ಡಿಜೆ ಸೌಂಡ್ನಿಂದ ಮಗಳು ಅಸ್ವಸ್ಥಗೊಂಡಿದ್ದಾಳೆ ಎಂದು ಆರೋಪಿಸಿ ಕುಟುಂಬಸ್ಥರು ಜಿಲ್ಲಾಧಿಕಾರಿ ನಿವಾಸದ ಮುಂದೆ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಪ್ರತಿಭಟನೆ ನಡೆಸಿದರು.
ಈ ಕುರಿತು ಭೀಮ್ ಬಿಎಸ್ಪಿ ಜಿಲ್ಲಾಧ್ಯಕ್ಷ ಮಾತನಾಡಿ, ಹಿಂದೆಯೂ ಡಿಜೆ ಸೌಂಡ್ನಿಂದ ಮಕ್ಕಳು ಅಸ್ವಸ್ಥರಾಗಿದ್ದರು. ನಮ್ಮ ಮಕ್ಕಳಿಗಿಂತ ಯಾರೂ ದೊಡ್ಡವರಲ್ಲ. ಜಿಲ್ಲಾಧಿಕಾರಿಯವರು ನಮ್ಮ ಸಮಸ್ಯೆಗೆ ಸ್ಪಂದಿಸಲು ಬರಬೇಕು. ನಮ್ಮ ಮಕ್ಕಳಿಗೆ ಏನಾದರೂ ಆದರೆ ಯಾರು ಜವಾಬ್ದಾರಿ ಎಂದು ಪ್ರಶ್ನಿಸಿ, ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಅಪಘಾತ: ಇಬ್ಬರು ಯುವಕರು ಸಾವು
ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಆಗಮಿಸಿ, ಕುಟುಂಬಸ್ಥರನ್ನು ಮನವೊಲಿಸಿ ಮನೆಗೆ ಕಳುಹಿಸಿದರು.




