ರಾಯಚೂರು | ನ.26ರಿಂದ 28ವರೆಗೆ ನಿರಂತರ ಹೋರಾಟಕ್ಕೆ ಕರೆ

Date:

ರೈತ ಮತ್ತು ಕಾರ್ಮಿಕರ ಹಕ್ಕುಗಳಿಗೆ ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ನ.26ರಿಂದ 28ವರೆಗೆ ಬೆಂಗಳೂರಿನ ಪ್ರೀಡಂಪಾರ್ಕನಲ್ಲಿ 72ಗಂಟೆಗಳ ನಿರಂತರ ಹೋರಾಟಕ್ಕೆ ಕರೆ ನೀಡಿದ್ದು, ಸರ್ಕಾರಿ ಭೂಮಿ ಸಾಗುವಳಿ ಮಾಡುವ ರೈತರು ಭಾಗವಹಿಸುವಂತೆ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ಆಂಜಿನಯ್ಯ ಕುರುಬದೊಡ್ಡಿ ಮನವಿ ಮಾಡಿದ್ದಾರೆ.

ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಎಲ್ಲಾ ಸರ್ಕಾರಗಳು ಬಗರ ಹುಕುಂ ಸಾಗುವಳಿದಾರರಿಗೆ ಪಟ್ಟಾ ನೀಡಲು ಮುಂದಾಗುತ್ತಿಲ್ಲ. ಅನೇಕ ಹಂತದ ಹೋರಾಟಗಳು ನಡೆಸಿದ್ದರೂ ಕೇವಲ ಭರವಸೆಗಳನ್ನು ನೀಡುತ್ತಾ ಬರುತ್ತಿವೆ. ದೇವದುರ್ಗ, ಲಿಂಗಸೂಗೂರು, ಮಾನವಿ ಸೇರಿದಂತೆ ಅನೇಕ ತಾಲೂಕಗಳಲ್ಲಿ ಅರಣ್ಯ ಭೂಮಿ ಸಾಗುವಳಿ ಮಾಡುತ್ತಿರುವ ರೈತರಿಗೆ ಕಿರುಕುಳ ನೀಡಲಾಗುತ್ತಿದೆ.

ಅರಣ್ಯ ಹಕ್ಕು ಕಾಯ್ದೆಯನ್ನುಜಾರಿಗೊಳಿಸುವುದು, ಸರ್ಕಾರ ಭೂಮಿ ಉಳುಮೆ ಮಾಡುತ್ತಿರುವ ರೈತರಿಗೆ ಪಟ್ಟಾ ನೀಡಲು ನಡೆಯಲಿರು ಹೋರಾಟದಲ್ಲಿ ಜನರು ಭಾಗವಹಿಸಬೇಕು, ಒಂದು ಸಾವಿರ ಜನರು ಬೆಂಗಳೂರು ಹೋರಾಟಕ್ಕೆ ತೆರಳಲು ಉದ್ದೇಶಿಸಲಾಗಿದೆ ಎಂದರು.

ಗ್ರಾಮೀಣ ಕೂಲಿಕಾರರ ಸಂಘದ ಸಂಚಾಲಕ ರಾಹುಲ ಮಾತನಾಡಿ, ದುಡಿಯುವ ಜನರ ಆಶಯಗಳಿಗೆ ವಿರುದ್ಧವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಡೆದುಕೊಳ್ಳುತ್ತಿದ್ದು, ಸಾಗುವಳಿದಾರರಿಗೆ ಪಟ್ಟಾ ನೀಡಲು ರಾಜಭವನ ಚಲೋ ಕಾರ್ಯಕ್ರಮ ನಡೆಸಲಾಗುತ್ತಿದೆ. 50ಸಾವಿರಕ್ಕೂ ಅಧಿಕ ಜನರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ರೈತರು, ಕಾರ್ಮಿಕರು, ದಲಿತ ಪರವಾದ ಸಂಘಟನೆಗಳು, ಜನರು ಭಾಗವಹಿಸುವಂತೆ ಮನವಿ ಮಾಡಿದರು. ಈ ಸಂದರ್ಬದಲ್ಲಿ ಹನುಮಂತ ಗುಂಜಳ್ಳಿ, ರಮೇಶ, ಸ್ವಾಮಿದಾಸ, ಶಿವರಾಜ ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅಯ್ಯಪ್ಪ ಹುಟ್ಟಿನ ಬಗ್ಗೆ ಅವಹೇಳನ; ಮಾಲಾಧಾರಿಗಳ ಪ್ರತಿಭಟನೆ

ಶಬರಿಮಲೆಯ ಅಯ್ಯಪ್ಪ ಸ್ವಾಮಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಿದ್ದ...

ಬೆಂಗಳೂರು | 20 ದಿನದ ಹಸುಗೂಸು ಮಾರಾಟ; ಮತ್ತಿಬ್ಬರ ಬಂಧನ

20 ದಿನದ ಹಸುಗೂಸನ್ನು ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು...

ಶಿವಮೊಗ್ಗ | ಸಿಡಿಲು ಬಡಿದು ಸಹೋದರರ ಸಾವು

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸಹೋದರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ...

ಉತ್ತರ ಕನ್ನಡ | ಅವೈಜ್ಞಾನಿಕ ಮೀನುಗಾರಿಕೆ; ಸಮುದ್ರದಲ್ಲಿ ಮೀನು ಕ್ಷಾಮ

ಬರ ಕೇವಲ ರೈತರನ್ನು ಕಾಡುತ್ತಿಲ್ಲ, ಸಮುದ್ರ ಮೀನುಗಾರಿಕೆಗೂ ಈ ಬಾರಿ ಬರ...