ರಾಯಚೂರು | ಸಿಂಧನೂರು ತಾಲೂಕನ್ನು ಬರಗಾಲವೆಂದು ಘೋಷಿಸುವಂತೆ ರೈತರ ಆಗ್ರಹ

Date:

Advertisements

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕನ್ನು ಬರಗಾಲವೆಂದು ಘೋಷಣೆ ಮಾಡುವುದರ ಜೊತೆಗೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.

“ಸಿಂಧನೂರು ತಾಲೂಕು ನೀರಾವರಿ ಎಂದು ಭಾವಿಸಿ ಬರಗಾಲ ಘೋಷಣೆ ಮಾಡಿಲ್ಲ. ಸಮಗ್ರ ನೀರಾವರಿಗೆ ಸಿಂಧನೂರು ತಾಲೂಕು ಒಳಪಟ್ಟಿಲ್ಲ. 1.60 ಲಕ್ಷ ಎಕರೆ ಪ್ರದೇಶದಲ್ಲಿ ಬಿತ್ತನೆ ಕಾರ್ಯ ನಡೆದಿದ್ದು, 80 ಸಾವಿರ ಎಕರೆ ಪ್ರದೇಶ ಮಾತ್ರ ನೀರಾವರಿಗೆ ಒಳಪಟ್ಟಿದೆ. 40 ಸಾವಿರ ಎಕರೆ ಟೆಲೆಂಡ್ ಆಗಿದೆ. ಇದರಿಂದ ರೈತರು ಸಾಕಷ್ಟು ನಷ್ಟ ಅನುಭವಿಸಿದ್ದಾರೆ” ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

“ಸಿಂಧನೂರು ತಾಲೂಕನ್ನು ಬರಗಾಲವೆಂದು ಘೋಷಣೆ ಮಾಡಬೇಕು. ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ ರೈತರು ಸಾಲ ಕಟ್ಟದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಪರಿಹಾರ ನೀಡಬೇಕು. ರೈತರ ಸಾಲವನ್ನು ಮನ್ನಾ ಮಾಡಬೇಕು. ಬರಗಾಲ ಘೋಷಣೆಯಲ್ಲಿ ಭತ್ತ ಬೆಳೆಯನ್ನು ಪರಿಗಣಿಸಿಲ್ಲ. ಭತ್ತವೂ ನಷ್ಟವಾಗಿರುವುದರಿಂದ ಪರಿಗಣಿಸಬೇಕು” ಎಂದು ಒತ್ತಾಯಿಸಿದರು.

Advertisements

“ಮಹಿಳೆಯರ ಗುಂಪಿನ ಸಾಲ ಮನ್ನಾ ಮಾಡಬೇಕು, ಬೆಳೆಗಳ ತಾರತಮ್ಯ ಮಾಡದೇ ಸಂಪೂರ್ಣ ಎಲ್ಲ ಬೆಳೆಗಳನ್ನು ಪರಿಗಣಿಸಬೇಕು, ಮನರೇಗಾದಡಿ 200 ದಿನಗಳ ಮಾನವ ಕೆಲಸ ನೀಡಬೇಕು, ಕೃಷಿ ಪಂಪ್ ಸೆಟ್‌ಗಳಿಗೆ 18 ಗಂಟೆ ವಿದ್ಯುತ್ ಸರಬರಾಜು ಮಾಡಬೇಕು, ರೈತರ ಐಪಿ ಸೆಟ್‌ಗಳ ಆರ್‌ಆರ್ ನಂಬರ್‌ಗಳಿಗೆ ಆಧಾರ ನಂಬರ್ ಜೋಡಣೆ ರದ್ದುಪಡಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಭದ್ರಾ ಬಲದಂಡೆ ನಾಲೆಗೆ ನೀರು ಹರಿಸಲು ಆಗ್ರಹ

ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಮಿನ್ ಪಾಷಾ ದಿದ್ದಗಿ, ರೈತ ಮುಖಂಡ ಲಕ್ಷ್ಮಣ ಗೌಡ ಕಡಗಂದೊಡ್ಡಿ, ಸಿ‌ ಎಚ್ ರವಿಕುಮಾರ್, ವೆಂಕಟೇಶ ರಾಜಲಬಂಡಾ, ಬಸವರಾಜ ಹಂಚಿನಾಳ, ಬಡೆಸಾಬ್, ರಮೇಶ, ಶಂಕರ, ಹುಲಿಗಪ್ಪ ಜಾಲಿಬೆಂಚಿ, ಬಸವರಾಜ ಸೇರಿದಂತೆ ಇತರರು ಇದ್ದರು.

ಸಿಟಿಜನ್ ಜರ್ನಲಿಸ್ಟ್ : ಹಫೀಜುಲ್ಲ ರಾಯಚೂರು.
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X