ರಾಯಚೂರು | ಮೂರು ದಿನಗಳಿಗೊಮ್ಮೆ ನೀರು; ನಗರಸಭೆಗೆ ಮುತ್ತಿಗೆ ಎಚ್ಚರಿಕೆ

Date:

Advertisements

ನಗರದಲ್ಲಿ ಮೂರು ದಿನಗಳಿಗೊಮ್ಮೆ ನೀರು ಬಿಡುವುದಾಗಿ ನಗರಸಭೆ ಪೌರಾಯುಕ್ತರು ಪ್ರಕಟಿಸಲು ಅಧಿಕಾರ ಇಲ್ಲ. ನಗರಸಭೆ ಸದಸ್ಯರು ಹಾಗೂ ಶಾಸಕರೊಂದಿಗೆ ಚರ್ಚಿಸದೇ ಪ್ರಕಟಿಸಿರುವುದನ್ನು ಹಿಂಪಡೆಯಬೇಕು. ಇಲ್ಲದೇ ಹೋದಲ್ಲಿ ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸುವುದಾಗಿ ಮಾಜಿ ಶಾಸಕ ಎ.ಪಾಪಾರೆಡ್ಡಿ ಹೇಳಿದರು.

ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನಾರಾಯಣಪುರ ಜಲಾಶಯ ಮತ್ತು ಗಣೇಕಲ್ ಜಲಾಶಯದಲ್ಲಿ ನೀರು ಸಂಗ್ರಹವಿದೆ. ಆದರೂ, ಮೂರು ದಿನಗಳಿಗೊಮ್ಮೆ ನೀರು ಬಿಡುವದಾಗಿ ಹೇಳುತ್ತಿದ್ದಾರೆ. ನಗರಸಭೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿಗಳು, ಸದಸ್ಯರು, ಶಾಸಕರು, ಸಂಸದರು ಹಾಗೂ ಸದಸ್ಯರೊಂದಿಗೆ ಸಭೆ ನಡೆಸದೇ ಏಕಾಎಕಿ ಪ್ರಕಟಿಸಿದ್ದಾರೆ. ಅವರಿಗೆ ಈ ಅಧಿಕಾರವಿಲ್ಲ. ಕೂಡಲೇ ಸಭೆ ಕರೆದು ತೀರ್ಮಾನ ಪ್ರಕಟಿಸಬೇಕು.

ನಗರಸಭೆ ಪೌರಾಯುಕ್ತರು ಕುಡಿಯುವ ನೀರಿನ ಗೊಂದಲ ಸೃಷ್ಟಿಸುವ ಜೊತೆಗೆ ಮುಟ್ಯೇಷನ್, ಇ-ಖಾತಾ ನೀಡುವುದನ್ನು ತಡೆದಿದ್ದಾರೆ. ದಾಖಲೆಗಳನ್ನು ಪರಿಶೀಲಿಸಿ ನೀಡಬಹುದಾಗಿದ್ದರೂ ಅನಗತ್ಯವಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ. ನಗರದಲ್ಲಿ ಸ್ವಚ್ಚತೆ ಸೇರಿದಂತೆ ಯಾವುದೇ ಕಾಮಗಾರಿಗಳನ್ನು ಸಹ,  ಪೌರಾಯುಕ್ತರು ಬಡಾವಣೆಗೆ ಆಗಮಿಸಿ ವೀಕ್ಷಣೆ ಮಾಡಿಲ್ಲ.

Advertisements

ಬೇಸಿಗೆ ದಿನಗಳು ಸಮೀಪಿಸುವ ಮುನ್ನವೇ ಕುಡಿಯುವ ನೀರಿನ ಸಮಸ್ಯೆಯಾಗದಂತೆ  ಎಚ್ಚರಿಕೆವಹಿಸಬೇಕಿದೆ. ಅನಗತ್ಯವಾಗಿ ಸಮಸ್ಯೆಯನ್ನು ಸೃಷ್ಟಿಸಬಾರದು. ಆಡಳಿತಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಗಳು, ಪೌರಾಯುಕ್ತರಿಗೆ ನಿರ್ದೇಶನ ನೀಡಬೇಕು. ಇಲ್ಲದೇ ಹೋದಲ್ಲಿ ನಗರಸಭೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು. ನಗರ ಜನತೆ ಹಾಗೂ ಪತ್ರಕರ್ತರು ಸಹ ಆತ್ಮಾವಲೋಕನ ಮಾಡಿಕೊಳ್ಳಬೇಕು. ಚರಂಡಿಗೆ ಕಸ ಹಾಕುವುದನ್ನು ನಿಲ್ಲಿಸಬೇಕು ಎಂದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರುಗಳಾದ ಶಶಿರಾಜ, ಎನ್. ಕೆ. ನಾಗರಾಜ, ಬಿಜೆಪಿ ನಗರ ಅಧ್ಯಕ್ಷ ಬಿ.ಗೋವಿಂದ, ಆರ್‌ಡಿಎ ಮಾಜಿ ಅಧ್ಯಕ್ಷ ವೈ.ಗೋಪಾಲರೆಡ್ಡಿ, ಮಹೇಂದ್ರರೆಡ್ಡಿ, ಯು.ನರಸರೆಡ್ಡಿ, ಗುಡ್ಡಿ ನರಸರೆಡ್ಡಿ, ವೀರೇಶ್ ಪೋಗಲ್ ಉಪಸ್ಥಿತರಿದ್ದರು.

ವರದಿ : ಸಿಟಿಜನ್‌ ಜರ್ನಲಿಸ್ಟ್‌, ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

 "ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಿಂದ ಸಾಕಷ್ಟು ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಗೊಳಗಾಗುವ ಪ್ರದೇಶಗಳ ಸಾರ್ವಜನಿಕರ...

ಬೀದರ್‌ | ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಚಿವದ್ವಯರ ಭೇಟಿ; ಪರಿಶೀಲನೆ

ಕಮಲನಗರ ಹಾಗೂ ಔರಾದ್‌ ತಾಲೂಕಿನಲ್ಲಿ ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಉಸ್ತುವಾರಿ...

ಹಾವೇರಿ | ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

"ಪರಿಶಿಷ್ಟ ವರ್ಗದ ಜನಾಂಗದ ಏಳಿಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಗೆ ಶ್ರೀ ಮಹರ್ಷಿ...

ಉಡುಪಿ | ಶಾಸಕ ಯಶ್ಪಾಲ್ ಸುವರ್ಣರವರ ಮೇಲೆ ಕಠಿಣ ಸಾಂವಿಧಾನಿಕ ಕ್ರಮ ಜರುಗಿಸಿ – ಕೆ ಫಣಿರಾಜ್

ತಮ್ಮ ಶಾಸಕ ಸ್ಥಾನದ ಸಂವಿಧಾನಿಕ ಮರ್ಯಾದೆಯನ್ನು ಮೀರಿ ವರ್ತಿಸಿರುವ ಉಡುಪಿಯ ಶಾಸಕ...

Download Eedina App Android / iOS

X