ರಾಯಚೂರು | ಏಮ್ಸ್ ಮಂಜೂರು ಮಾಡದಿದ್ದರೆ ಚುನಾವಣೆ ಬಹಿಷ್ಕಾರ; ಎಚ್ಚರಿಕೆ

Date:

Advertisements

ಕಳೆದ ಎರಡು ವರ್ಷಗಳಿಂದ ಏಮ್ಸ್ ಮಂಜೂರಾತಿಗೆ ಸತತ ಹೋರಾಟ ನಡೆಸುತ್ತಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸುಳ್ಳು ಭರವಸೆಗಳನ್ನು ನೀಡುತ್ತಲೇ ಬಂದಿವೆ. ಏಮ್ಸ್ ಕುರಿತು ಖಚಿತ ಭರವಸೆ ನೀಡದೇ ಹೋದರೆ ಲೋಕಸಭಾ ಚುನಾವಣೆ ಬಹಿಷ್ಕರಿಸಲು ಜನರಲ್ಲಿ ಜಾಗೃತಿ ಮೂಡಿಸಬೇಕಾಗುತ್ತದೆ ಎಂದು ರಾಯಚೂರು ಜನ ಜಾಗೃತಿ ಸಂಘದ ಅಧ್ಯಕ್ಷ ಕೆ.ಈರೇಶ ಹೇಳಿದರು.

ಕಲಬುರಗಿಯಲ್ಲಿ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಕಲ್ಯಾಣ ಕರ್ನಾಟಕ ಹಿಂದುಳಿದಿದೆ ಎಂದು ಹೇಳುವ ರಾಜಕೀಯ ಪಕ್ಷಗಳ ನಾಯಕರು ಈ ಭಾಗಕ್ಕೆ ಆಗುತ್ತಿರುವ ಅನ್ಯಾಯ ವಿರುದ್ದ ಕಿಚಿತ್ತು ಧ್ವನಿಯೆತ್ತುತ್ತಿಲ್ಲ. ತಮ್ಮ ಪಕ್ಷದ ಮುಖಂಡರ ಮೇಲೆ ಒತ್ತಡವೂ ಹಾಕದೇ ಸುಳ್ಳು ಭರವಸೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ಚುನಾವಣೆ ಪ್ರಚಾರಕ್ಕೆ ಬರುವ ವಿವಿಧ ಅಭ್ಯರ್ಥಿಗಳನ್ನು ಜನರು ಪ್ರಶ್ನಿಸಬೇಕು ಎಂದರು.

ಏಮ್ಸ್ ಮಂಜೂರು ಮಾಡದಿದ್ದರೆ ಓಟು ಹಾಕುವುದಿಲ್ಲ ಎಂದು ಎಚ್ಚರಿಸಬೇಕು ಎಂದರು. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಬಡತನದೊಂದಿಗೆ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಸೂಕ್ತ ಚಿಕಿತ್ಸಾ ವ್ಯವಸ್ಥೆಯಿಲ್ಲದೇ ಬೆಂಗಳೂರು, ಹೈದ್ರಾಬಾದಗೆ ಹೋಗುವ ಸ್ಥಿತಿಯಿದೆ. ಬಡ ಜನರು ದೊಡ್ಡ ಊರುಗಳಿಗೆ ಚಿಕಿತ್ಸೆ ಪಡೆಯಲು ಸಾಧ್ಯವಾಗುವುದಿಲ್ಲ. ಏಮ್ಸ್ ಹೋರಾಟ ಮಾಡುತ್ತಿರುವರ ವೈಯಕ್ತಿಕವಾಗಿ ಏನು ಕೇಳುತ್ತಿಲ್ಲ. ಈಭಾಗಕ್ಕೆ ಬೇಕಿರುವ ಏಮ್ಸ್ ಮಂಜೂರು ಮಾಡಲು ಹೋರಾಟ ಮಾಡುತ್ತಿದ್ದಾರೆ. ಆದರೆ, ರಾಜಕೀಯ ನಾಯಕರುಗಳು ಕೇವಲ ಭರವಸೆ ನೀಡಿ ಈಡೇರಿಸುತ್ತಿಲ್ಲ. ಜನರು ಪ್ರಶ್ನಿಸುವ ಮೂಲಕ ಸುಳ್ಳು ಆಶ್ವಾಸನೆ ನಿಡುವವರಿಗೆ ಬುದ್ದಿ ಕಲಿಸಬೇಕೆಂದರು.

Advertisements

ಈ ಸಂದರ್ಭದಲ್ಲಿ ಇಮಾಮ್ ಪಾಷಾ, ಸೈಯದ್ ನವಾನ, ಹುಸೇನ ಪಾಷಾ, ಇಬ್ರಾಹಿಂ, ಧರ್ಮರಾಜ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X