ರಾಯಚೂರು | ವಿಚ್ಛೇದನ ಪ್ರಕರಣ; ರಾಜಿ ಸಂಧಾನದಿಂದ ಎಂಟು ಜೋಡಿಗಳ ಮರುಮದುವೆ

Date:

ಕೌಟುಂಬಿಕ ನ್ಯಾಯಾಲಯದಲ್ಲಿ ವಿವಾಹ ವಿಚ್ಛೇದನ ಪ್ರಕರಣಗಳ ಎಂಟು ಜೋಡಿಗಳು ರಾಜಿ ಸಂಧಾನದ ಮೂಲಕ ಸ್ವ ಇಚ್ಛೆಯಿಂದ ಪರಸ್ಪರ ಒಪ್ಪಿಕೊಂಡು ಹಾರ ಬದಲಾಯಿಸುವ ಮೂಲಕ ನ್ಯಾಯಾಲಯದ ಆವರಣದಲ್ಲಿ ಮರು ಮದುವೆಯಾದ ಕಾರ್ಯಕ್ರಮ ನಡೆಯಿತು ರಾಯಚೂರಿನಲ್ಲಿ ನಡೆಯಿತು.

ನಗರದ ಜಿಲ್ಲಾ ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕೌಟುಂಬಿಕ ನ್ಯಾಯಾಲಯದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಎಂಟು ಜೋಡಿಗಳಿಗೆ ರಾಜಿ ಸಂಧಾನದ ಮೂಲಕ ಮರು ಮದುವೆ ಮಾಡಿಸಿದರು.

ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಾರುತಿ ಬಗಾಡೆ ಮಾತನಾಡಿ, “ರಾಜಿಯಾಗಿ ಮರು ಮದುವೆಯಾಗಿರುವ ಜೋಡಿಗಳು ಯಾವುದೇ ಸಮಸ್ಯೆ ಬಂದರೂ ಸರಿಪಡಿಸಿಕೊಂಡು ಜೀವನ ಸಾಗಿಸಬೇಕು. ಹಲವು ಪ್ರಕರಣಗಳನ್ನು ಬಹಿರಂಗವಾಗಿ ರಾಜಿ ಸಂದಾನ ಮಾಡಿ ಪಾರದರ್ಶಕತೆಯಿಂದ 08 ಜೊಡಿಗಳು ಸ್ವ ಇಚ್ಛೆಯಿಂದ ಪರಸ್ಪರವಾಗಿ ಒಪ್ಪಿಕೊಂಡಿದ್ದು, ಸಂಸಾರದ ಜವಾಬ್ದಾರಿ ವಹಿಸಿಕೊಂಡು ಬದುಕಬೇಕು” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಎಲ್ಲರೂ ಯುವ ಜೋಡಿಗಳಾಗಿದ್ದು, ಕೆಲವರಿಗೆ ಮಕ್ಕಳಾಗಿವೆ. ಇನ್ನೂ ಕೆಲವರಿಗೆ ಮಕ್ಕಳಾಗಿಲ್ಲ. ಸಣ್ಣಪುಟ್ಟ ಭಿನ್ನಾಭಿಪ್ರಾಯದಿಂದ ಐದಾರು ವರ್ಷಗಳಿಂದ ದೂರವಿದ್ದು, ಕೌಟುಂಬಿಕ ನ್ಯಾಯಾಲಯದಲ್ಲಿ ಕೌಟುಂಬಿಕ ವ್ಯಾಜ್ಯ ಪರಿಹಾರ ಕೇಳಲು ಬಂದಿದ್ದಾರೆ” ಎಂದರು.

ನ್ಯಾಯಾಧೀಶರ ಪರಿಶ್ರಮದಿಂದ ಅವರ ಮನ ಪರಿವರ್ತಿಸಿ ಅವರಿಗೆ ಒಂದಾಗಿ ಹೋಗುವಂತೆ ಮನವರಿಕೆ ಮಾಡಲಾಗಿದೆ, ಇಂದು ಹಾರ ಬದಲಾಯಿಸಿಕೊಂಡು ಮರು ಮದುವೆ ಮಾಡಿಕೊಂಡಿದ್ದಾರೆ, ಮುಂದಿನ ದಿನಗಳಲ್ಲಿ ಯಾವುದೇ ಸಮಸ್ಯೆ ಬಂದಲ್ಲಿ ಸರಿಪಡಿಸಿಕೊಂಡು ಹೋಗಬೇಕು ಎಂದು ತಿಳಿಸಿದರು.

