ರಾಯಚೂರು | ನವೋದಯ ಕಾಲೇಜು ಬಳಿ ಅಕ್ರಮ ಅಂಗಡಿಗಳ ತೆರವು; ಪಾಲಿಕೆಯ ಕಟ್ಟುನಿಟ್ಟಿನ ಕ್ರಮ

Date:

ನಗರದ ನವೋದಯ ಕಾಲೇಜುಗಳ ಅನಧೀಕೃತವಾಗಿ ಹಾಕಲಾಗಿದ್ದ ಹೋಟೆಲ್‌ಗಳು, ಅಂಗಡಿಗಳು ಸೇರಿದಂತೆ 20 ಕ್ಕೂ ಹೆಚ್ಚು ಅಂಗಡಿಗಳನ್ನು ಮಹಾನಗರ ಪಾಲಿಕೆಯಿಂದ ಜೆಸಿಬಿಗಳಿಂದ ತೆರವುಗೊಳಿಸಲಾಯಿತು.

- Advertisement -

ಕಳೆದ ಅನೇಕ ವರ್ಷಗಳಿಂದ ರಸ್ತೆಯ ಬದಿಯಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಹಾಕಿಕೊಂಡು ವ್ಯವಹರಿಸಲಾಗುತ್ತಿತ್ತು ಆದರೂ ಅನೇಕ ಬಾರಿ ಪಾಲಿಕೆ ತೆರವುಗೊಳಿಸಲು ನೋಟಿಸ್ ಸಹ ನೀಡಿದರು ಮಾನಸ ನಗರ ಸೇರಿದಂತೆ ಅನೇಕ ಬಡಾವಣೆಗಳಲ್ಲಿ ಜನವಾಸ ಮಾಡುತ್ತಿದ್ದು ಬಡಾವಣೆಗೆ ತೆರಳಲು ಸಹ ಸಮಸ್ಯೆಯಾಗಿತ್ತು. ಈ ವಿಷಯವು ಅತಿಕ್ರಮಿತ ಅಂಗಡಿಗಳನ್ನು ತೆರವುಗೊಳಿಸುವ ಕುರಿತಂತೆ ಹೈಕೋರ್ಟನಲ್ಲಿ ಸಹಪ್ರಕರಣ ವಿಚಾರಣೆ ಮುಂದುವರೆದಿತ್ತು. ಹೈಕೋರ್ಟ ಆದೇಶ ಹಾಗೂ ಜನಸಂಚಾರಕ್ಕೆ ಆಗುತ್ತಿರುವ ಅಡ್ಡಿಯ ಹಿನ್ನಲೆಯಲ್ಲಿ ಇಂದು ಪಾಲಿಕೆ ಅಧಿಕಾರಿಗಳು ತೆರಳಿ ಅಂಗಡಿಗಳನ್ನು ತೆರವುಗೊಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕೆಲ ದಿನಗಳ ಹಿಂದೆಯಷ್ಟ ಜನದಟ್ಟಣೆಯಿಂದ ರಸ್ತೆಯಲ್ಲಿ ಅಪಘಾತಗಳು ಸಹ ಸಂಭವಿಸಿದ್ದವು. ಹೆದ್ದಾರಿ ರಸ್ತೆಗೆ ಹೊಂದಿಕೊಂಡಿರುವಂತೆ ಹಾಕಲಾಗಿರುವ ಅಂಗಡಿಗಳ ಕೆಲವರು ನಕಲಿ ದಾಖಲೆ ಸೃಷ್ಟಿಸಿ ಖಾಯಂ ಸ್ವರೂಪ ಕಟ್ಟಡಗಳನ್ನು ನಿರ್ಮಾಣ ಮಾಡಲು ಮುಂದಾಗಿದ್ದರು . ಪೊಲೀಸ್ ಇಲಾಖೆ ಹಾಗೂ ಹೈಕೋರ್ಟ ಆದೇಶದ ಮೇರೆಗೆ ತೆರವು ಕಾರ್ಯಚರಣೆ ಮುಂದುವರೆಸಲಾಯಿತು. ಅನೇಕ ವ್ಯಾಪಾರಸ್ಥರು ಪಾಲಿಕೆ ಕ್ರಮಕ್ಕೆ ವಿರೋಧಿಸಿ ಕಾಲಾವಕಾಶ ನೀಡಬೇಕೆಂದು ವಾದಿಸಿದರು. ಆದರೆ ಅಧಿಕಾರಿಗಳು ಅವಕಾಶ ನೀಡದೇ ತೆರವುಗೊಳಿಸಿದರು.

