ರಾಯಚೂರು | ಬೀದಿನಾಯಿಗಳ ದಾಳಿಗೆ ಯುವತಿ ಬಲಿ; ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡುವಂತೆ ಪ್ರತಿಭಟನೆ

Date:

Advertisements

ಬೀದಿನಾಯಿಗಳ ದಾಳಿಯಿಂದ ಮೃತಪಟ್ಟ ಮಡ್ಡಿಪೇಟೆಯ ನಿವಾಸಿ ಮಹಾದೇವಿ ಕುಟುಂಬಕ್ಕೆ ಪರಿಹಾರ ನೀಡಲು ಒತ್ತಾಯಿಸಿ ಭಾರತ ಕಮ್ಯುನಿಷ್ಟ್ ಪಕ್ಷ(ಮಾರ್ಕ್ಸ್‌ ವಾದಿ)ದಿಂದ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.

ರಾಯಚೂರು ನಗರದ ಮಡ್ಡಿಪೇಟೆ ಬಡಾವವಣೆಯಲ್ಲಿ ಡಿಸೆಂಬರ್‌ 7ರಂದು ಮನೆಯ ಮುಂದೆ ನಿಂತಿದ್ದ ಮಹಾದೇವಿ(23)ಯವರ ಮೇಲೆ ಬೀದಿನಾಯಿಗಳು ದಾಳಿ ಮಾಡಿದ್ದವು. ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಭೀಕರ ಗಾಯಗೊಂಡ ಯುವತಿ ಕೋಮಾ ಸ್ಥಿತಿಗೆ ತೆರಳಿ ಬಳಿಕ ಸಾವನ್ನಪ್ಪಿದ್ದರು.

“ನಾಯಿಗಳ ದಾಳಿಯಿಂದ ಮಹಾದೇವಿ ಕೆಳಗೆ ಬಿದ್ದಾಗ ಅವರ ತಲೆಗೆ ಬಲವಾಗಿ ಪೆಟ್ಟುಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರಿಗೆ ಎಂ ಕೆ ಭಂಡಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಮರಳಿ ಮನೆಗೆ ಕರೆದುಕೊಂಡು ಬಂದಿದ್ದರು. ನಾಲ್ಕು ದಿನಗಳ ನಂತರ ಕೊನೆಯುಸಿರು ಎಳೆದ್ದಾರೆ. ಮಹಾದೇವಿ ಕುಟುಂಬದವರಿಗೆ ರಾಜ್ಯ ಸರ್ಕಾರ ಕೂಡಲೇ ₹30 ಲಕ್ಷ ಪರಿಹಾರ ಕೊಡಬೇಕು” ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

Advertisements

“ನಗರದ ಸ್ಲಂ ಪ್ರದೇಶಗಳಾದ ಮಡ್ಡಿಪೇಟೆ, ಎಲ್‌ಬಿಎಸ್‌ ನಗರ, ಸಿಯಾತಲಾಬ, ಹರಿಜನವಾಡ, ಜಲಾಲನಗರ, ಮೈಲಾರನಗರ, ಕಾಳಿದಾಸನಗರ, ಜಹೀರಾಬಾದ್ ಸ್ಟೇಷನ್ ಏರಿಯಾ, ಕೇಂದ್ರ ಬಸ್ ನಿಲ್ದಾಣ, ರೈಲು ನಿಲ್ದಾಣ ಪ್ರದೇಶಗಳಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ತೆಲಂಗಾಣಕ್ಕೆ ಭತ್ತ ಸಾಗಾಟ ನಿರ್ಬಂಧ; ರಾಜ್ಯ ರೈತ ಸಂಘ ಖಂಡನೆ

“ಬಡಾವಣೆಗಳಲ್ಲಿ ಆಟವಾಡುವ ಮಕ್ಕಳು, ರಸ್ತೆಗಳಲ್ಲಿ ಸಂಚರಿಸುವ ಬೈಕ್‌ ಸವಾರರ ಮೇಲೆ ಬೀದಿನಾಯಿಗಳು ಎರಗುತ್ತವೆ. ಬೀದಿನಾಯಿಗಳನ್ನು ನಿಯಂತ್ರಿಸುವುದು ಕಷ್ಟವಾಗುತ್ತಿದೆ. ನಗರಸಭೆ ಹಾಗೂ ಜಿಲ್ಲಾಡಳಿತ ಬೀದಿನಾಯಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಪ್ರತಿಭಟನೆಯಲ್ಲಿ ಎಚ್ ಪದ್ಮಾ ಕರಿಯಪ್ಪ ಅಚ್ಚೋಳಿ, ಇಂದಿರಾ, ನಾಗರಾಜ, ಹನ್ಮಂತು, ಶಿವಣ್ಣ, ಶ್ರೀನಿವಾಸ, ರಾಜು, ಲಕ್ಷ್ಮಣ, ರೇಣುಕಮ್ಮ, ಶರಣಮ್ಮ, ಅನಿಲ್, ಗಗನ್, ಬುಜಪ್ಪ, ಡಿ ಎಸ್ ಶರಣಬಸವ, ಗೋಕಾರಮ್ಮ, ಸೇರಿದಂತೆ ಮಡ್ಡಿಪೇಟೆ ನಿವಾಸಿಗಳು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X