ರಾಯಚೂರು | ಎಡದಂಡೆ ನೀರಿನ ಸಮಸ್ಯೆ : ಸಿಎಂ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆ

Date:

ತುಂಗಭದ್ರಾ ಮತ್ತು ನಾರಾಯಣಪುರು ಬಲದಂಡೆ ಕಾಲುವೆ ಸಮಸ್ಯೆಗಳ ಯಾವುದೇ ಕ್ರಮ ಕೈಗೊಳ್ಳದಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 4ರಂದು ಜಿಲ್ಲೆಗೆ ಆಗಮಿಸಲಿರುವ ಮುಖ್ಯಮಂತ್ರಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್ ಇಂಗಳದಾಳ ಎಚ್ಚರಿಕೆ ನೀಡಿದ್ದಾರೆ.

- Advertisement -

ರಾಯಚೂರು ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯನ್ನುಉದ್ದೇಶಿಸಿ ಮಾತನಾಡಿದ ಅವರು, ತುಂಗಭದ್ರ ಎಡದಂಡೆ ಕಾಲುವೆ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರವೇ ದೊರೆಯದೇ ಹೋಗಿದೆ. ಅನೇಕ ಪ್ರತಿಭಟನೆಗಳು, ಮನವಿ ನೀಡಿದರೂ ಆಡಳಿತದಿಂದ ಸ್ಪಂದನೆ ದೊರೆಯುತ್ತಿಲ್ಲ ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ತುಂಗಭದ್ರಾ ಮತ್ತು ನಾರಾಯಣಪುರು ಬಲದಂಡೆ ಕಾಲುವೆ ನೀರು ಎಡದಂಡೆ ಕೊನೆಭಾಗಕ್ಕೆ ನೀರು ತಲುಪದೇ ಇರುವದರಿಂದ ಉಸ್ತುವಾರಿ ಸಚಿವರಗಳಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗುವುದು. ತುಂಗಭದ್ರ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರೈತ ಸಂಘದ ಮುಖಂಡ ಚಾಮರಸಮಾಲಿ ಪಾಟೀಲ್ ನೇತೃತ್ವದ ನಿಯೋಗ ಮನವಿ ಮಾಡಿದಾಗ ಸಿಎಂ ಸಚಿವರಿಗೆ ಸಭೆ ನಡೆಸಲು ಸೂಚಿಸಿದರು. ಎರಡು ತಿಂಗಳಾದರೂ ಕೊನೆಭಾಗಕ್ಕೆ ನೀರು ತಲುಪಿಲ್ಲ. ಸಭೆಯನ್ನು ಸಚಿವರು ನಡೆಸಿಲ್ಲ.ಕಾಲುವೆಯಲ್ಲಿ ನೀರು ನಿರ್ವಹಣೆ ಸಂಪೂರ್ಣ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಚುನಾಯಿತ ಜನಪ್ರತಿನಿಧಿಗಳು, ಅಧಿಕಾರಿಗಳು ರೈತರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಎಡದಂಡೆ ಕಾಲುವೆ 82, 85 89, 76, 91, 92 ಕಾಲುವೆ ನೀರೇ ತಲುಪಿಲ್ಲ. ಭತ್ತ ಬೆಳೆ ಒಣಗಿ ಹೋಗಿ ಬೆಳೆ ನಷ್ಟಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿಗಳು ಸೂಚಿಸಿದರೂ ಕೂಡ ನೀರು ಬಾರದೇ ಹೋಗಿದೆ ಎಂದು ಪ್ರಭಾಕರ ಪಾಟೀಲ್ ತಿಳಿಸಿದರು.

ಇದನ್ನು ಓದಿದ್ದೀರಾ? ಕೋಲಾರ | ಪರಸ್ಪರ ಹೃದಯಗಳನ್ನು ಬೆಸೆದ ‘ನಮ್ಮೂರ ಮಸೀದಿ ನೋಡ ಬನ್ನಿ’ ಕಾರ್ಯಕ್ರಮ

ನಾರಾಯಣಪುರ ಬಲದಂಡೆ ಕಾಲುವೆ ಅಧುನೀಕರಣ ಹೆಸರಿನಲ್ಲಿ ಕಾಮಗಾರಿಯನ್ನು ಅರೆಬರೆ ಮಾಡಿ ಗುತ್ತಿಗೆದಾರರು, ಅಧಿಕಾರಿಗಳು ಅಕ್ರಮದಲ್ಲಿ ಶಾಮೀಲಾಗಿದ್ದಾರೆ. ಮುಖ್ಯಮಂತ್ರಿಗಳು ಚುನಾವಣಾ ವೇಳೆಯಲ್ಲಿ ಭಾಷಣ ಮಾಡಿ ಅಧಿಕಾರಕ್ಕೆ ಬಂದು 24 ಗಂಟೆಯಲ್ಲಿ ಗುತ್ತಿಗೆದಾರರನ್ನು ಜೈಲಿಗೆ ಕಳುಹಿಸುವದಾಗಿ ವೀರಾವೇಷವಾಗಿ ಮಾತನಾಡಿದ್ದರು. ಅಧಿಕಾರ ಹಿಡಿದು ಎರಡು ವರ್ಷ ಕಳೆಯುತ್ತಿದ್ದರೂ ಯಾರ ವಿರುದ್ದ ಕ್ರಮವೇ ಆಗಿಲ್ಲ. ಸರ್ಕಾರ ಮಲತಾಯಿ ಧೋರಣೆ ಖಂಡಿಸಿ ಸಿಎಂರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.

ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡರಾದ ಬೂದೆಯ್ಯ ಸ್ವಾಮಿ, ಹಾಜಿ ಮಸ್ತಾನ್, ಭೀಮಣ್ಣನಾಯಕ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ಸಮಾಜದ ನೋವಿಗೆ ಧ್ವನಿಯಾದ ಪತ್ರಕರ್ತನ ಬದುಕಿಗಾಗಿ ನೆರವಿನ ಮನವಿ

ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಶಕಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ಸಮಾಜದ ನೋವು,...

ರಾಯಚೂರು | ಅಂತರರಾಜ್ಯ ಕಳ್ಳನ ಬಂಧನ: ₹25.50 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ

ಸಿಂಧನೂರು ನಗರದ ಮನೆಗೆ ಬೀಗ ಹಾಕಿ ಹೊರಗೆ ಹೋಗಿದ್ದ ವೇಳೆ ಬೀಗ...

ಯಾದಗಿರಿ | ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ; 19 ಮಂದಿ ವಿರುದ್ಧ ಪ್ರಕರಣ ದಾಖಲು

ಗಣೇಶ ಮೂರ್ತಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ...

ನೀರು, ತ್ಯಾಜ್ಯ, ಬೀದಿ ನಾಯಿಗಳ ಸಮಸ್ಯೆಗೆ ಕಡಿವಾಣ: ಕಲಬುರಗಿ ನೂತನ ಮಹಾಪೌರರ ಭರವಸೆ

ನಗರದ ಮೂಲಭೂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದರ ಜೊತೆಗೆ ಆಡಳಿತ ವ್ಯವಸ್ಥೆಯನ್ನು...