ರಾಯಚೂರು | ಸರ್ಕಾರಿ ಪ್ರೌಢಶಾಲೆಗೆ ಮೀಸಲಿಟ್ಟ ಜಾಗ ಒತ್ತುವರಿ; ತೆರವಿಗೆ ಆಗ್ರಹ

Date:

Advertisements

ಸರ್ಕಾರಿ ಪ್ರೌಢಶಾಲೆಗೆ ಮೀಸಲಿಟ್ಟಿದ್ದ ಜಾಗವನ್ನು ಅತಿಕ್ರಮಣ ಮಾಡಿರುವುದನ್ನು ಕೂಡಲೇ ತೆರವುಗೊಳಿಸಬೇಕು ಎಂದು ಆಲ್ ಇಂಡಿಯಾ ರಾಹುಲ್‌ ಗಾಂಧಿ ಬ್ರಿಗ್ರೇಡ್ ರಾಯಚೂರು ಜಿಲ್ಲಾ ಕಾರ್ಯದರ್ಶಿ ಅಂಬಾಜಿ ಮೈದರಕರ ಹೇಳಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “ನಗರದ ವಾರ್ಡ 28ರ ಸರ್ವೇ 384/1ಎ ಸಿಎ ನಿವೇಶನ ಸರ್ಕಾರಿ ಪ್ರೌಢಶಾಲೆಗೆ ಮೀಸಲಿಟ್ಟ ಜಾಗವನ್ನು ಒತ್ತುವರಿ ಮಾಡಿ ದೇವಸ್ಥಾನ ನಿರ್ಮಾಣ ಮಾಡಿದ್ದು, 15 ದಿನಗಳಲ್ಲಿ ತೆರವುಗೊಳಿಸದೇ ಹೋದಲ್ಲಿ ನಗರಸಭೆ ಮುಂದೆ ಹೋರಾಟ ನಡೆಸಲಾಗುವುದು” ಎಂದರು.

“ಎಲ್‌ಬಿಎಸ್ ನಗರದ ಸರ್ಕಾರಿ ಪ್ರೌಢಶಾಲೆಗೆ ಕಾಯ್ದಿರಿಸಿದ ಸ್ಥಳದಲ್ಲಿ ಅನಧಿಕೃತವಾಗಿ ಸಂತೋಷ ನಗರ ವಸತಿ ಬಡವಾಣೆಯ ಜಾಗದಲ್ಲಿ ದೇವಸ್ಥಾನ ನಿರ್ಮಾಣ ಮಾಡಲಾಗಿದೆ. ಈಗಾಗಲೇ ಅನೇಕ ಸಂಘಟನೆಗಳು ಶಾಸಕರು, ನಗರಸಭೆ, ಆರ್‌ಡಿಎಗೆ ಮನವಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ನಗರ ಶಾಸಕರು ತೆರವುಗೊಳಿಸುವದಾಗಿ ಹೇಳಿ ಮಾತು ಮರೆತಿದ್ದಾರೆ” ಎಂದು ಆರೋಪಿಸಿದರು.

Advertisements

“ದೇವರ ಹೆಸರಿನಲ್ಲಿ ಸರ್ಕಾರಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಅಡ್ಡಿ ಉಂಟು ಮಾಡಲಾಗುತ್ತಿದೆ. ಸರ್ಕಾರಿ ಶಾಲೆಗಳು ಮಕ್ಕಳ ಸಂಖ್ಯೆ ಇಲ್ಲದೇ ಮುಚ್ಚುತ್ತಿರುವಾಗ ಇರುವ ಶಾಲೆಗೆ ಕಾಯ್ದಿರಿಸಿದ ಸ್ಥಳ ಅತಿಕ್ರಮಣವಾದರೂ ನಗರಸಭೆ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ. ಕೂಡಲೇ ತೆರವುಗೊಳಿಸಿ ಶಾಲೆ ನಿವೇಶನ ಸರಹದ್ದು ನಿಗದಿಪಡಿಸಬೇಕು. ಇಲ್ಲದಿದ್ದಲ್ಲಿ ತೀವ್ರ ಪ್ರತಿಭಟನೆ ನಡೆಸಲಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮುಟ್ಟಿನ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಕೆಲಸವಾಗಬೇಕು: ಸಿಇಒ

ಈ ಸಂದರ್ಭದಲ್ಲಿ ನಗರ ಅಧ್ಯಕ್ಷ ಸಿದ್ದಲಿಂಗಯ್ಯ ಇಷಾನ ಅಹ್ಮದ್, ಮೋಸಿನ್ ಖಾನ್, ಅಮೀರ್  ಇದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X