವರ ಭಾಗವಹಿಸುವಿಕೆಗೆ ಹಲವಾರು ಜನ ಪ್ರಗತಿಪರರು, ಲೇಖಕರು, ಸಾಮಾನ್ಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

Advertisements

ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಯಾದ ರಾಯಚೂರು ವಿಶ್ವವಿದ್ಯಾಲಯದ ಕುಲಪತಿಗಳು, ಈ ರೀತಿಯಲ್ಲಿ ಮತಾಂಧ ಆರ್‌ಎಸ್‌ಎಸ್‌ ಸಂಘಟನೆಯ ಜೊತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದನ್ನು ಹಲವಾರು ಜನ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

WhatsApp Image 2024 10 14 at 2.38.13 PM

“ಒಂದು ಸಾಂವಿಧಾನಿಕ ಹುದ್ದೆಯಲ್ಲಿರುವ ರಾಯಚೂರು ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಪ್ರೊಫೆಸರ್ ಹರೀಶ್ ರಾಮಸ್ವಾಮಿಯವರು ಒಂದು ಧರ್ಮವನ್ನು ಪ್ರತಿನಿಧಿಸಿ ನಡೆಯುವ ಆರ್‍‌ಎಸ್ಎಸ್ ಪಥ ಸಂಚಲನದ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಾರೆಂದರೆ ಮೊದಲು ಇವರು ಉಪ ಕುಲಪತಿಯೋ ಅಥವಾ ಸಂಘಪರಿವಾರದ ಕಾರ್ಯಕರ್ತರೋ ಎಂಬುದನ್ನು ಸಾಬೀತು ಪಡಿಸಲಿ” ಎಂದು ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ.

ಇದನ್ನು ಓದಿದ್ದೀರಾ? ಉಡುಪಿ | ನ. 10ರಂದು ವಿವಿಧ ಸಮುದಾಯಗಳ ಸ್ನೇಹ ಸಮಾವೇಶ; ಪ್ರಶಸ್ತಿ ಪ್ರದಾನ ಸಮಾರಂಭ

“ಸಂಘದ ಮೇಲೆ‌ ಅಷ್ಟೊಂದು ಪ್ರೇಮ ಇದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಚಡ್ಡಿ ತೊಟ್ಟು ಅಧಿಕೃತವಾಗಿ ಸಂಘ ಸೇರಿ ತಮ್ಮ ಕುಟುಂಬದ ಪರಂಪರೆಯನ್ನು ಕಾಪಾಡಿಕೊಂಡು ಹೋಗಲಿ. ಆಗ ಯಾವ ಮತ್ತು ಯಾರ ತಕರಾರೂ ಇರುವುದಿಲ್ಲ. ನಿಷ್ಪಕ್ಷಪಾತವಾಗಿ ನಡೆದುಕೊಳ್ಳಬೇಕಾದ ಮತ್ತು ಸಂವಿಧಾನದ ಜಾತ್ಯತೀತ ಆಶಯಗಳನ್ನು ಎತ್ತಿ ಹಿಡಿಯಬೇಕಾದ ಹುದ್ದೆಯಲ್ಲಿದ್ದು, ಹೀಗೆ ನಡೆದುಕೊಳ್ಳುವುದು ಆ ಸ್ಥಾನಕ್ಕೆ ಎಸಗುವ ದ್ರೋಹವಾಗುತ್ತದೆ.
ಈ ಕುರಿತು ಸಿಂಡಿಕೇಟ್ ಸದಸ್ಯರು ಮತ್ತು ಪ್ರಜ್ಞಾವಂತರು ಮಾತನಾಡದಿರುವುದು ದುರಂತ” ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

ರಾಯಚೂರು ವಿವಿ
ಪ್ರೊಫೆಸರ್ ಹರೀಶ್‌ ರಾಮಸ್ವಾಮಿ

ಈ ದಿನ.ಕಾಮ್‌ಗೆ ಸಿಕ್ಕಿರುವ ಮಾಹಿತಿಯ ಪ್ರಕಾರ, ರಾಯಚೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊಫೆಸರ್ ಹರೀಶ್‌ ರಾಮಸ್ವಾಮಿ ಅವರು ಸದ್ಯ ಬೆಂಗಳೂರಿನಲ್ಲಿದ್ದು, ಪಥಸಂಚಲನ ಕುರಿತು ವಿರೋಧ, ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಭಾಗವಹಿಸದಿರಲು, ಊರಲ್ಲಿರಲಿಲ್ಲ ಎಂಬ ಸಬೂಬು ಸೃಷ್ಟಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಕುಲಪತಿ ಹುದ್ದೆಯಿಂದ ನಿವೃತ್ತರಾಗಲು ಇನ್ನೂ ಒಂದು ತಿಂಗಳು ಬಾಕಿ ಇರುವುದಾಗಿಯೂ ಜನ ಮಾತನಾಡಿಕೊಳ್ಳುತ್ತಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X