ರಾಯಚೂರು | ಬರಪೀಡಿತ ಪ್ರದೇಶ ಘೋಷಣೆಗೆ ಒತ್ತಾಯ

Date:

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಿ ಹಾಗೂ ರಾಯಚೂರು ಭಾಗವನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಜಿಲ್ಲಾ ಸಮಿತಿ ಕಾರ್ಯಕರ್ತರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿ ಧರಣಿ ನಡೆಸಿದರು.

- Advertisement -

“ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ತತ್ತರಿಸಿದ್ದು, ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಕಾಯಕ ಬಂಧುಗಳಿಗೆ ಗುರುತಿನ ಚೀಟಿ, ಪ್ರೋತ್ಸಾಹಧನ ನೀಡುತ್ತಿಲ್ಲ. ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಕೆಲಸವನ್ನು 200 ದಿನಗಳಿಗೆ ಹೆಚ್ಚಿಸಿ ಕೂಲಿಕಾರರಿಗೆ ₹600 ಕೂಲಿಯನ್ನು ನೀಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಕಾಯಕ ಬಂಧುಗಳು ಅಥವಾ ಕೂಲಿಕಾರರು ಫಾರಂ ನಂಬರ್ 6ರ ಅರ್ಜಿ ಕೊಡಲು ಬಂದಾಗ ಪಿಡಿಒ ಪಂಚಾಯತಿ ಕೇಂದ್ರದಲ್ಲಿದ್ದು, ಅರ್ಜಿ ಸ್ವೀಕರಿಸಿದ ಪ್ರತಿಯನ್ನು ಸಹಿ ಮೊಹರಿನೊಂದಿಗೆ ಕೊಡಬೇಕು. ಕಾಯಕ ಬಂಧುಗಳಿಗೆ ಗುರಿತಿನ ಚೀಟಿ ಮತ್ತು ಪ್ರೋತ್ಸಾಹ ಧನ ನೀಡಬೇಕು. ಕಾಯಕ ಬಂಧುಗಳು ಮತ್ತು ಕೂಲಿಕಾರರನ್ನು ಪಂಚಾಯತಿಯಲ್ಲಿ ದಾಖಲು ಮಾಡಿ ಕಂಪ್ಯೂಟರ್ ತಂತ್ರಾಂಶದಲ್ಲಿ ಕಾಯಕ ಬಂಧುಗಳ ಹೆಸರುಗಳನ್ನು ನಮೂದಿಸಬೇಕು. ಕ್ರಿಯಾಯೋಜನೆ ಮಾನವ ದಿನಗಳ ಅಂದಾಜು ವೆಚ್ಚದ ಪ್ರತಿಯನ್ನು ಕೊಡಬೇಕು” ಎಂದು ಮನವಿ ಮಾಡಿದರು.

“ಮನರೇಗಾ ಕೂಲಿ ಕಾರ್ಮಿಕರಿಗೆ ಕಡಿಮೆ ಕೂಲಿ ಹಾಕುವುದನ್ನು ಕೂಡಲೇನಿಲ್ಲಿಸಿ ಮತ್ತು ಕೇಂದ್ರ ಸರ್ಕಾರ ನಿಗದಿಗೊಳಿಸಿದ ಕೂಲಿ ಹಣ ನೀಡಬೇಕು. ಕೂಲಿಕಾರರ ಸ್ಥಳದಲ್ಲಿ ಕುಡಿಯುವ ನೀರು, ವಿಶ್ರಾಂತಿಗೆ ವ್ಯವಸ್ಥೆ ಮಾಡಬೇಕು. 60 ವರ್ಷ ಮೇಲ್ಪಟ್ಟವರಿಗೆ ಮತ್ತು ವಿಕಲಚೇತನರಿಗೆ ಕೆಲಸದ ಪ್ರಮಾಣವನ್ನು ನಿಗದಿಗೊಳಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಪೌರ ಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ, ಕುಡಿಯುವ ನೀರು ವ್ಯವಸ್ಥೆಗೆ ಕೂಡಲೇ ಕ್ರಮವಹಿಸಿ: ಜಿಲ್ಲಾಧಿಕಾರಿ

“ಕಾಯಕ ಬಂಧುಗಳಿಗೆ ಮತ್ತು ಕೂಲಿಕಾರರಿಗೆ ತರಬೇತಿ ಶಿಬಿರ ಏರ್ಪಡಿಸಬೇಕು. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕೆಲಸದಲ್ಲಿ ಬಳಸುವ ಹಾರೆ, ಗುದ್ದಲಿ, ಸಲಗೆ, ಪಿಕಾಸಿ, ಬುಟ್ಟಿ ಇತರೆ ಸಲಕರಣೆಗಳನ್ನು ಪಂಚಾಯತಿಯಿಂದಲೇ ಒದಗಿಸಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕರಿಯಪ್ಪ ಅಚ್ಚೊಳ್ಳಿ, ಸಂಗಮೇಶ ಮೂಲಿಮನಿ, ಬಿ ಲಿಂಗಪ್ಪ, ಲಿಂಗಣ್ಣ ಮೊಕಾಶಿ ಇದ್ದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...