ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಸುಂಕೇಶ್ವರಹಾಳ ಗ್ರಾಮದಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆಗೈದ ಘಟನೆ ಬುಧವಾರ ನಡೆದಿದೆ.
ಹತ್ಯೆಯಾದ ಯುವಕನನ್ನು ದೇವದುರ್ಗ ತಾಲ್ಲೂಕಿನ ಹದ್ದಿನಾಳ ಗ್ರಾಮದ ನಿವಾಸಿ ಭೂಮನಂದ ಎಂದು ಗುರುತಿಸಲಾಗಿದೆ.
ಕೊಲೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಹಳೆಯ ವೈಷಮ್ಯ ಹಿನ್ನೆಲೆಯೋ ಅಥವಾ ಇತರೆ ಯಾವುದೇ ಕಾರಣದಿಂದ ಕೃತ್ಯ ನಡೆದಿದೆಯೇ ಎಂಬ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಸುದ್ದಿ ಓದಿದ್ದೀರಾ? ಸಿಂಧನೂರು | ಅಂಬೇಡ್ಕರ್ ವಸತಿ ನಿಲಯದಲ್ಲಿ ಆಹಾರ ಸೇವಿಸಿದ 13 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗಬ್ಬೂರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ




