ರಾಯಚೂರು | ಸರ್ಕಾರಿ ಭೂಮಿಯನ್ನು ಭೂಗಳ್ಳರಿಂದ ರಕ್ಷಿಸಿ, ವಸತಿ ವಂಚಿತರಿಗೆ ನೀಡಲು ಆಗ್ರಹ

Date:

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸೋಮಲಾಪುರ ಗ್ರಾಮದ ಬೂದಿಹಾಳ ಕ್ಯಾಂಪ್‌ನ ಸರ್ವೆ ನಂ.71Aನಲ್ಲಿರುವ 3.27 ಎಕರೆ ಸರ್ಕಾರಿ ಭೂಮಿಯನ್ನು ವಸತಿಹೀನ ಬಡವರಿಗೆ ಹಂಚಿಕೆ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಮತ್ತು ವಸತಿ ವಂಚಿತರು ಬೂದಿಹಾಳ ಕ್ಯಾಪ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

- Advertisement -

ಪ್ರತಿಭಟನೆಯಲ್ಲಿ ಮಾತನಾಡಿದ ರೈತಸಂಘದ ಮುಖಂಡ ಡಿ.ಎಚ್ ಪೂಜಾರ, “ಈ ಭೂಮಿಯು ಮೂಲತಃ ಸರ್ಕಾರಿ ಹೆಚ್ಚುವರಿ ಭೂಮಿಯಾಗಿದೆ. ಪ್ರಸ್ತುತ ಚಾಲ್ತಿ ಪಹಣಿಯಲ್ಲಿ ಕರ್ನಾಟಕ ಸರ್ಕಾರವೆಂದು ಇದೆ. ಈ ಸರ್ಕಾರಿ ಭೂಮಿಯಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಅಭಿ ಕಾಮಗಾರಿ ಕೈಗೊಳ್ಳಲಾಗಿದೆ. ಆದರೆ, ಈ ಭೂಮಿಯನ್ನು ಕಬಳಿಸಲು ಕೆಲವರು ನಕಲಿ ದಾಖಲಾತಿಗಳನ್ನು ಸೃಷ್ಟಿಸಿಕೊಂಡು ತಾಲೂಕು ಆಡಳಿತ ಮತ್ತು ಅಧಿಕಾರಿಗಳನ್ನು ಗೊಂದಲಕ್ಕೀಡು ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಡಿ ಶೇಮಿಂಗ್ ತಮಾಷೆಯಲ್ಲ; ಮಾನಸಿಕ ಆರೋಗ್ಯದ ಮೇಲಾಗುವ ಮಾಯದ...

ದೇಹದ ಬಣ್ಣ, ರೂಪ, ತೂಕ-ಎತ್ತರ, ಮುಖ, ಕೂದಲು ಅಥವಾ ದೈಹಿಕ ವೈಶಿಷ್ಟ್ಯಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯನ್ನು ಹಾಸ್ಯ ಮಾಡುವುದು, ಅವಮಾನಿಸುವುದೇ ಬಾಡಿ ಶೇಮಿಂಗ್. ಇದು ಕೇವಲ ಆ ಕ್ಷಣದ ತಮಾಷೆಯ, ಹಾಸ್ಯ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

“ಬೂದಿವಾಳ ಕ್ಯಾಂಪಿನ ಆಂಧ್ರ ಮೂಲದ ವ್ಯಕ್ತಿಯೊಬ್ಬರು ಖಾಸಗಿ ಆಗ್ರಿಮೆಂಟ್ ಮಾಡಿಕೊಂಡು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಸಿಂಧನೂರು ತಹಶೀಲ್ದಾರರು ಸರಿಯಾದ ದಾಖಲಾತಿ ಸಲ್ಲಿಸಿದ್ದರೆ ಕೇಸ್ ವಜಾಗೊಳ್ಳುತ್ತಿತ್ತು. ಆದರೆ, ಅಧಿಕಾರಿಗಳು ಭೂಗಳ್ಳರೊಂದಿಗೆ ಶಾಮೀಲಾಗಿದ್ದರಿಂದ ಪ್ರಕರಣ ಕೋರ್ಟ್‌ನಲ್ಲಿ ಮುಂದುವರೆಯಲು ಕಾರಣವಾಗಿದೆ” ಎಂದು ದೂರಿದರು.

