ರಾಯಚೂರು | ಜಾತಿ ನಿಂದನೆ, ದೌರ್ಜನ್ಯ; ಸಚಿವ ಡಿ. ಸುಧಾಕರ್ ವಜಾಕ್ಕೆ ಸೆ.15ರಂದು ಪ್ರತಿಭಟನೆ

Date:

Advertisements

ಚಳ್ಳಕೆರೆ ಶಾಸಕ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಡಿ. ಸುಧಾಕರ್ ಅವರು ಪರಿಶಿಷ್ಟ ಸಮುದಾಯದವರ ವಿರುದ್ಧ ದೌರ್ಜನ್ಯ ನಡೆಸಿ ಜಾತಿ ನಿಂದನೆ ಮಾಡಿರುವುದರಿಂದ ಕೂಡಲೇ ಬಂಧಿಸಿ ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿ ಸೆಪ್ಟೆಂಬರ್ 15ರಂದು ಜೆಡಿಎಸ್ ರಾಯಚೂರು ಜಿಲ್ಲಾ ಘಟಕದಿಂದ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ವಿರೂಪಾಕ್ಷಿ ಹೇಳಿದರು.

“ನಗರದಲ್ಲಿ ನಡೆದ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದರು. “ಬೆಂಗಳೂರಿನ ಯಲಹಂಕ ಬಳಿ ಬೆಲೆ ಬಾಳುವ ಭೂಮಿಯನ್ನು ಹೊಂದಿರುವ ಸುಬ್ಬಮ್ಮ ಎಂಬುವವರ ಕುಟುಂಬದ ಮೇಲೆ ಸುಧಾಕರ ಬೆಂಬಲಿಗರು ಗುಂಡಾಗಿರಿ ಪ್ರದರ್ಶಿಸಿ ಅತಿಕ್ರಮಿಸಲು ಹುನ್ನಾರ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಕೃಪಾ ಕಟಾಕ್ಷದಿಂದ ಘಟನೆ ನಡೆಯಲು ಕಾರಣವಾಗಿದೆ. ಸಚಿವರು ಸೇರಿದಂತೆ ಸಂಬಂಧಿಸಿದವರ ವಿರುದ್ದ ಜಾತಿ ನಿಂಧನೆ, ದೌರ್ಜನ್ಯ ಪ್ರಕರಣ ದಾಖಲಾದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ” ಎಂದು ಆರೋಪಿಸಿದರು.

“ಇತ್ತೀಚಿಗೆ ಸುಪ್ರಿಕೋರ್ಟ್‌ ಪರಿಶಿಷ್ಟ ಜಾತಿ ಜನರ ಮೇಲೆ ದೌರ್ಜನ್ಯ ಪ್ರಕರಣಗಳಲ್ಲಿ ಮೊದಲ ಎಫ್‌ಐಆರ್ ದಾಖಲಿಸಿ ಆರೋಪಿಗಳನ್ನು ಬಂಧಿಸಿ ನಂತರ ವಿಚಾರಣೆ ನಡೆಸುವಂತೆ ಆದೇಶಿಸಿದೆ. ಆದರೆ ರಾಜ್ಯದ ಸಂಪುಟ ದರ್ಜೆ ಸಚಿವರೊಬ್ಬರ ವಿರುದ್ದ ಕೇಸ್ ದಾಖಲಾದರೂ ಬಂಧಿಸಿಲ್ಲ. ಶೆವನ್ ಹಿಲ್‌ನ ಎಲ್ಲ ಟ್ರಸ್ಟಿಗಳ ವಿರುದ್ದವೂ ಪ್ರಕರಣ ದಾಖಲಿಸಬೇಕು. ಸಚಿವರನ್ನು ಸಂಪುಟದಿಂದ ಕೈ ಬಿಡಬೇಕು” ಎಂದು ಆಗ್ರಹಿಸಿದರು.

