ರಾಯಚೂರು | 9 ವರ್ಷಗಳಿಂದ ಅಂಗನವಾಡಿ ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ

Date:

Advertisements

ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ರೋಡಲ ಬಂಡಾ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣವಾಗಿ 9 ವರ್ಷ ಕಳೆದಿದ್ದರೂ ಉದ್ಘಾಟನೆ ಭಾಗ್ಯ ಕಾಣದೆ ಪಾಳು ಬಿದ್ದಂತಾಗಿದೆ. ಅಂಗನವಾಡಿ ಕಟ್ಟಡದ ಸುತ್ತಲೂ ಆಳೆತ್ತರದ ಗಿಡಗಳು ಬೆಳೆದು ಮಕ್ಕಳು ಓಡಾಡಲೂ ಆಗದ ಸ್ಥಿತಿ ನಿರ್ಮಾಣವಾಗಿದೆ. ಹೀಗೆ ದಿನ ಕಳೆದರೆ ಹೊಸ ಕಟ್ಟಡ ಶಿಥಿಲಾವಸ್ಥೆ ತಲುಪುದರಲ್ಲಿ ಅನುಮಾನವೇ ಇಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಕಾಮಗಾರಿ ಮುಗಿದು ಸುಮಾರು ದಿನಗಳು ಕಳೆದಿವೆ. ಶೀಘ್ರವೇ ಕಟ್ಟಡ ಉದ್ಘಾಟಿಸಿ ಮಕ್ಕಳಿಗೆ ಅನುಕೂಲ ಕಲ್ಪಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಿದರೂ ಅಂಗನವಾಡಿ ಕೇಂದ್ರ ತೆರೆದಿಲ್ಲ. ಯಾವ ಕಾರಣಕ್ಕಾಗಿ ಉದ್ಘಾಟನೆ ಮುಂದೂಡಲಾಗುತ್ತಿದೆ ಎಂಬುದೂ ತಿಳಿಯುತ್ತಿಲ್ಲ” ಎಂದು ಊರಿನ ಜನರು ಮಾತನಾಡುತ್ತಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯ ಅಥವಾ ರಾಜಕೀಯ ಹಿತಾಸಕ್ತಿಯಿಂದ ಅಂಗನವಾಡಿ ಕೇಂದ್ರ ಉದ್ಘಾಟಿಸದೆ ಮಕ್ಕಳ ಭವಿಷ್ಯವನ್ನು ಹಾಳು ಮಾಡುವುದು ಸರಿಯಲ್ಲ. ₹7 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡವನ್ನು ಉಪಯೋಗಿಸದೇ
ಹಾಳು ಮಾಡುವುದು ಎಷ್ಟು ಸರಿ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

Advertisements

“ಕಟ್ಟಡ ನಿರ್ಮಾಣ ಪೂರ್ಣಗೊಂಡಿದ್ದರೂ ಅದನ್ನು ಬಳಸದೆ ಕಟ್ಟಡದಲ್ಲಿ ಬಿರುಕು ಬಿಟ್ಟಿದೆ. ಅಂಗನವಾಡಿ ಮುಂಭಾಗ ದೊಡ್ಡ ನೀರಿನ ತೊಟ್ಟಿ ಇದೆ. ಶೌಚಾಲಯದ ಸ್ಥಿತಿಗತಿ ಅರಿಯಲು ಪ್ರಯತ್ನಿಸಿದರೂ ಮುಖ್ಯ ಕಟ್ಟಡಕ್ಕೆ ಬೀಗ ಜಡಿದಿದ್ದರಿಂದ ಒಳಗೆ ಹೋಗಲು ಸಾಧ್ಯವಾಗಿಲ್ಲ” ಎಂದು ಗ್ರಾಮಸ್ಥರು ದೂರಿದ್ದಾರೆ..