ಬಡಾವಣೆ ಮುಖಂಡ ರವೀಂದ್ರ ಜಲ್ದಾರ ಮಾತನಾಡಿ, ಅನೇಕ ವರ್ಷಗಳಿಂದ ಅನಧಿಕೃತ ಅಂಗಡಿಗಳನ್ನು ಹಾಕಿರುವ ಕುರಿತು ನಿವಾಸಿಗಳು ಹೈಕೋರ್ಟನಲ್ಲಿ ದೂರು ದಾಖಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ ಆದೇಶದ ಮೇರೆಗೆ ತೆರವು ಕಾರ್ಯ ನಡೆಸಿರುವದು ಸ್ವಾಗತಾರ್ಹವಾಗಿದೆ. ನಗರಸಭೆ ಹಾಗೂ ಮಹಾನಗರ ಪಾಲಿಕೆಯಾದ ನಂತರವೂ ಅನೇಕ ಬಾರಿ ನೋಟಿಸ್ ಸಹ ನೀಡಲಾಗಿತ್ತು. ನಕಲಿ ದಾಖಲೆ ಸೃಷ್ಟಿಸಿರುವ ದೂರುಗಳು ಸಹ ಇವೆ. ಪಾಲಿಕೆ ಆಯುಕ್ತ ಜೋಬಿನ್ ಮಹೋಪಾತ್ರ ಇವರು ತೆರವಿಗೆ ಆದೇಶ ಹೊರಡಿಸಿದ್ದಾರೆ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ; ಕನ್ನಡ ಸೇನೆ ಆಗ್ರಹ

ತೆರವು ಕಾರ್ಯ ನಡೆಸಲಾಗಿದೆ. ರಸ್ತೆ ಬದಿಯಲ್ಲಿ ಅಂಗಡಿಗಳ ವ್ಯವಹರಿಸುತ್ತಿರುವ ಪರಿಣಾಮ ಮೂರು ಜನ ಸಾವು ಸಂಭವಿಸಿತ್ತು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಸಹ ತೆರವಿಗೆ ಸೂಚನೆ ನೀಡಿದ್ದರು ಎಂದರು. ನೇತಾಜಿ ನಗರ ಪೊಲೀಸರ ಬಂದೋಬಸ್ತನಲ್ಲಿ ತೆರವು ಕಾರ್ಯಚರಣೆ ನಡೆಸಲಾಯಿತು. ಅನಧಿಕೃತವಾಗಿರುವ ಕಟ್ಟಡಗಳು ಹಾಗೂ ರಸ್ತೆ ಅತಿಕ್ರಮಿತ ಪ್ರದೇಶಗಳನ್ನು ತೆರವುಗೊಳಿಸುವ ಕಾರ್ಯಚರಣೆ ಮುಂದುವರೆಸಲಾಗುತ್ತದೆ ಎಂದು ಪಾಲಿಕೆ ಸಿಬ್ಬಂದಿಗಳು ಹೇಳಿದರು. ವ್ಯಾಪಾರಸ್ಥರು ಅಂಗಡಿಗಳ ತೆರವಿನಿಂದ ಹಿನ್ನಲೆಯಲ್ಲಿ ಕಂಗಾಲಾಗುವಂತಾಯಿತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥ ಆರೋಪ: ಡಿಸಿ ನಿವಾಸದ ಮುಂದೆ ಪ್ರತಿಭಟನೆ

ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥಗೊಂಡಿದ್ದಾಳೆ ಎಂದು ಆರೋಪಿಸಿ ಕುಟುಂಬಸ್ಥರು ಜಿಲ್ಲಾಧಿಕಾರಿ ನಿವಾಸದ...

ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು: ಇಬ್ಬರು ಸಾವು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು,...

ಹಾವೇರಿ | ರದ್ದು ಪಡಿಸಿದ ಎಂಟು ಕೊರ್ಸಗಳನ್ನು  ಮುಂದುವರೆಸುವಂತೆ ಅತಿಥಿ ಉಪನ್ಯಾಸಕರ ಧರಣಿಗೆ ಡಿವೈಎಫ್ಐ-ಎಸ್ಎಫ್ಐ ಬೆಂಬಲಿಸಿ ಪ್ರತಿಭಟನೆ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಪಡಿಸಿದ ಎಂಟು ಕೋರ್ಸ್ ಗಳು ಮುಚ್ಚದೇ ಮುಂದುವರೆಸುವಂತೆ...

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...