Advertisements

“ಉಪ ಮುಖ್ಯಮಂತ್ರಿ ಡಿ ಕೆ ಶಿವುಕುಮಾರ್ ಸೇರಿದಂತೆ ಎಚ್‌ ಆಂಜಿನಯ್ಯ ಇವರು ಪಕ್ಷದ ಸಚಿವರನ್ನು ರಕ್ಷಿಸಿಕೊಳ್ಳಲು ಸುಳ್ಳು ಹೇಳುತ್ತಿದ್ದಾರೆ. ಅನ್ಯಾಯವಾದ ಮಹಿಳೆಗೆ ನ್ಯಾಯ ಒದಗಿಸುವ ಬದಲು ಸಚಿವರ ರಕ್ಷಣೆಗೆ ನಿಂತಿರುವುದು ಖಂಡನೀಯ. ದಲಿತರ ರಕ್ಷಣೆ ಮಾಡಲು ನಿಜವಾದ ಕಳಕಳಿ ಸರ್ಕಾರಕ್ಕೆ ಇದ್ದರೆ ಕೂಡಲೇ ಆರೋಪಿಗಳನ್ನು ಬಂಧಿಸಿ ಸುಬ್ಬಮ್ಮ ಎಂಬುವವರಿಗೆ ರಕ್ಷಣೆ ನೀಡಿ, ನ್ಯಾಯ ಒದಗಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಸಚಿವ ಡಿ.ಸುಧಾಕರ್‌ ವಜಾಗೆ ಮುಖ್ಯಮಂತ್ರಿ ಚಂದ್ರು ಆಗ್ರಹ

ಜಿಲ್ಲೆಯಲ್ಲಿಯೂ ದಲಿತರ ಮೇಲೆ ದೌರ್ಜನ್ಯ, ಹಲ್ಲೆ ಪ್ರಕರಣಗಳು ಹೆಚ್ಚಳವಾಗುತ್ತಿವೆ. ರಾಯಚೂರು ತಾಲೂಕಿನ ಮರ್ಚಟ್ಹಾಳ, ದೇವದುರ್ಗ ತಾಲೂಕಿ ಹಿರೇಕೂಡ್ಲಗಿ ದಲಿತರ ಮೇಲೆ ಹಲ್ಲೆ ನಡೆದಿದೆ. ದಲಿತ ಸಂಘಟನೆಗಳೊಂದಿಗೆ ಸೇರಿ ಪಕ್ಷ ಹೋರಾಟ ನಡೆಸಲಿದೆ” ಎಂದರು.

ಈ ಸಂದರ್ಭದಲ್ಲಿ ನರಸಪ್ಪ ಆಶಾಪುರು, ಮಹೇಶ ಕುಮಾರ, ವಿಶ್ವನಾಥ ಪಟ್ಟಿ ಇದ್ದರು.

 ರಾಯಚೂರು ಜಿಲ್ಲಾ ಸಿಟಿಜನ್ ಜರ್ನಲಿಸ್ಟ್ ಹಫೀಜುಲ್ಲ ಮಾಹಿತಿ ಆಧರಿಸಿದ ವರದಿ
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನವಜಾತ ಶಿಶುವನ್ನು ರಸ್ತೆ ಬದಿ ಬಿಟ್ಟು ಹೋದ ಪೋಷಕರು!

ರಾಯಚೂರು ತಾಲೂಕಿನ ಕಲ್ಮಲಾ ಗ್ರಾಮದ ಕಲ್ಲೂರು ರಸ್ತೆಯ ಬಳಿಯಲ್ಲಿ ಇಂದು ಹೃದಯವಿದ್ರಾವಕ...

ರಾಯಚೂರು | ಗ್ರಾಮವನ್ನು ಪಟ್ಟಣ ಪಂಚಾಯತ್ ಮೇಲ್ದರ್ಜೆಗೆ ಏರಿಸಬಾರದು : ಗ್ರಾಮಸ್ಥರ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕಿನ ಗುರುಗುಂಟ ಗ್ರಾಮವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆರಿಸಬಾರದು ಎಂದು ರಾಜ್ಯ...

ರಾಯಚೂರು | ಶೀಲಹಳ್ಳಿ ಸೇತುವೆ ಮುಳುಗಡೆ : ನಾಲ್ಕು ಗ್ರಾಮಕ್ಕೆ ಸಂಪರ್ಕ ಕಡಿತ

ಲಿಂಗಸುಗೂರು ತಾಲ್ಲೂಕಿನ ಶೀಲಹಳ್ಳಿ ಸೇತುವೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಮುಳುಗಿದ್ದು,...

ರಾಯಚೂರು | ನಿರಂತರ ಮಳೆ : ಸೂರ್ಯಕಾಂತಿ ಬೆಳೆಗೆ ಕೀಟ ಬಾಧೆ

ಜಿಲ್ಲೆಯಲ್ಲಿ ನಿರಂತರ ವಾರದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಸೂರ್ಯಕಾಂತಿ ಬೆಳೆಗಾರರ...

Download Eedina App Android / iOS

X