ಸ್ಥಳೀಯ ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ರಮೇಶ ವೀರಾಪುರ ಈ ದಿನ.ಕಾಮ್ ಜೊತೆ ಮಾತನಾಡಿ, “2014-15 ರಿಂದ ಈವರೆಗೂ ಅಂಗನವಾಡಿ ಉದ್ಘಾಟನೆ ಭಾಗ್ಯ ಕಂಡಿಲ್ಲದಿರುವುದು ಅಕ್ಷಮ್ಯ ಅಪರಾಧ. ಶಾಸಕರು ಹಾಗೂ ಜನಪ್ರತಿನಿಧಿಗಳು ಕಮಿಷನ್ ದಂಧೆಗೆ ಬಿದ್ದು ಇಂತಹ ಕಟ್ಟಡಗಳು ಹಾಳುಗುತ್ತಿವೆ. ಕೆಲವು ಕಡೆ ಅಂಗನವಾಡಿ ಕಟ್ಟಡ ಇಲ್ಲದಿರುವುದು ಸಮಸ್ಯೆಯಾಗಿದ್ದರೆ, ಇಲ್ಲಿ ಕಟ್ಟದವಿದ್ದರೂ ಬಳಸದೇ ಇರುವುದು ದುರಂತ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಶಾಸಕರು ಚುನಾವಣೆ ಸಮಯದಲ್ಲಿ ಮಾತ್ರ ಹಳ್ಳಿ ಕಡೆಗೆ ಪ್ರಯಾಣ ಮಾಡುತ್ತಾರೆ. ಸಾಮಾನ್ಯ ಜನರಿಗೆ ಆಶ್ವಾಸನೆ ಕೊಟ್ಟು ಈಗ ತಮ್ಮ ಜೇಬು ತುಂಬಿಸಿ ಕೊಳ್ಳುತ್ತಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿದ್ದೀರಾ? ರಾಯಚೂರು | ಕೆರೆಯಂತಾದ ಸರ್ಕಾರಿ ಉರ್ದು ಶಾಲೆಯ ಆವರಣ; ಜನಪ್ರತಿನಿಧಿಗಳ ನಿರ್ಲಕ್ಷ್ಯ

“ರೋಡಲಬಂಡ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಕೂಡ ರಾಜಕೀಯ ಮಾಡುತ್ತಾರೆ. ಊರಿನ ಜನರು ಪ್ರಶ್ನೆ ಮಾಡಿದರೆ ರಾಜಕೀಯ ತಂದು ಗೊಂದಲ ಸೃಷ್ಟಿಸುತ್ತಾರೆ. ಇದನ್ನು ಬೇಗನೆ ಪರಿಶೀಲಿಸಿಸಬೇಕು. ಈ ಕಟ್ಟಡ ಹಾಳು ಬಿದ್ದು ಬಿರುಕು ಬಿಟ್ಟಿದೆ. ಇದನ್ನು ಕೆಡವಿ ಹೊಸ ಕಟ್ಟಡ ಕಟ್ಟಬೇಕು. ಸಂಬಂಧಪಟ್ಟ ಇಲಾಖೆ ಗುತ್ತಿಗೆದಾರ ಹಾಗೂ ಶಾಮೀಲಾದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಕುರಿತು ಈ ದಿನ.ಕಾಮ್‌ ಪಿಡಿಒ ಅವರನ್ನು ಸಂಪರ್ಕಿಸಿದಾಗ, “ನಾನು ನೂತನವಾಗಿ ನೇಮಕವಾಗಿದ್ದನೆ. ಕೆಲವು ದಿನಗಳಲ್ಲಿ ಗ್ರಾಮಸಭೆ ಕರೆದು ವಿಚಾರಿಸಲಾಗುವುದು” ಎಂದು ಪ್ರತಿಕ್ರಿಯಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ 1500 ಹೆಚ್ಚುವರಿ ಬಸ್‌

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಗೌರಿ-ಗಣೇಶ ಹಬ್ಬದ ಪ್ರಯುಕ್ತ ವಿಶೇಷ...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X