ರಾಯಚೂರು | ಭತ್ತದ ಇಳುವರಿ ಕುಸಿತ; ಎಪಿಎಂಸಿಯಲ್ಲಿ ನೆರೆ ರಾಜ್ಯಗಳ ರೈತರ ಪಾರುಪತ್ಯ

Date:

Advertisements

ರಾಯಚೂರು ಜಿಲ್ಲೆಯಲ್ಲಿ ಭತ್ತದ ಇಳುವರಿ ಕುಸಿದಿರುವ ಕಾರಣದಿಂದ ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ ಹಾಗೂ ತೆಲಂಗಾಣದ ರೈತರು ನಗರದ ರಾಜೇಂದ್ರ ಗಂಜ್‌ ಮಾರುಕಟ್ಟೆಯಲ್ಲಿ ಒಂದೇ ದಿನ ದಾಖಲೆಯ 66 ಸಾವಿರ ಚೀಲ ಭತ್ತ ಮಾರಾಟ ಮಾಡಿ ಉತ್ತಮ ಲಾಭ ಪಡೆದಿದ್ದಾರೆ.

ರಾಯಚೂರಿನ ಎಪಿಎಂಸಿಗೆ ಕಳೆದೊಂದು ವಾರದಿಂದ ಭತ್ತದ ಆವಕ ಹೆಚ್ಚಿದೆ. ಜಿಲ್ಲೆಯ ಭತ್ತದ ನಾಡು ಸಿಂಧನೂರು ತಾಲೂಕುವೊಂದರಲ್ಲೇ ಸುಮಾರು 5,600 ಎಕರೆ ಪ್ರದೇಶದಲ್ಲಿ ಭತ್ತ ಬಿತ್ತನೆಯಾಗಿದೆ. ಕಟಾವಿಗೂ ಮುನ್ನವೇ ಕ್ವಿಂಟಾಲ್‌ಗೆ ₹3,000ದಿಂದ ₹3,200 ದರವಿದೆ. ಎಪಿಎಂಸಿಯಲ್ಲಿ 66,145 ಚೀಲ ಮಾರಾಟವಾಗಿ ದಾಖಲೆ ಮೂಡಿಸಿದೆ. ಕಳೆದ ಎರಡ್ಮೂರು ದಿನಗಳಿಂದಲೂ 56 ಸಾವಿರ ಕ್ವಿಂಟಾಲ್‌ ಭತ್ತ ಆವಕವಾಗಿದೆ.

ರಾಯಚೂರು ಎಪಿಎಂಸಿಯಲ್ಲಿ ನೆರೆಯ ತೆಲಂಗಾಣ ಹಾಗೂ ಆಂಧ್ರಪ್ರದೇಶದ ರೈತರದ್ದೇ ಪಾರುಪತ್ಯ ಎನ್ನುವಂತಾಗಿದೆ. ಜಿಲ್ಲೆಯ ಸಿಂಧನೂರು, ಸಿರವಾರ, ಮಾನ್ವಿ, ರಾಯಚೂರು ತಾಲೂಕುಗಳಲ್ಲೂ ಅಲ್ಲಲ್ಲಿ ಭತ್ತದ ಕಟಾವು ನಡೆದಿದ್ದು, ಉತ್ತಮ ಬೆಲೆ ಇರುವುದರಿಂದ ಕೆಲವರು ಮಾರಾಟಕ್ಕೆ ಮುಂದಾಗಿದ್ದಾರೆ.

Advertisements

ನೆರೆಯ ಆಂಧ್ರಪ್ರದೇಶ ಮತ್ತು ತೆಲಂಗಾಣಗಳಲ್ಲಿ ಭತ್ತಕ್ಕೆ ಸರಿಯಾದ ದರ ದೊರಕದ ಹಿನ್ನೆಲೆಯಲ್ಲಿ ಅಲ್ಲಿನ ರೈತರು ರಾಯಚೂರಿಗೆ ಆಗಮಿಸಿ ಭತ್ತ ಮಾರಾಟ ಮಾಡುವುದು ಕಳೆದ ಹಲವು ವರ್ಷಗಳಿಂದ ನಡೆದುಕೊಂಡೇ ಬಂದಿದೆ. ಈ ಬಾರಿಯಂತೂ ಇಲ್ಲಿ ಇಳುವರಿ ಕುಸಿದಿರುವ ಹಿನ್ನೆಲೆಯಲ್ಲಿ ನೆರೆ ರಾಜ್ಯಗಳ ರೈತರು ತಂದಿರುವ ಭತ್ತ ನಿಂತಲ್ಲೇ ಖರೀದಿಯಾಗಿದ್ದು, ಭರಪೂರ ದುಡ್ಡು ದೊರೆತಿದೆ.

ಈ ಸುದ್ದಿ ಓದಿದ್ದೀರಾ? ಮಹಾಧರಣಿ | ದೇಶದ ಜನರ ಅನಾರೋಗ್ಯದಲ್ಲೂ ಮೋದಿ ಸರ್ಕಾರ ಲೂಟಿ ಮಾಡಿದೆ: ರವಿ ಪುಣಚ

ಕಳೆದ ವರ್ಷ ನವೆಂಬರ್‌ನಲ್ಲಿ ಸೋನಾ ಮಸೂರಿ ಹಾಗೂ ರಾಜಹಂಸ ಭತ್ತಕ್ಕೆ ಕ್ವಿಂಟಾಲ್‌ಗೆ ₹1,750 ದರವಿದ್ದರೆ, ಈ ಬಾರಿ ಪ್ರತಿ 75 ಕೆಜಿ ಭತ್ತಕ್ಕೆ ₹1,880 ರಿಂದ ₹2,100ರಷ್ಟು ದರವಿದೆ. ಸಿಂಧನೂರು ಭಾಗದಲ್ಲಿ ಕಳೆದ ವರ್ಷ ಆರ್‌ಎನ್‌ಆರ್‌ ಕ್ವಿಂಟಾಲ್‌ ಭತ್ತಕ್ಕೆ ₹1,800 ಇತ್ತು. ಈ ಬಾರಿ 75 ಕೆಜಿಗೆ ₹2,500ರವರೆಗೂ ಮಾರಾಟವಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X