ರಾಯಚೂರು | ಬಾಲಕರ ಸರ್ಕಾರಿ ಪಿಯು ಕಾಲೇಜಿನಲ್ಲಿ ಮೇಲ್ಛಾವಣಿ ಕುಸಿತ: ತಪ್ಪಿದ ಭಾರೀ ಅನಾಹುತ

Date:

ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಕಟ್ಟಡದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಕೂದಲೆಳೆ ಅಂಚಿನಲ್ಲಿ ವಿದ್ಯಾರ್ಥಿಗಳು ಪ್ರಾಣಪಾಯದಿಂದ ಪಾರಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.

- Advertisement -

ನಗರದ ಹಳೆಯ ಡಿಡಿಪಿಐ ಕಚೇರಿ ಹಿಂಭಾಗದಲ್ಲಿರುವ ಬಾಲಕರ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ವಾಣಿಜ್ಯ ವಿಭಾಗದ ಕೊಠಡಿಯಲ್ಲಿ ಬೆಳಿಗ್ಗೆ 10 ಗಂಟೆ ಸುಮಾರು ವಿದ್ಯಾರ್ಥಿಗಳು ಪಾಠ ಕೇಳುವ ಸಂದರ್ಭದಲ್ಲಿ ಏಕಾಏಕಿ ಪದರ ಉದುರಿದ್ದು, ವಿದ್ಯಾರ್ಥಿಗಳು ಭಯಭೀತರಾಗಿ ಹೊರ ಬಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕಟ್ಟಡವನ್ನು ಹೈದ್ರಾಬಾದ್ ಕರ್ನಾಟಕ ಅಭಿವೃದ್ಧಿ ಅಡಿಯಲ್ಲಿ 1996ರ ಆ.15ರಂದು ನಿರ್ಮಿಸಲಾಗಿದ್ದು, ಅಂದಿನ ಜವಳಿ ಖಾತೆ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಎಂ.ಎಸ್.ಪಾಟೀಲ್ ಅವರು ಈ ಕಟ್ಟಡದ ಉದ್ಘಾಟನಾ ಕಾರ್ಯವನ್ನು ನೆರವೇರಿಸಿದ್ದರು.
ಸುಮಾರು 30 ವರ್ಷಗಳ ಹಳೆಯ ಕಟ್ಟಡ ಇದಾಗಿದ್ದು, ಕೆಲವು ವರ್ಷಗಳಿಂದ ಕಟ್ಟಡ ಶಿಥಿಲಾವಸ್ಥೆಗೆ ತಲುಪಿತ್ತು. ಈ ಕುರಿತು ಕಾಲೇಜಿನ ಪ್ರಾಚಾರ್ಯರು ಹಲವು ಬಾರಿ ಶಿಕ್ಷಣ ಇಲಾಖೆ, ಜಿಲ್ಲಾಧಿಕಾರಿಗಳು ಹಾಗೂ ಶಾಸಕರಿಗೆ, ಸಚಿವರಿಗೆ ಹೊಸ ಕಟ್ಟಡ ನಿರ್ಮಾಣ ಮಾಡುವ ಕುರಿತು ಪ್ರಸ್ತಾವನೆಯನ್ನು ಕಳಿಸುತ್ತಾ ಬಂದಿದ್ದು, ಆದರೆ ಈವರೆಗೂ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿಲ್ಲ.

ಇದೇ ಕಟ್ಟಡದ ಹಿಂಬದಿಯಲ್ಲಿ ಹೊಸ ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಆದರೆ ಹಳೆಯ ಕಟ್ಟಡಗಳು ತೀರ ದುರಸ್ತಿಗೆ ಬಂದಿದ್ದು, ಎಲ್ಲಾ ಕೊಠಡಿಗಳಲ್ಲಿಯೂ ಛತ್ತಿನ ಪದರಗಳು ಈಗೋ ಆಗಲೋ ಬೀಳುವಂತ ಸ್ಥಿತಿಯಲ್ಲಿವೆ. ಪ್ರಾಧ್ಯಾಪಕರು ಪಾಠದ ಕಡೆಗೆ ಗಮನಹರಿಸುವುದಕ್ಕಿಂತ ತಲೆಯ ಮೇಲೆ ಯಾವ ಸಂದರ್ಭದಲ್ಲಿ ಛತ್ತು ಬೀಳುತ್ತದೆಯೋ ಎಂಬ ಭಯದಲ್ಲಿ ಪಾಠ ಕೇಳುವುದು ಮತ್ತು ಉಪನ್ಯಾಸ ನೀಡುವಂತಾಗಿದೆ.
ಈಗಲಾದರೂ ಜನಪ್ರತಿನಿಧಿಗಳು, ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆ ಹೊಸ ಕಟ್ಟಡ ಮಂಜೂರು ಮಾಡುವರೇ ಎಂಬುವುದನ್ನು ಕಾದು ನೋಡಬೇಕಾಗಿದೆ.


ಸ್ಥಳಕ್ಕೆ ತಹಸೀಲ್ದಾರ್ ಭೇಟಿ : ಕಟ್ಟಡದ ಮೇಲ್ಛಾವಣಿ ಉದುರಿ ಬಿದ್ದ ಘಟನೆ ಮಾಹಿತಿ ಪಡೆದ ತಹಶೀಲ್ದಾರ್ ಸುರೇಶ ವರ್ಮಾ ಕಾಲೇಜಿಗೆ ಭೇಟಿ ನೀಡಿ ತರಗತಿಗಳ ಕೊಠಡಿ ಪರಿಶೀಲನೆ ನಡೆಸಿದರು. ಈ ಕುರಿತಂತೆ ವರದಿ ಸಲ್ಲಿಸುವಂತೆ ಸ್ಥಳದಲ್ಲಿದ್ದ ಪಿಡಬ್ಲ್ಯೂಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ದೇವದುರ್ಗ | ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ

ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕರಿಸಿ ಧಿಡೀರ್ ಪ್ರತಿಭಟನೆ: ತರಗತಿಯಲ್ಲಿ ಛತ್ತು ಉದುರಿ ನಡೆದ ಅಪಘಾತವನ್ನು ಖಂಡಿಸಿ, ಕಾಲೇಜು ವಿದ್ಯಾರ್ಥಿಗಳು ತರಗತಿಯನ್ನು ಬಹಿಷ್ಕರಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾಡಳಿತ, ಶಿಕ್ಷಣ ಇಲಾಖೆಯ ವಿರುದ್ಧ ಧಿಡೀರ್ ಪ್ರತಿಭಟನೆ ನಡೆಸಿದರು. ಹೊಸ ಕೊಠಡಿಗಳ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...