ರಾಯಚೂರು | ಉದ್ಯೋಗ, ಬೆಲೆ ಏರಿಕೆ ನಿಯಂತ್ರಣಕ್ಕೆ ಆಗ್ರಹ

Date:

Advertisements

ಬೆಲೆ ಏರಿಕೆ ನಿಯಂತ್ರಿಸಬೇಕು ಮತ್ತು ಉದ್ಯೋಗ ಸೃಷ್ಟಿಸಬೇಕು ಎಂದು ಒತ್ತಾಯಿಸಿ ಸಿಪಿಐ(ಎಂ) ಪಕ್ಷದ ಕಾರ್ಯಕರ್ತರು ರಾಯಚೂರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದರು. “ಕೇಂದ್ರದ ಒಕ್ಕೂಟ ಸರ್ಕಾರ ಮುಂದುವರೆಸುತ್ತಿರುವ ನವ ಉದಾರೀಕರಣದ ನೀತಿಗಳಿಂದ ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಮತ್ತೊಂದು ಕಡೆ ನಿರುದ್ಯೋಗಿಗಳ ಸಂಖ್ಯೆಯೂ ಕೂಡ ಹೆಚ್ಚಳವಾಗುತ್ತಿದ್ದು, ಇದರಿಂದ ಜನ ಸಾಮಾನ್ಯರು ಸಂಕಷ್ಟಕ್ಕೀಡಾಗುತ್ತಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರ ಕೂಡಲೇ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು” ಎಂದು ಆಗ್ರಹಿಸಿದರು.

“ನವ ಉದಾರೀಕರಣ ನೀತಿಗಳಿಂದ ದೇಶದ ಜನತೆ ಅದರಲ್ಲೂ ಬಡ ಜನತೆ ಬೆಲೆ ಏರಿಕೆಯಿಂದಾಗಿ ತೀವ್ರವಾಗಿ ನಲುಗುವಂತಾಗಿದೆ. ಅಗತ್ಯ ವಸ್ತುಗಳಾದ ಅಕ್ಕಿ, ಬೇಳೆ, ಅಡುಗೆ ಎಣ್ಣೆ, ಪೆಟ್ರೋಲ್, ಡೀಸೆಲ್, ವಿದ್ಯುತ್, ಕೃಷಿ ಹೂಡಿಕೆಗಳಾದ ಬೀಜ, ರಾಸಾಯನಿಕ ಗೊಬ್ಬರ, ಕೀಟ ನಾಶಕ, ಕೃಷಿ ಉಪಕರಣಗಳು, ನಾಗರಿಕರ ಆರೋಗ್ಯದ ಔಷಧಿ ಬೆಲೆಗಳು ಶೈಕ್ಷಣಿಕ ಸೌಲಭ್ಯದ ಡೊನೇಷನ್ ಹಾಗೂ ಫೀಸುಗಳ ಬೆಲೆಗಳು ಗಗನಮುಖಿಯಾಗಿವೆ. ಈ ಎಲ್ಲ ಬೆಲೆ ಏರಿಕೆಯ ಹಿಂದೆ ಅಗತ್ಯ ವಸ್ತುಗಳ ಬೆಲೆಗಳ ಮೇಲಿನ ನಿಯಂತ್ರಣ ವಾಪಸ್ ಪಡೆದಿದ್ದು, ಸಹಾಯಧನವನ್ನು ಕಡಿತ ಮಾಡಿರುವುದು ಮುಕ್ತ ವ್ಯಾಪಾರಕ್ಕೆ ದೇಶವನ್ನು ತೆರೆದಿದ್ದು ಮತ್ತು ಕಾಳಸಂತೆಕೋರತನಕ್ಕೆ ಕುಮ್ಮಕ್ಕು ನೀಡಿರುವುದು ಕಾರಣವಾಗಿದೆ. ಇದಕ್ಕೆ ಕೇಂದ್ರ ಸರ್ಕಾರವೇ ನೇರ ಹೊಣೆ” ಎಂದು ಆರೋಪಿಸಿದರು.

Advertisements

“ಕೇಂದ್ರ ಸರ್ಕಾರ ಉದ್ಯೋಗಾವಕಾಶಗಳನ್ನು ಹೆಚ್ಚಿಸಬೇಕು. ಖಾಲಿ ಇರುವ ಎಲ್ಲ ಉದ್ಯೋಗಗಳನ್ನು ಭರ್ತಿ ಮಾಡಬೇಕು. ಉದ್ಯೋಗ ನೀಡುವವರೆಗೆ ನಿರುದ್ಯೋಗ ಭತ್ತೆ ನೀಡಬೇಕು. ಎಲ್ಲ ಹಂತದ ಬೆಲೆ ಏರಿಕೆಯನ್ನು ತಡೆಗಟ್ಟಬೇಕು. ಅನ್ನಭಾಗ್ಯಕ್ಕೆ ಹೆಚ್ಚುವರಿ 5 ಕೆಜಿ ಅಕ್ಕಿಯನ್ನು ಒದಗಿಸಬೇಕು. ವಿದ್ಯುತ್ ರಂಗದ ಖಾಸಗೀಕರಣ ಮತ್ತು ಸ್ಮಾರ್ಟ್ ಮೀಟರ್ ಅಳವಡಿಕೆ ವಿಧಾನವನ್ನು ನಿಲ್ಲಿಸಬೇಕು. ರಾಜ್ಯ ಮತ್ತು ಜಿಲ್ಲೆಯನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಸರ್ಕಾರದ ವೈಫಲ್ಯ ವಿರುದ್ಧ ರಾಜ್ಯಾದ್ಯಂತ ಶುಕ್ರವಾರ ಬಿಜೆಪಿ ಪ್ರತಿಭಟನೆ: ಬಿಎಸ್‌ವೈ

ಪ್ರತಿಭಟನೆಯ ನೇತೃತ್ವವನ್ನು ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ ಜಿ ವೀರೇಶ, ಡಿ ಎಸ್ ಶರಣಬಸವ, ಹೆಚ್ ಪದ್ಮಾ, ಕರಿಯಪ್ಪ ಅಚ್ಚೊಳ್ಳಿ, ವರಲಕ್ಷ್ಮಿ ರಮೇಶ, ಜಿಲಾನಿಪಾಶಾ, ಗೋಕುರಮ್ಮ, ಗಂಗಮ್ಮ, ಇಂದಿರಾ, ಮೌಲಪ್ಪ, ವೀರೇಶ, ಕುರುಮಪ್ಪ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.

ವರದಿ : ಹಫೀಜುಲ್ಲ, ಸಿಟಿಜನ್‌ ಜರ್ನಲಿಸ್ಟ್

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗ್ರಾಮವನ್ನು ಪಟ್ಟಣ ಪಂಚಾಯತ್ ಮೇಲ್ದರ್ಜೆಗೆ ಏರಿಸಬಾರದು : ಗ್ರಾಮಸ್ಥರ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕಿನ ಗುರುಗುಂಟ ಗ್ರಾಮವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆರಿಸಬಾರದು ಎಂದು ರಾಜ್ಯ...

ರಾಯಚೂರು | ಶೀಲಹಳ್ಳಿ ಸೇತುವೆ ಮುಳುಗಡೆ : ನಾಲ್ಕು ಗ್ರಾಮಕ್ಕೆ ಸಂಪರ್ಕ ಕಡಿತ

ಲಿಂಗಸುಗೂರು ತಾಲ್ಲೂಕಿನ ಶೀಲಹಳ್ಳಿ ಸೇತುವೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಮುಳುಗಿದ್ದು,...

ರಾಯಚೂರು | ನಿರಂತರ ಮಳೆ : ಸೂರ್ಯಕಾಂತಿ ಬೆಳೆಗೆ ಕೀಟ ಬಾಧೆ

ಜಿಲ್ಲೆಯಲ್ಲಿ ನಿರಂತರ ವಾರದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಸೂರ್ಯಕಾಂತಿ ಬೆಳೆಗಾರರ...

ರಾಯಚೂರು | ಪಾಳುಬಿದ್ದ ದಾದಿಯರ ವಸತಿ ಗೃಹಗಳು; ಸ್ಥಳೀಯ ಆಡಳಿತದ ನಿರ್ಲಕ್ಷ್ಯ ಆರೋಪ

ರಾಯಚೂರಿನ ಸಿರವಾರ ನಗರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಲಾಗಿರುವ ದಾದಿಯರ ವಸತಿ...

Download Eedina App Android / iOS

X