“ರೈತಸಂಘವು ಕಳೆದ 10 ವರ್ಷಗಳಿಂದ ಅನೇಕ ಸುತ್ತಿನ ಹೋರಾಟ ನಡೆಸಿದೆ. ಆದಾಗ್ಯೂ ಅಧಿಕಾರಿಗಳು ಕರ್ತವ್ಯ ದ್ರೋಹವೆಸಗಿದ್ದಾರೆ” ಎಂದು ಅವರು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ?: ಗ್ಯಾರಂಟಿ ಯೋಜನೆಗಳು ನನ್ನವು: ಜನಾರ್ದನ ರೆಡ್ಡಿ

“ರೌಡಕುಂದ ಗ್ರಾಮದ ಸರ್ವೆ ನಂ.244 ಸರ್ಕಾರಿ ಇನಾಮ್ ಭೂಮಿಗೆ ಸಂಬಂಧಿಸಿದ ದಾಖಲಾತಿಗಳನ್ನು ಗುಲ್ಬರ್ಗಾ ಹೈಕೋರ್ಟ್‌ಗೆ ಸಲ್ಲಿಸಿದ ಕಾರಣ 32 ಎಕರೆ ಭೂಮಿ ಗೊರೇಬಾಳ ಗ್ರಾಮದ ಸಿದ್ದರಾಮೇಶ ಸ್ವಾಮಿಯ ಪಾಲಾಗಿದೆ. ತಾಲೂಕಿನ ಹಲವು ಭೂ ಮಾಫಿಯಾಗಳು ಮತ್ತು ಬಲಿಷ್ಠರು ಸರ್ಕಾರಿ ಭೂಮಿಗೆ ನಕಲಿ ದಾಖಲಾತಿಗಳನ್ನು ಸೃಷ್ಟಿಸಿಕೊಂಡು ಕೋಟ್ಯಾಂತರ ಬೆಲೆ ಬಾಳುವ ನೂರಾರು ಎಕರೆ ಭೂಮಿಯನ್ನು ಕಬಳಿಸಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಧರಣಿ ಸ್ಥಳಕ್ಕೆ ತಹಶೀಲ್ದಾರ್ ಅರುಣ್ ಎಚ್‌.ದೇಸಾಯಿ ಭೇಟಿ ನೀಡಿದ್ದು, ಜಿಲ್ಲಾಧಿಕಾರಿ ಜೊತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟ ರೈತ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಬಿ.ಎನ್. ಯರದಿಹಾಳ, ತಾಲ್ಲೂಕು ಅಧ್ಯಕ್ಷ ರಮೇಶ ಪಾಟೀಲ್‌ ಬೇರಿಗಿ, ಉಪಾಧ್ಯಕ್ಷ ಚಿಟ್ಟಿಬಾಬು, ಮಸ್ಕಿ ತಾಲ್ಲೂಕು ಕಾರ್ಯದರ್ಶಿ ಮಹದ್ ಖಾಜಾ ಶೆಟ್ಟಿ, ಉಪಾಧ್ಯಕ್ಷ ಯಮನೂರಪ್ಪ, ಮುಖಂಡರಾದ ಎಂ.ಎಸ್.ರಾಜಶೇಖರ, ಲಿಂಗಪ್ಪ ಚಿಕ್ಕಬೇರಿಗಿ, ವೀರೇಶ ಬೇರಿಗಿ, ಅಂಬಮ್ಮ, ಯಲ್ಲಮ್ಮ, ಜಯಪ್ಪ, ನಾಗಮ್ಮ, ಹೊನ್ನಮ್ಮ, ಪೃಥ್ವಿರಾಜ, ಕಾಶಿ ವಿಶ್ವನಾಥ ಸೇರಿದಂತೆ ಅನೇಕರು ಭಾಗವಹಿಸಿದ್ದರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಶಾಲೆ ತೊರೆದ 413 ಎಸ್‌ಟಿ ವಿದ್ಯಾರ್ಥಿಗಳು; ವಿಶೇಷ ಕಾರ್ಯಪಡೆ ರಚನೆಗೆ ಒತ್ತಾಯ

ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಶಿಕ್ಷಣದ ಮುಖ್ಯವಾಹಿನಿಯಿಂದ ದೂರವಾಗುತ್ತಿರುವ ಆತಂಕಕಾರಿ ಬೆಳವಣಿಗೆ ಬೆಳಕಿಗೆ...

ರಾಯಚೂರು | ತಿಂಗಳೊಳಗೆ ಮೂವರು ದಲಿತರ ಹತ್ಯೆ: ದಲಿತಪರ ಹೋರಾಟಗಾರರ ಕಳವಳ

ರಾಯಚೂರು ಜಿಲ್ಲೆಯಲ್ಲಿ ಒಂದೇ ತಿಂಗಳ ಅವಧಿಯಲ್ಲಿ ಮೂವರು ದಲಿತರ ಹತ್ಯೆಯಾಗಿರುವುದು ಆತಂಕಕ್ಕೆ...

ರಾಯಚೂರು | ಹೊಕ್ರಾಣಿ ಅಶ್ವಿನಿ ಛಲವಾದಿ ಅತ್ಯಾಚಾರ-ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಸಿರವಾರ ತಾಲ್ಲೂಕಿನ ಹೊಕ್ರಾಣಿ ಗ್ರಾಮದ ಅಶ್ವಿನಿ ಛಲವಾದಿ ಅತ್ಯಾಚಾರ ಕೊಲೆ ಪ್ರಕರಣದಲ್ಲಿ...