“ಜೋಡಿಗಳು ತಮ್ಮ ಮನವೊಲಿಸಿಕೊಳ್ಳಬೇಕು, ಅವಿದ್ಯಾವಂತರು ಹೊಂದಾಣಿಕೆ ಮಾಡಿಕೊಂಡು ಹೋಗುತ್ತಾರೆ. ವಿದ್ಯಾವಂತರಿಬ್ಬರಲ್ಲಿ ಸ್ವಪ್ರತಿಷ್ಠೆ ತೆಗೆದುಕೊಂಡು ಬೇರೆ ಬೇರೆಯಾಗಿದ್ದರಿಂದ ಇಬ್ಬರಿಗೆ ಹೆಚ್ಚಾಗಿ ಮನವರಿಕೆ ಮಾಡಿಕೊಡಲಾಗುವುದು, ನ್ಯಾಯಾಲಯದ ತೀರ್ಪುಗಳು ಏನೆ ಇದ್ದರೂ ಅದು ಮನಸ್ಸಿಗೆ ತಾಗುವಂತಿದ್ದರೆ ಮಾತ್ರ ಫಲ ಕೊಡುತ್ತದೆ. ಇಲ್ಲದಿದ್ದರೆ ಮುಂದಿನ ನ್ಯಾಯಾಲಯದವರೆಗೆ ಹೋಗುತ್ತದೆ” ಎಂದರು.

ಕುಟುಂಬ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ವರ ಮಾತನಾಡಿ, “ಎಂಟು ಜೋಡಿಗಳಲ್ಲಿ ಒಂದು ಜೋಡಿಗೆ 10 ವರ್ಷಗಳ ಹಿಂದೆ ಮದುವೆ ನಡೆದಿತ್ತು. ಇದೀಗ ಇತ್ಯರ್ಥ ಪಡಿಸಲಾಗಿದೆ. ಎರಡು ತಿಂಗಳ ಹಿಂದಿನ ಪ್ರಕರಣ ರಾಜಿ ಸಂಧಾನ ಮಾಡಿಸಲಾಗಿದ್ದು, ಮನವೊಲಿಸಿ ತಿಳಿ ಹೇಳಲಾಗಿದೆ. ಎಂಟು ಜೋಡಿಗಳ ಕುರಿತು ಮತ್ತೆ 15 ದಿನಗಳ ನಂತರ ಕರೆಸಿ ಜೀವನ ಹೇಗಿದೆ ಎಂಬುದನ್ನು ತಿಳಿದುಕೊಳ್ಳಲಾಗುತ್ತದೆ. ಸಣ್ಣಪುಟ್ಟ ಸಮಸ್ಯೆಗಳ ಬಗ್ಗೆ ಮಾರ್ಗದರ್ಶನ ನೀಡಲಾಗುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ದೂರು ನೀಡಲು ಹೋದ ವಕೀಲರನ್ನೇ ಸೆಲ್ ಒಳಗೆ ಹಾಕಿದ ಪೊಲೀಸರು

ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ದಯಾನಂದ ಸೇರಿದಂತೆ ನ್ಯಾಯಾಧೀಶರು ಹಾಗೂ ವಕೀಲರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಹಂಚಿಕೆಗೆ ಲಭ್ಯವಿರುವ ಭೂಮಿಯ ವಿವರ ಪ್ರಕಟಿಸಿ: ಕಂದಾಯ ಇಲಾಖೆಗೆ ರೈತ ಸಂಘ ಒತ್ತಾಯ

ಕರ್ನಾಟಕ ಭೂ ಮಂಜೂರಾತಿಗೆ ನಿಯಮಗಳ ಅಡಿಯಲ್ಲಿ ರಾಯಚೂರು ತಾಲೂಕಿನಲ್ಲಿ ಹಂಚಿಕೆಗೆ ಲಭ್ಯವಿರುವ...

ರಾಯಚೂರು | ಕಲ್ಲೂರು ಗ್ರಾಮಕ್ಕೆ ದಾಳಿ ನಡೆಸಿ ಮೇಕೆ ತಿಂದ ಚಿರತೆ; ಜನರಲ್ಲಿ ಆತಂಕ

ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕಲ್ಲೂರು ಗ್ರಾಮಕ್ಕೆ ದಾಳಿ ನಡೆಸಿರುವ ಚಿರತೆಗಳು,...

ರಾಯಚೂರು | ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ವಿರೋಧಿಸಿ ರೈತರು ಧರಣಿ

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ...

ರಾಯಚೂರು | ರೈತರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ: ರೈತ ಮುಖಂಡ ಚಾಮರಸ ಮಾಲೀ ಪಾಟೀಲ್

"ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ, ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಹಗರಣಗಳ...