ರಾಯಚೂರು | 15 ಮಂದಿ ಮೇಲೆ ನಾಯಿ ದಾಳಿ

Date:

Advertisements

ನಾಯಿ ಕಡಿದು 15 ಮಂದಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ನಡೆದಿದೆ.

ಮೇದಿನಾಪುರ ಗ್ರಾಮಕ್ಕೆ ತೆರಳುತ್ತಿದ್ದವರ ಮೇಲೆರಗಿದ ನಾಯಿ 15 ಮಂದಿಗೆ ಕಚ್ಚಿದೆ. ನಾಯಿ ಕಡಿತಕ್ಕೆ ತುತ್ತಾದ ಗಾಯಾಳುಗಳು ಹಟ್ಟಿ ಚಿನ್ನದ ಗಣಿ ಆಸ್ಪತ್ರೆ ಹಾಗೂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಟ್ಟಿಯಲ್ಲಿ ನಾಯಿ ಕಾಟ ಹೆಚ್ಚಾಗಿದ್ದು, ಸಾರ್ವಜನಿಕರು ಅನಗತ್ಯವಾಗಿ ತಿರುಗಾಡದಂತೆ ಧ್ವನಿ ವರ್ಧಕದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisements

ಹುಚ್ಚು ನಾಯಿ ಸೆರೆ ಹಿಡಿಯುವವರೆಗೂ ಮನೆಯಿಂದ ಚಿಕ್ಕ ಮಕ್ಕಳು ಹೊರಗಡೆ ಬರದಂತೆ ನೋಡಿಕೊಳ್ಳಬೇಕು ಎಂದು ಪಾಲಕರಲ್ಲಿ ಪೊಲೀಸರು ಮನವಿ ಮಾಡಿದ್ದಾರೆ.

ಈ ನಡುವೆ, ಸಾರ್ವಜನಿಕರು ನಾಯಿಯನ್ನು ಹುಡುಕಿ ಕೊಂದಿದ್ದಾರೆ. ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಳವಾಗಿರುವ ಕುರಿತು ಹಲವು ಬಾರಿ ದೂರು ನೀಡಿದರೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನವಜಾತ ಶಿಶುವನ್ನು ರಸ್ತೆ ಬದಿ ಬಿಟ್ಟು ಹೋದ ಪೋಷಕರು!

ರಾಯಚೂರು ತಾಲೂಕಿನ ಕಲ್ಮಲಾ ಗ್ರಾಮದ ಕಲ್ಲೂರು ರಸ್ತೆಯ ಬಳಿಯಲ್ಲಿ ಇಂದು ಹೃದಯವಿದ್ರಾವಕ...

ರಾಯಚೂರು | ಗ್ರಾಮವನ್ನು ಪಟ್ಟಣ ಪಂಚಾಯತ್ ಮೇಲ್ದರ್ಜೆಗೆ ಏರಿಸಬಾರದು : ಗ್ರಾಮಸ್ಥರ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕಿನ ಗುರುಗುಂಟ ಗ್ರಾಮವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆರಿಸಬಾರದು ಎಂದು ರಾಜ್ಯ...

ರಾಯಚೂರು | ಶೀಲಹಳ್ಳಿ ಸೇತುವೆ ಮುಳುಗಡೆ : ನಾಲ್ಕು ಗ್ರಾಮಕ್ಕೆ ಸಂಪರ್ಕ ಕಡಿತ

ಲಿಂಗಸುಗೂರು ತಾಲ್ಲೂಕಿನ ಶೀಲಹಳ್ಳಿ ಸೇತುವೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಮುಳುಗಿದ್ದು,...

ರಾಯಚೂರು | ನಿರಂತರ ಮಳೆ : ಸೂರ್ಯಕಾಂತಿ ಬೆಳೆಗೆ ಕೀಟ ಬಾಧೆ

ಜಿಲ್ಲೆಯಲ್ಲಿ ನಿರಂತರ ವಾರದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಸೂರ್ಯಕಾಂತಿ ಬೆಳೆಗಾರರ...

Download Eedina App Android / iOS

X