ಸೆಪ್ಟೆಂಬರ್ ಮಳೆಗಾಲ ಮುಕ್ತಾಯವಾಗಿ, ಅಕ್ಟೋಬರ್ನಲ್ಲಿ ಚಳಿಗಾಲ ಆರಂಭವಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ ವಾತಾವರಣ ಭಿನ್ನ ಅನುಭವ ನೀಡುತ್ತಿದೆ. ಜಿಲ್ಲೆಯಲ್ಲಿ ಮಳೆಯ ವಾತಾವರಣಕ್ಕಿಂತ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್ ದಾಟಿದೆ. ಜಿಲ್ಲೆಯಲ್ಲೇ ಅತ್ಯಧಿಕ 37.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಸೆಪ್ಟೆಂಬರ್ ತಿಂಗಳಲ್ಲಿಯೇ ತಾಪಮಾನ ಏರಿಕೆಯಾಗಿರುವುದು ಜನರಲ್ಲಿ ಅಚ್ಚರಿ ಮೂಡಿಸಿದೆ. ಬೆಳಗ್ಗೆಯಿಂದಲೇ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದು, ಮಧ್ಯಾಹ್ನದ ವೇಳೆಗೆ ಹೊರಗೆ ಸಂಚರಿಸುವವರು ತೀವ್ರ ಬಿಸಿಯ ಅನುಭವ ಎದುರಿಸುವಂತಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್
ಮಳೆಗಾಲ ಮುಕ್ತಾಯದ ಹಂತದಲ್ಲಿದ್ದರೂ ಉಷ್ಣಾಂಶದಲ್ಲಿ ಇಳಿಕೆಯಾಗದಿರುವುದು ಜಿಲ್ಲೆಯಲ್ಲಿ ಗಮನ ಸೆಳೆದಿದೆ.




